Advertisement
MIRROR FOCUS

ಕಳಪೆ ಅಡಿಕೆ ದಾಸ್ತಾನು ಶಂಕೆ – ನಾಗಪುರದಲ್ಲಿ 10 ವ್ಯಾಪಾರಿಗಳ ಗೋದಾಮು ಮೇಲೆ ದಾಳಿ | ₹4 ಕೋಟಿ ಮೌಲ್ಯದ ಅಡಿಕೆ ಜಪ್ತಿ

Share

ಇಂಡೋನೇಷಿಯಾದಿಂದ ಭಾರತಕ್ಕೆ ಆಮದು ಮಾಡಲಾದ ಕಳಪೆ ಗುಣಮಟ್ಟದ ಅಡಿಕೆಯನ್ನು ನಿಯಮ ಉಲ್ಲಂಘನೆ ಮಾಡಿ ಹಾಗೂ ಕಳಪೆ ಗುಣಮಟ್ಟದ  ಶಂಕೆಯ ಹಿನ್ನೆಲೆಯಲ್ಲಿ ನಾಗಪುರದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ದೈನಿಕ್‌ ಭಾಸ್ಕರ್‌ ವರದಿ ಮಾಡಿದೆ.

Advertisement

ಭಾರತದ ಕಂದಾಯ ಗುಪ್ತಚರ ನಿರ್ದೇಶಾಲಯ (DRI) ಮತ್ತು ಆದಾಯ ತೆರಿಗೆ ಇಲಾಖೆಯ ತನಿಖೆಯ ಮುಂದುವರಿದ ಭಾಗವಾಗಿ ಮಹಾರಾಷ್ಟ್ರದ  ಆಹಾರ ಮತ್ತು ಔಷಧಿ ಆಡಳಿತ (FDA) ತಂಡವು ನಾಗಪುರದ ವಿವಿಧ ಪ್ರದೇಶಗಳಲ್ಲಿ 10 ಅಡಿಕೆ ವ್ಯಾಪಾರಿಗಳ ಗೋದಾಮು ಮೇಲೆ ದಾಳಿ ನಡೆಸಿದ್ದು, ಸುಮಾರು ₹4 ಕೋಟಿ ಮೌಲ್ಯದ ಅಡಿಕೆಯನ್ನು ವಶಕ್ಕೆ ಪಡೆದಿದೆ.

ಕೆಲವು ದಿನಗಳ ಹಿಂದೆ ಇಂಡೋನೇಷಿಯಾದಿಂದ ನಿಯಮ ಉಲ್ಲಂಘಿಸಿ ಅಡಿಕೆ ಆಮದು ಮಾಡಲಾಗಿದೆ ಎಂಬ ಮಾಹಿತಿ ಆಧರಿಸಿ DRI ತನಿಖೆ ಆರಂಭಿಸಿತ್ತು. ತನಿಖೆ ವೇಳೆ ತೆರಿಗೆ ತಪ್ಪಿಸುವಿಕೆ, ನಕಲಿ ದಾಖಲೆಗಳ ಬಳಕೆ ಹಾಗೂ ಮೌಲ್ಯ ಕಡಿಮೆ ತೋರಿಸಿ ಅಡಿಕೆ ಸಾಗಾಟ ಸೇರಿದಂತೆ ಹಲವು ಅಕ್ರಮಗಳ ಕುರಿತು ಪರಿಶೀಲನೆ ನಡೆಸಲಾಗಿದೆ. ನಂತರ ಆದಾಯ ತೆರಿಗೆ ಇಲಾಖೆ ಕೂಡ ಸಂಬಂಧಿತ ವ್ಯಾಪಾರಿಗಳ ಲೆಕ್ಕಪತ್ರಗಳ ಪರಿಶೀಲನೆ ಕೈಗೊಂಡಿತ್ತು. ಇದರ ಮುಂದುವರಿದ ಭಾಗವಾಗಿ FDA ಆಹಾರ ಸುರಕ್ಷತೆ ದೃಷ್ಟಿಯಿಂದ ದಾಳಿ ಆರಂಭಿಸಿದೆ. ಅಡಿಕೆ ಕೂಡಾ ಕಳಪೆ ಎಂದು ವರದಿಯಾಗಿತ್ತು.

ಜನವರಿ 19ರಂದು ನಾಗಪುರದ ಕಲ್ಮನಾ ಪ್ರದೇಶದಲ್ಲಿರುವ ಎರಡು ಗೋದಾಮುಗಳಿಂದ ಸುಮಾರು 2 ಕೋಟಿ ಮೌಲ್ಯದ ಅಡಿಕೆ ವಶಕ್ಕೆ ಪಡೆದರೆ,  ಜನವರಿ 20 ಹಾಗೂ 21ರಂದು ಕೂಡಾ ದಾಳಿ ನಡೆಸಲಾಗಿತ್ತು. ಈ ಸಂದರ್ಭ ಸುಮಾರು 2 ಕೋಟಿ ಮೌಲ್ಯದ ಅಡಿಕೆ ವಶಕ್ಕೆ ಪಡೆಯಲಾಗಿತ್ತು ಎಂದು ವರದಿಯಾಗಿದೆ. ಈ ಕಾರ್ಯಾಚರಣೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

FDA ನಾಗಪುರ ವಿಭಾಗದ ಸಹ ಆಯುಕ್ತ ಕೆ.ಆರ್. ಜಯ್‌ಪುರ್ಕರ್ ಅವರು ಮಾಧ್ಯಮಗಳ ಜೊತೆ ಮಾತನಾಡಿ, “ಮುಂಬೈ ಹಾಗೂ ನಾಗಪುರ ಪ್ರದೇಶಗಳಿಗೆ ಕಳಪೆ ಗುಣಮಟ್ಟದ ಅಡಿಕೆ ಬಂದಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಅದರ ಆಧಾರದಲ್ಲಿ ದಾಳಿ ನಡೆಸಲಾಗಿದೆ. ವಶಪಡಿಸಿಕೊಂಡ ಅಡಿಕೆಯ  ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಪರೀಕ್ಷೆ ನಡೆಸಲಾಗುವುದು. ಆಹಾರ ಗುಣಮಟ್ಟಕ್ಕೆ ಸೂಕ್ತವಲ್ಲ ಅಥವಾ ಮಾನವ ಸೇವನೆಗೆ ಯೋಗ್ಯವಲ್ಲ ಎಂದು ದೃಢಪಟ್ಟರೆ ಸಂಬಂಧಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

3 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

3 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

12 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

1 day ago