ಅಡಿಕೆ ಬೆಳೆಗಾರರಿಗೆ‌ ಭಯ ಬೇಡ | ಅಡಿಕೆ ಮತ್ತು ಕ್ಯಾನ್ಸರ್ ವರದಿಗಳು | ತದ್ವಿರುದ್ಧ ವೈಜ್ಞಾನಿಕ ವರದಿಗಳ ಬಗ್ಗೆ ಎಆರ್‌ಡಿಎಫ್‌ ವರದಿ ಏನು ಹೇಳುತ್ತದೆ.. ? |

October 6, 2022
5:33 PM
Advertisement
ಅಡಿಕೆ ಬಗ್ಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಕಳೆದ ಅನೇಕ ಸಮಯಗಳಿಂದ ಆತಂಕಕಾರಿ ಸುದ್ದಿಗಳನ್ನೇ ಬಿಂಬಿಸಲಾಗುತ್ತಿದೆ. ವಾಸ್ತವದಲ್ಲಿ ಅಡಿಕೆಯು ಅನೇಕ ವರ್ಷಗಳಿಂದಲೂ ಬಳಕೆ ಇದೆ. ಆದರೆ ಅಡಿಕೆ ಹಾನಿಕಾರಕ ಎಂಬ ವಿರುದ್ಧವಾದ ವರದಿಗಳೇ ಏಕೆ ಪ್ರಸಾರವಾಗುತ್ತವೆ ಎಂಬುದು ಪ್ರಶ್ನೆ. ಈ ಎಲ್ಲದರ ನಡುವೆ ಮಂಗಳೂರಿನ ಅಡಿಕೆ ಸಂಶೋಧನಾ ಮತ್ತು ಅಭಿವೃದ್ಧಿ ಪ್ರತಿಷ್ಠಾನ (ARDF) ಅಡಿಕೆಯ ಉತ್ತಮ ಅಂಶಗಳ ಬಗ್ಗೆ ವರದಿ ಮಾಡಿದೆ.  ಎಆರ್‌ಡಿಎಫ್ ಸಂಯೋಜಕ , ನಿವೃತ್ತ ವಿಜ್ಞಾನಿ  ಡಾ.ಕೇಶವ ಭಟ್‌ ಸರ್ಪಂಗಳ‌ ಅವರ ಅಧ್ಯಯನ ವರದಿ ಇಲ್ಲಿದೆ.

ಅಡಿಕೆಯ (Arecanut) ಬಳಕೆ ಪುರಾತನ ಕಾಲದಿಂದಲೂ ಗುರುತಿಸಲ್ಪಟ್ಟಿದೆ. ಇದರಲ್ಲಿ ಹಲವಾರು ಔಷಧೀಯ ಗುಣಗಳಿವೆ ಎಂಬುದಾಗಿ ಪುರಾತನ ಆಯುರ್ವೇದ ನಿಘಂಟುಗಳಲ್ಲಿ ತಿಳಿಸಿದ್ದಾರೆ. ಇತ್ತೀಚೆಗಿನ ವೈಜ್ಞಾನಿಕ ಸಂಶೋಧನೆಗಳು ಕೂಡಾ ಅವುಗಳನ್ನೆಲ್ಲಾ ಧೃಡಪಡಿಸಿವೆ. ಆದರೂ, ಕೆಲವು ಅವೈಜ್ಞಾನಿಕ ಲೇಖನಗಳು ಅಡಿಕೆ ಕ್ಯಾನ್ಸರ್ ಕಾರಕ ಎಂಬುದನ್ನು ಬಿಂಬಿಸಿವೆ. ಈ ಬೆಳವಣಿಗೆಯ ದಿಸೆಯಲ್ಲಿ, ಹಲವಾರು ವೈಜ್ಞಾನಿಕ ಲೇಖನಗಳನ್ನು ಹುಡುಕಿ ಸಮೀಕ್ಷೆ ಮಾಡಿದಾಗ ಅಡಿಕೆ  ಕ್ಯಾನ್ಸರ್ ಕಾರಕವಲ್ಲ ಬದಲಾಗಿ ಕ್ಯಾನ್ಸರನ್ನು ಗುಣಪಡಿಸುತ್ತದೆ ಎಂಬ ವಿವರ ಲಭ್ಯವಾಗಿದೆ. 

