Advertisement
MIRROR FOCUS

ಮುಂದ್ರಾ ಬಂದರಿಗೆ ಬಂತು 53 ಟನ್‌ ಅಡಿಕೆ..! | ರಾಳ ಹಾಗೂ ಪ್ಲಾಸ್ಟಿಕ್ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆ |

Share

 

ದುಬೈನಿಂದ ಮುಂದ್ರಾ ಬಂದರಿಗೆ ರಾಳ ಹಾಗೂ ಪ್ಲಾಸ್ಟಿಕ್ ಹೆಸರಿನಲ್ಲಿ ಸುಮಾರು 53 ಟನ್‌ ಅಡಿಕೆ ಆಮದಾಗಿರುವುದು ಬೆಳಕಿಗೆ ಬಂದಿದ್ದು, ಬಂದರಿನಲ್ಲಿರುವ ಕಸ್ಟಮ್ಸ್ ವಿಶೇಷ ಗುಪ್ತಚರ ಮತ್ತು ತನಿಖಾ ವಿಭಾಗವು ನಡೆಸಿದ ಕಾರ್ಯಾಚರಣೆಯಲ್ಲಿ ಅಡಿಕೆ ಪತ್ತೆಯಾಗಿದ್ದು ತನಿಖೆ ನಡೆಯುತ್ತಿದೆ.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಮುಂದ್ರಾ ಬಂದರಿನಲ್ಲಿರುವ ಕಸ್ಟಮ್ಸ್ ವಿಶೇಷ ಗುಪ್ತಚರ ಮತ್ತು ತನಿಖಾ ವಿಭಾಗವು  3 ಕೋಟಿ ಮೌಲ್ಯದ 53 ಟನ್ ಅಡಿಕೆಯನ್ನು ವಶಪಡಿಸಿಕೊಂಡಿದೆ. ಎರಡು ಕಂಟೈನರ್‌ಗಳನ್ನು ತಡೆದು ತಪಾಸಣೆ ನಡೆಸಿದಾಗ ಅಡಿಕೆ ಪತ್ತೆಯಾಗಿದೆ. ‌

ದುಬೈನಿಂದ ಮುಂದ್ರಾ ಬಂದರಿಗೆ ಅಡಿಕೆ  ಕಳ್ಳಸಾಗಣೆಯಾಗುತ್ತಿರುವ ಬಗ್ಗೆ ಕಸ್ಟಮ್ಸ್ ಅಧಿಕಾರಿಗಳಿಗೆ ಗುಪ್ತಚರ ಮಾಹಿತಿ ಸಿಕ್ಕಿತ್ತು. ಹೀಗಾಗಿ ತಪಾಸಣೆ ನಡೆಸಿದಾಗ  ರಾಳ ಹಾಗೂ ಪ್ಲಾಸ್ಟಿಕ್ ಸಾಗಾಟ ಎಂದು  ಘೋಷಿಸಲಾಗಿತ್ತು. ಆದರೆ ಪರಿಶೀಲನೆ ನಡೆಸಿದಾಗ  53 ಟನ್ ಅಡಿಕೆ ಪತ್ತೆಯಾಗಿದೆ. ವಶಪಡಿಸಿಕೊಂಡ ಅಡಿಕೆಯ  ಮಾರುಕಟ್ಟೆ ಮೌಲ್ಯ 3 ಕೋಟಿ  ರೂಪಾಯಿ ಎಂದು ಅಂದಾಜಿಸಲಾಗಿದೆ.ಈ ಹಿಂದೆ ಇದೇ ರೀತಿಯಲ್ಲಿ ಅಡಿಕೆ ಕಳ್ಳಸಾಗಣೆ ನಡೆದಿತ್ತು. ಇದೀಗ ಮತ್ತೆ ಕಳ್ಳಸಾಗಾಣಿಕೆ ಬಿರುಸುಗೊಂಡಿದೆ.

ಸದ್ಯ ಅಡಿಕೆ ಮಾರುಕಟ್ಟೆ ಏರಿಕೆ ಕಂಡಿದೆ. ಕಳೆದ ಕೆಲವು ದಿನಗಳಿಂದ ಅಡಿಕೆ ಖಾಲಿಯಾಗಿದೆ, ಅಡಿಕೆ ಮುಂದಿನ ವರ್ಷ ಇಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಡಿತ್ತು. ಹೀಗಾಗಿ ಧಾರಣೆ ಏರಿಕೆಯಾಗಿತ್ತು ಕೂಡಾ. ಬೆಳೆಗಾರರು ಈ ಸುದ್ದಿಗಳನ್ನು ನಂಬಿ ಅಡಿಕೆ ಮಾರಾಟಕ್ಕೂ ಹಿಂದೇಟು ಹಾಕಿದ್ದರು.

ಸದ್ಯ ಮಾರುಕಟ್ಟೆಯಲ್ಲಿ  ಪ್ರತಿ ಕೆಜಿಗೆ ಅಡಿಕೆಗೆ 450 ರೂಪಾಯಿಗೆ ಖರೀದಿಯಾಗುತ್ತಿದೆ. ಆದರೆ ಮ್ಯಾನ್ಮಾರ್, ಶ್ರೀಲಂಕಾ ಮತ್ತು ಥೈಲ್ಯಾಂಡ್‌ನಂತಹ ದೇಶಗಳಲ್ಲಿ ಕಡಿಮೆ ಬೆಲೆಗೆ ಅಡಿಕೆ ಲಭ್ಯವಾಗುತ್ತಿದೆ. ಅಲ್ಲಿ ಕಡಿಮೆ ಬೆಲೆಗೆ ಖರೀದಿ ಮಾಡುವ ಅಡಿಕೆಯನ್ನು ಆಮದು ಸುಂಕ ತಪ್ಪಿಸಿ ಭಾರತಕ್ಕೆ ಸಾಗಿಸಲಾಗುತ್ತಿದೆ. ಈ ಸಂದರ್ಭ ಇಲ್ಲಿಯ ಮಾರುಕಟ್ಟೆಯನ್ನು ಏರಿಕೆ ಮಾಡಿ, ಆಮದು ಆದ ತಕ್ಷಣವೇ ಭಾರತದಲ್ಲಿ ಅಡಿಕೆ ಮಾರುಕಟ್ಟೆ ಇಳಿಸುವ ತಂತ್ರ ನಡೆಯುತ್ತಿದೆ. ಈ ಹಿಂದೆಯೂ ಇದೇ ಆಗಿತ್ತು ಕೂಡಾ. ಇದೊಂದು ದಂಧೆಯಾಗಿ ಮಾರ್ಪಟ್ಟಿದೆ.

ನಾಲ್ಕು ವರ್ಷಗಳ ಹಿಂದೆ, ಕಚ್‌ನಲ್ಲಿ ಮೊದಲ ಬಾರಿಗೆ ಅಡಿಕೆ ಕಳ್ಳಸಾಗಣೆ ಪ್ರಕರಣವು ಬಹಿರಂಗವಾಗಿತ್ತು, ಅಂದು  4 ಕೋಟಿ ರೂಪಾಯಿಯ ಅಡಿಕೆಯ ದಂಧೆಗೆ ಸಂಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಇದೀಗ ಮತ್ತೆ ಈ ಬಾರಿ ಅಂತಹದ್ದೇ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಸೂಕ್ತವಾದ ಕ್ರಮಗಳ ಅಗತ್ಯ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

7 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

7 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

9 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

16 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

17 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

17 hours ago