ಮಳೆಗಾಲ ಆರಂಭವಾಗುತ್ತಿದ್ದಂತೆಯೇ ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಅಡಿಕೆ ಬೆಳೆ ವಿಸ್ತರಣೆ ವೇಗವಾಗಿ ನಡೆಯುತ್ತಿದ್ದು, ಈ ಬಾರಿಯೂ ರೈತರು ಹೊಸ ತೋಟಗಳ ನಿರ್ಮಾಣಕ್ಕೆ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ.
ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ಅಡಿಕೆ ಬೆಳೆ ವಿಸ್ತರಣೆ ಹೆಚ್ಚಾಗುತ್ತಿದೆ. ದೇಶದಾದ್ಯಂತ ಸುಮಾರು 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಗಿಡ ನಾಟಿಯಾಗುತ್ತಿದೆ. ಅಂದರೆ ಸುಮಾರು 10 ಕೋಟಿ ಗಿಡಗಳ ನಾಟಿಯಾಗುತ್ತಿದೆ. ಈ ಬಾರಿಯೂ ಅಡಿಕೆ ಗಿಡಗಳಿಗೆ ಬೇಡಿಕೆ ವ್ಯಕ್ತವಾಗುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಈಗ ಬಯಲು ಸೀಮೆ, ಕಡಿಮೆ ನೀರು ಇರುವ ಪ್ರದೇಶದಲ್ಲಿ ಬೆಳೆಯುವ ಅಡಿಕೆ ಗಿಡಗಳಿಗೆ ಬೇಡಿಕೆ ಇದ್ದು ವಿಶೇಷವಾಗಿ ನಾಟಿ ಅಡಿಕೆ ಗಿಡಗಳು, ಮೋಹಿತ್ ನಗರ್, ರತ್ನಗಿರಿ , ಮಂಗಳ, ಶತಮಂಗಳ ತಳಿಗಳಿಗೆ ಬೇಡಿಕೆ ವ್ಯಕ್ತವಾಗುತ್ತಿದೆ. ರಾಜ್ಯದ ಅಡಿಕೆ ಬೆಳೆಯುವ ಪ್ರದೇಶಗಳಾದ ದಾವಣಗೆರೆ ಜಿಲ್ಲೆಯ ಚನ್ನಗಿರಿ, ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕು, ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಿಂದ ವಿಶೇಷವಾಗಿ ಅಡಿಕೆ ಗಿಡಗಳಿಗೆ ಬೇಡಿಕೆ ಬರುತ್ತಿದೆ. ಅಡಿಕೆಗೆ ಉತ್ತಮ ಬೆಲೆ ದೊರೆಯುತ್ತಿರುವ ಹಿನ್ನೆಲೆ ಹೊಸ ತೋಟಗಳನ್ನು ನಿರ್ಮಿಸಲು ರೈತರು ಮುಂದಾಗಿದ್ದು, ಇದರ ಪರಿಣಾಮವಾಗಿ ಅಡಿಕೆ ಸಸಿಗಳ ದರವೂ ಏರಿಕೆಯಾಗಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಸುಮಾರು 54 ಸಾವಿರ ಹೆಕ್ಟೇರ್ ಕೃಷಿ ಭೂಮಿ ಇದ್ದು, ಅದರಲ್ಲಿ 11 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತಿದೆ. ಆದರೆ ಕಳೆದ ಒಂದು ದಶಕದಲ್ಲಿ ಅಡಿಕೆ ಬೆಳೆಯ ವಿಸ್ತೀರ್ಣ ಗಣನೀಯವಾಗಿ ಹೆಚ್ಚಾಗಿದೆ. 10 ವರ್ಷಗಳ ಹಿಂದೆ 30 ಸಾವಿರ ಹೆಕ್ಟೇರ್ ಇದ್ದ ಅಡಿಕೆ ಪ್ರದೇಶ ಇದೀಗ 39 ಸಾವಿರ ಹೆಕ್ಟೇರ್ಗೆ ಏರಿಕೆಯಾಗಿದೆ ಎಂದು ಕೃಷಿ ಇಲಾಖೆಯ ಅಂಕಿಅಂಶಗಳು ತಿಳಿಸಿವೆ ಎಂದು ಪ್ರಜಾವಾಣಿ ಪತ್ರಿಕೆ ವರದಿ ಮಾಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಮುಂಗಾರು ಆರಂಭವಾಗುತ್ತಿದ್ದಂತೆ ಅಡಿಕೆ ಸಸಿ ನೆಡುವ ಕಾಲ ಶುರುವಾಗುತ್ತದೆ. ಹೀಗಾಗಿ ಕಳೆದ ಕೆಲವು ವಾರಗಳಿಂದ ರೈತರು ಅಡಿಕೆ ಸಸಿಗಳನ್ನು ಮುಂಚಿತವಾಗಿಯೇ ಖರೀದಿಸಿ ಸಂಗ್ರಹಿಸಿಕೊಳ್ಳುತ್ತಿದ್ದಾರೆ. ಇದರ ಪರಿಣಾಮವಾಗಿ ಒಂದು ಅಡಿಕೆ ಸಸಿಯ ಬೆಲೆ ₹70 ರಿಂದ ₹100ರವರೆಗೆ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ದರ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಚನ್ನಗಿರಿ ಪ್ರದೇಶದ ಅಡಿಕೆ ಸಸಿ ಉತ್ಪಾದಕರು ಹೇಳುತ್ತಿದ್ದಾರೆ.
ಅಡಿಕೆಗೆ ದೇಶಾದ್ಯಂತ ಹೆಚ್ಚುತ್ತಿರುವ ಬೇಡಿಕೆ, ಉತ್ತಮ ಬೆಲೆ ಹಾಗೂ ಕೃಷಿಕರಿಗೆ ದೊರೆಯುತ್ತಿರುವ ಲಾಭದಾಯಕ ಆದಾಯವೇ ಈ ಪ್ರವೃತ್ತಿಗೆ ಪ್ರಮುಖ ಕಾರಣವಾಗಿದೆ. ಭಾರತ ವಿಶ್ವದ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಕರ್ನಾಟಕ ದೇಶದ ಅಗ್ರ ಅಡಿಕೆ ಉತ್ಪಾದಕ ರಾಜ್ಯವಾಗಿದೆ.
ಮೋಹಿತ್ ನಗರ್ ಅಡಿಕೆ ಗಿಡ ಏಕೆ ರೈತರ ಫೇವರಿಟ್..? ಹೆಚ್ಚು ಇಳುವರಿ, ವೇಗದ ಬೆಳವಣಿಗೆ ಇದರ ವಿಶೇಷತೆ..!

Demand for arecanut seedlings has surged across Karnataka with the onset of monsoon. Around 10 crore arecanut seedlings are expected to be planted across 2 lakh hectares nationwide. Rising arecanut prices and profitable returns are encouraging farmers to expand plantations, pushing seedling prices up to ₹100 each.