Advertisement
Advertisement
Advertisement

ಅಡಿಕೆ ಕ್ಯಾನ್ಸರ್ ಕಾರಕವಲ್ಲ: ಡಾ. ಲಲಿತಕುಮಾರಿ ಮತ್ತು ಇತರರು 1974 ರಲ್ಲಿ ಚಿಕ್ಕಿಲಿಗಳ ಮೇಲೆ ಅಡಿಕೆಯ ಸತ್ವವನ್ನು ಪ್ರಯೋಗಮಾಡಿ ಅದು ಕ್ಯಾನ್ಸರ್ ಕಾರಕವಲ್ಲ ಎಂಬುದನ್ನು ಸಾಬೀತುಪಡಿಸಿದ್ದರು. ಡಾ. ರಣದಿವೆ ಮತ್ತು ಇತರರು 1976ರಲ್ಲಿ ಅಡಿಕೆಯ ಪೇಸ್ಟನ್ನು ಚಿಕ್ಕಿಲಿಗಳ ಚರ್ಮದ ಮೇಲೆ ಒಂದು ಕೆ.ಜಿ. ದೇಹದ ತೂಕಕ್ಕೆ ಐದು ಗ್ರಾಂನಷ್ಟು ಹಚ್ಚಿದಾಗ ಕ್ಯಾನ್ಸರ್ ಕಾಣಿಸಲಿಲ್ಲ. ಅದೇ ರೀತಿ ಅಡಿಕೆಯ ಪೇಸ್ಟನ್ನು ಹಾಮ್‍ಸ್ಟರ್‌ಗಳ ಬಾಯಿಯೊಳಗಿನ ಚರ್ಮದ ಪದರಕ್ಕೆ ಒಂದು ಕೆ.ಜಿ. ದೇಹದ ತೂಕಕ್ಕೆ 1.5 ಗ್ರಾಂ ನಷ್ಟು ಜೀವನಪರ್ಯಂತ ನಿತ್ಯ ಹಚ್ಚಿದಾಗಲೂ ಕ್ಯಾನ್ಸರ್ ಕಾಣಿಸಲಿಲ್ಲ. ಡಾ.ರಮೇಶ್ ರಾವ್ ಮತ್ತು ಡಾ. ಪದ್ಮಾದಾಸ್ ಎಂಬ ವಿಜ್ಞಾನಿಗಳು 1989 ರಲ್ಲಿ ಮಂಗಳೂರು ಚಾಲಿ ಅಡಿಕೆ ಮತ್ತು ಮಲೆನಾಡಿನ ಕೆಂಪು ಅಡಿಕೆಗಳ ಹುಡಿಗಳನ್ನು ಒಂದು ಕೆ.ಜಿ. ದೇಹದ ತೂಕಕ್ಕೆ ಒಂದು ಗ್ರಾಂನಷ್ಟು ಆಹಾರದೊಂದಿಗೆ ಮಿಶ್ರಮಾಡಿ ಸತತವಾಗಿ 12 ತಿಂಗಳುಗಳ ಕಾಲ ಚಿಕ್ಕಿಲಿಗಳಿಗೆ ಕೊಟ್ಟಾಗಲೂ ಕ್ಯಾನ್ಸರಿನ ಲಕ್ಷಣಗಳು ಗೋಚರಿಸಲಿಲ್ಲ.

Advertisement

ಡಾ. ನಂದಕುಮಾರ್ ಮತ್ತು ಇತರರು 1990 ರಲ್ಲಿ ನಡೆಸಿದ ಪ್ರಯೋಗದಲ್ಲಿ ತಂಬಾಕು ರಹಿತ ಪಾನ್ ತಿನ್ನುವುದು ಬಾಯಿಯ ಕ್ಯಾನ್ಸರಿಗೆ ಕಾರಣವಲ್ಲ ಎಂದು ಹೇಳಿದ್ದಾರೆ. ಹಾಗೆಯೇ, ಡಾ. ಶ್ರೀಹರಿ ಮತ್ತು ಇತರರಿಗೆ 2010 ರ ಸಂಶೋಧನೆಯಲ್ಲಿ ತಂಬಾಕು ರಹಿತ ಪಾನ್ ತಿನ್ನುವವರಲ್ಲಿ ಬಾಯಿಯ ಓರಲ್ ಸಬ್ಮುಕೋಸಿಸ್ ಫೈಬ್ರೋಸಿಸ್ ಕೂಡ ಕಂಡುಬರಲಿಲ್ಲ. ಡಾ. ಜೋಸ್ ಮತ್ತು ಇತರರು 2020 ರಲ್ಲಿ ನಡೆಸಿದ ಒಂದು ವೈಜ್ಞಾನಿಕ ಸಮೀಕ್ಷೆಯಲ್ಲಿ ಸಾಂಪ್ರದಾಯಿಕ ಬೀಡ ತಿನ್ನುವವರಲ್ಲಿ ಕ್ಯಾನ್ಸರ್ ಮತ್ತು ಇತರ ರೋಗಗಳು ಬೀಡ ತಿನ್ನದವರಿಂದ ಕಡಿಮೆ ಇತ್ತು.

