Advertisement
MIRROR FOCUS

ಕಳಪೆ ಅಡಿಕೆ ದಾಸ್ತಾನು ಶಂಕೆ – ನಾಗಪುರದಲ್ಲಿ 10 ವ್ಯಾಪಾರಿಗಳ ಗೋದಾಮು ಮೇಲೆ ದಾಳಿ | ₹4 ಕೋಟಿ ಮೌಲ್ಯದ ಅಡಿಕೆ ಜಪ್ತಿ

Share

ಇಂಡೋನೇಷಿಯಾದಿಂದ ಭಾರತಕ್ಕೆ ಆಮದು ಮಾಡಲಾದ ಕಳಪೆ ಗುಣಮಟ್ಟದ ಅಡಿಕೆಯನ್ನು ನಿಯಮ ಉಲ್ಲಂಘನೆ ಮಾಡಿ ಹಾಗೂ ಕಳಪೆ ಗುಣಮಟ್ಟದ  ಶಂಕೆಯ ಹಿನ್ನೆಲೆಯಲ್ಲಿ ನಾಗಪುರದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ದೈನಿಕ್‌ ಭಾಸ್ಕರ್‌ ವರದಿ ಮಾಡಿದೆ.

ಭಾರತದ ಕಂದಾಯ ಗುಪ್ತಚರ ನಿರ್ದೇಶಾಲಯ (DRI) ಮತ್ತು ಆದಾಯ ತೆರಿಗೆ ಇಲಾಖೆಯ ತನಿಖೆಯ ಮುಂದುವರಿದ ಭಾಗವಾಗಿ ಮಹಾರಾಷ್ಟ್ರದ  ಆಹಾರ ಮತ್ತು ಔಷಧಿ ಆಡಳಿತ (FDA) ತಂಡವು ನಾಗಪುರದ ವಿವಿಧ ಪ್ರದೇಶಗಳಲ್ಲಿ 10 ಅಡಿಕೆ ವ್ಯಾಪಾರಿಗಳ ಗೋದಾಮು ಮೇಲೆ ದಾಳಿ ನಡೆಸಿದ್ದು, ಸುಮಾರು ₹4 ಕೋಟಿ ಮೌಲ್ಯದ ಅಡಿಕೆಯನ್ನು ವಶಕ್ಕೆ ಪಡೆದಿದೆ.

ಕೆಲವು ದಿನಗಳ ಹಿಂದೆ ಇಂಡೋನೇಷಿಯಾದಿಂದ ನಿಯಮ ಉಲ್ಲಂಘಿಸಿ ಅಡಿಕೆ ಆಮದು ಮಾಡಲಾಗಿದೆ ಎಂಬ ಮಾಹಿತಿ ಆಧರಿಸಿ DRI ತನಿಖೆ ಆರಂಭಿಸಿತ್ತು. ತನಿಖೆ ವೇಳೆ ತೆರಿಗೆ ತಪ್ಪಿಸುವಿಕೆ, ನಕಲಿ ದಾಖಲೆಗಳ ಬಳಕೆ ಹಾಗೂ ಮೌಲ್ಯ ಕಡಿಮೆ ತೋರಿಸಿ ಅಡಿಕೆ ಸಾಗಾಟ ಸೇರಿದಂತೆ ಹಲವು ಅಕ್ರಮಗಳ ಕುರಿತು ಪರಿಶೀಲನೆ ನಡೆಸಲಾಗಿದೆ. ನಂತರ ಆದಾಯ ತೆರಿಗೆ ಇಲಾಖೆ ಕೂಡ ಸಂಬಂಧಿತ ವ್ಯಾಪಾರಿಗಳ ಲೆಕ್ಕಪತ್ರಗಳ ಪರಿಶೀಲನೆ ಕೈಗೊಂಡಿತ್ತು. ಇದರ ಮುಂದುವರಿದ ಭಾಗವಾಗಿ FDA ಆಹಾರ ಸುರಕ್ಷತೆ ದೃಷ್ಟಿಯಿಂದ ದಾಳಿ ಆರಂಭಿಸಿದೆ. ಅಡಿಕೆ ಕೂಡಾ ಕಳಪೆ ಎಂದು ವರದಿಯಾಗಿತ್ತು.

ಜನವರಿ 19ರಂದು ನಾಗಪುರದ ಕಲ್ಮನಾ ಪ್ರದೇಶದಲ್ಲಿರುವ ಎರಡು ಗೋದಾಮುಗಳಿಂದ ಸುಮಾರು 2 ಕೋಟಿ ಮೌಲ್ಯದ ಅಡಿಕೆ ವಶಕ್ಕೆ ಪಡೆದರೆ,  ಜನವರಿ 20 ಹಾಗೂ 21ರಂದು ಕೂಡಾ ದಾಳಿ ನಡೆಸಲಾಗಿತ್ತು. ಈ ಸಂದರ್ಭ ಸುಮಾರು 2 ಕೋಟಿ ಮೌಲ್ಯದ ಅಡಿಕೆ ವಶಕ್ಕೆ ಪಡೆಯಲಾಗಿತ್ತು ಎಂದು ವರದಿಯಾಗಿದೆ. ಈ ಕಾರ್ಯಾಚರಣೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

FDA ನಾಗಪುರ ವಿಭಾಗದ ಸಹ ಆಯುಕ್ತ ಕೆ.ಆರ್. ಜಯ್‌ಪುರ್ಕರ್ ಅವರು ಮಾಧ್ಯಮಗಳ ಜೊತೆ ಮಾತನಾಡಿ, “ಮುಂಬೈ ಹಾಗೂ ನಾಗಪುರ ಪ್ರದೇಶಗಳಿಗೆ ಕಳಪೆ ಗುಣಮಟ್ಟದ ಅಡಿಕೆ ಬಂದಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಅದರ ಆಧಾರದಲ್ಲಿ ದಾಳಿ ನಡೆಸಲಾಗಿದೆ. ವಶಪಡಿಸಿಕೊಂಡ ಅಡಿಕೆಯ  ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಪರೀಕ್ಷೆ ನಡೆಸಲಾಗುವುದು. ಆಹಾರ ಗುಣಮಟ್ಟಕ್ಕೆ ಸೂಕ್ತವಲ್ಲ ಅಥವಾ ಮಾನವ ಸೇವನೆಗೆ ಯೋಗ್ಯವಲ್ಲ ಎಂದು ದೃಢಪಟ್ಟರೆ ಸಂಬಂಧಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

2 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

7 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

16 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

17 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

18 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

19 hours ago