ಅಡಿಕೆಯು ಕ್ಯಾನ್ಸರ್ ಬೆಳವಣಿಗೆಯನ್ನು ತಡೆಯುತ್ತದೆ: ಅಡಿಕೆಯು ಕ್ಯಾನ್ಸರ್ ಬೆಳವಣಿಗೆಯನ್ನು ಕೂಡ ತಡೆಯುತ್ತದೆ ಎಂದು ಹಲವಾರು ವೈಜ್ಞಾನಿಕ ವರದಿಗಳಿವೆ. ಲಲಿತ ಕುಮಾರಿ ಮತ್ತು ಇತರರು 1974 ರಲ್ಲಿ ಇಲಿಗಳ ಮೇಲೆ ನಡೆಸಿದ ಪ್ರಯೋಗಗಳಲ್ಲಿ ಇದು ಸಂಶಯಾತೀತವಾಗಿ ಸಾಬೀತಾಗಿದೆ. ಇಲಿಗಳ ಚರ್ಮದ ಮೇಲೆ ಕ್ಯಾನ್ಸರ್ ಕಾರಕವಾದ 3:4,ಬೆಂಜ್ಪೈರೀನ್ (BP) ಲೇಪಿಸಿದಾಗ 33ನೇ ವಾರಗಳಿಂದ ಕ್ಯಾನ್ಸರ್ ಗೆಡ್ಡೆಗಳು ಬೆಳವಣಿಗೆಯಾಗಲು ಪ್ರಾರಂಭಿಸಿ 39ನೇ ವಾರದಲ್ಲಿ ಎಲ್ಲಾ ಪ್ರಾಣಿಗಳಲ್ಲಿ ಗೋಚರಿಸಿದವು. ಆದರೆ ಅಡಿಕೆ ಸಾರದೊಂದಿಗೆ BP ಪಡೆದ ಪ್ರಾಣಿಗಳಲ್ಲಿ ಅಂತಹ ಗೆಡ್ಡೆಗಳು ಕಂಡುಬರಲಿಲ್ಲ ಎಂದು ಅವರು ಪ್ರಚುರಪಡಿಸಿದ್ದರು.

Advertisement

ಅಡಿಕೆಯು ಬಾಯಿ ಕ್ಯಾನ್ಸರ್ ವಿರುದ್ಧ ಕೂಡ ಪರಿಣಾಮಕಾರಿ. ಅಡಿಕೆ ಸಾರವು ಮಾನವನ ಬಾಯಿ ಕ್ಯಾನ್ಸರ್ ಕೋಶಗಳಾದ HSC-2 ಮತ್ತು HSC-3 ಜೀವಕೋಶಗಳನ್ನು ಕೊಲ್ಲುತ್ತದೆ ಆದರೆ ಸಾಮಾನ್ಯ ಜೀವಕೋಶಗಳನ್ನು ಅಲ್ಲ ಎಂಬುದಾಗಿ ಸಾರಿ ಮತ್ತು ಇತರರು 2017 ಮತ್ತು 2018 ರಲ್ಲಿ ಹೇಳಿದ್ದಾರೆ. ಇದಲ್ಲದೆ ಮಾನವನ ಹೊಟ್ಟೆಯ ಮತ್ತು ಪಿತ್ತಕೋಶದ ಕ್ಯಾನ್ಸರ್ ಕೋಶಗಳನ್ನು ಕೊಲ್ಲುವ ಗುಣ ಅಡಿಕೆಯ ಸತ್ವಕ್ಕೆ ಇದೆ ಎಂದು ಕ್ಸಿಯಾಂಗ್ ಮತ್ತು ಇತರರು 2010 ರಲ್ಲಿ ಹಾಗೂ ಸ್ತನದ ಕ್ಯಾನ್ಸರ್ ಕೋಶಗಳನ್ನು ಕೊಲ್ಲುವ ಗುಣ ಇದೆ ಎಂಬುದಾಗಿ ಅನಜ್‍ವಾಲ ಮತ್ತು ಇತರರು ಅದೇ ವರ್ಷ ಹೇಳಿದ್ದಾರೆ. ಹಾಗೆಯೇ, ವೀ ಮತ್ತು ಇತರರು 2021 ರಲ್ಲಿ ಅಡಿಕೆ ಪಿತ್ತಕೋಶದ ಕ್ಯಾನ್ಸರ್ ಬೆಳವಣಿಗೆಯನ್ನು ತಡೆಯುತ್ತೆ ಎಂಬುದಾಗಿ ಹೇಳಿದ್ದಾರೆ. ಮೇಲಾಗಿ ಅಡಿಕೆ ಸಾರದ ಸುಧೀರ್ಘ ಬಳಕೆಯಿಂದ ದೇಹದ ಒಳಗಿನ ಪ್ರಮುಖ ಅಂಗಗಳಾದ ಪಿತ್ತಕೋಶ, ಹೃದಯ, ಶ್ವಾಸಕೋಶ, ಕಿಡ್ನಿ, ಮೊದಲಾದವುಗಳಲ್ಲಿ ಯಾವುದೇ ರೀತಿಯ ವೈಫಲ್ಯ ಕಂಡುಬರಲಿಲ್ಲ ಎಂಬುದು ಅವರ ಹೇಳಿಕೆ.

ಅಡಿಕೆಯ ಅರೆಕೊಲಿನ್ ಅಂಶ ಕೂಡ ಕ್ಯಾನ್ಸರ್ ಬೆಳವಣಿಗೆಯನ್ನು ತಡೆಯುತ್ತದೆ ಎಂಬುದಾಗಿ ಫಾನ್ ಮತ್ತು ಇತರ 25 ವಿಜ್ಞಾನಿಗಳ ಸಮೂಹ ಇಲಿಗಳ ಮೇಲೆ ನಡೆಸಿದ ಮತ್ತೊಂದು ಅಧ್ಯಯನದಲ್ಲಿ ದೃಢೀಕರಿಸಿದ್ದಾರೆ. ಅರೆಕೊಲಿನ್ ಹೈಡ್ರೋಬ್ರೊಮೈಡ್, ಕ್ಯಾನ್ಸರ್ ಕೋಶಗಳ ಪ್ರಸರಣ ಮತ್ತು ಬೆಳವಣಿಗೆಗೆ ಪ್ರಮುಖ ಕಾರಣವಾದ ಅಸೆಟೈಲ್-COA ಅಸೆಟೈಲ್ಟ್ರಾನ್ಸ್ಫರೇಸ್ (ACAT1) ಕಿಣ್ವದ ಚಟುವಟಿಕೆಯನ್ನು ಪ್ರತಿಬಂಧಿಸುತ್ತದೆ ಎಂದು ಅವರು 2016 ರಲ್ಲಿ ವರದಿ ಮಾಡಿದ್ದಾರೆ. ಮಾತ್ರವಲ್ಲದೆ, ಕ್ಯಾನ್ಸರ್ ಗೆಡ್ಡೆಗಳಿರುವ ಇಲಿಗಳಿಗೆ ಅರೆಕೊಲಿನ್ ಒಂದು ಕೆ. ಜಿ. ದೇಹದ ತೂಕಕ್ಕೆ 50 ಮಿ. ಗ್ರಾಂ. ನಷ್ಟು ಇಂಜೆಕ್ಷನ್ ಮೂಲಕ ಕೊಟ್ಟಾಗ ಕ್ಯಾನ್ಸರ್ ಗೆಡ್ಡೆಗಳ ಬೆಳವಣಿಗೆಗಳನ್ನು ನಿಯಂತ್ರಿಸಿವೆ ಎಂಬುದಾಗಿ ಅವರು ಹೇಳಿರುತ್ತಾರೆ.

Advertisement

ಅಡಿಕೆ ತನ್ನ ನೈಜ ಗುಣದಲ್ಲಿ ಯಾವುದೇ ಕಾನ್ಸರ್‌ಕಾರಕ ಗುಣವನ್ನು ಹೊಂದಿಲ್ಲ. ಹಾಗಿದ್ದರೂ  ತದ್ವಿರುದ್ಧ ವೈಜ್ಞಾನಿಕ ವರದಿಗಳು ಬರಲು ಹೇಗೆ ಸಾಧ್ಯ? ಎಂಬುದು ಯಕ್ಷ ಪ್ರಶ್ನೆಯಾಗಿದೆ. ಇಂತಹ ವರದಿಗಳ ಹಿಂದೆ ಕಾಣದ ಕೈಗಳ ಕೆಲಸ ನಡೆಯುತ್ತದೆಯೇ ಎನ್ನುವುದು  ಈಗ ಇರುವ ಪ್ರಶ್ನೆಯಾಗಿದೆ.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಾಮರಾಜನಗರ-ಹಾವೇರಿಯಲ್ಲಿ ಗಾಳಿಗೆ ಅಪಾರ ಕೃಷಿ ಹಾನಿ |
April 19, 2024
11:14 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆ | ಗಾಳಿಗೆ ಉರುಳಿದ ಮರ | ಸುಳ್ಯ- ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕಡಿತ |
April 19, 2024
11:07 PM
by: ದ ರೂರಲ್ ಮಿರರ್.ಕಾಂ
ಬೇಸಿಗೆ ಜರ್ನಿಯ ಚಿಲಿಪಿಲಿ ಗೂಡು | ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ |
April 19, 2024
4:02 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 19-04-2024 | ಇಂದು ಉತ್ತಮ ಮಳೆಯ ಮುನ್ಸೂಚನೆ |
April 19, 2024
11:00 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror