Advertisement
ಸುದ್ದಿಗಳು

ಅಡಿಕೆ ಮಾರುಕಟ್ಟೆ ಸುದ್ದಿ | 1 ಕೋಟಿ ರೂಪಾಯಿ ಮೌಲ್ಯದ ಬರ್ಮಾ ಅಡಿಕೆ ಮತ್ತೆ ವಶಕ್ಕೆ | ಅಡಿಕೆ ಮಾರುಕಟ್ಟೆಗೆ ಬೇಕಿದೆ ಇನ್ನಷ್ಟು ಭದ್ರತೆ |

Share

ಅಡಿಕೆ ಮಾರುಕಟ್ಟೆಯಲ್ಲಿ  ಮತ್ತೆ ಏರಿಳಿತ ಶುರುವಾಗಿದೆ. ಕಳೆದ ಕೆಲವು ದಿನಗಳಿಂದ ಭಾರತದ ಅಡಿಕೆ ಮಾರುಕಟ್ಟೆಯಲ್ಲಿ  ಉತ್ಸಾಹ ಇರಲಿಲ್ಲ. ಈ ನಡುವೆಯೇ ಅಡಿಕೆ ಆಮದು ಕಳ್ಳ ದಾರಿಯ ಮೂಲಕ ನಡೆಯುತ್ತಿದೆ. ನಾಲ್ಕು ದಿನಗಳ ಹಿಂದೆ ಸುಮಾರು 1 ಕೋಟಿ ರೂಪಾಯಿ ಮೌಲ್ಯದ ಬರ್ಮಾ ಅಡಿಕೆಯನ್ನು  ಅಸ್ಸಾಂನ ಕ್ಯಾಚಾರ್‌ ಜಿಲ್ಲೆಯಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಪ್ರಕರಣದಲ್ಲಿ ಅಸ್ಸಾಂ ಪೊಲೀಸರು ಕ್ಯಾಚಾರ್ ಜಿಲ್ಲೆಯಲ್ಲಿ 10 ಜನರನ್ನು ಬಂಧಿಸಿದ್ದಾರೆ.

ಬರ್ಮಾ ಅಡಿಕೆಯನ್ನು ಕಳ್ಳಸಾಗಣೆ ಯತ್ನ ನಡೆಯುತ್ತಲೇ ಇದೆ. ಸುಮಾರು 20 ಟನ್  ಬರ್ಮಾ ಅಡಿಕೆಯನ್ನು ಅಸ್ಸಾಂ ಪೊಲೀಸರು ವಶಕ್ಕೆ ತೆಗೆದುಕೊಂಡರು. ಕಾರ್ಯಾಚರಣೆಯಲ್ಲಿ ಹತ್ತು ವಾಹನಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ಬಗ್ಗೆ ಮಾಧ್ಯಮಗಳಿಗೆ  ಮಾಹಿತಿ ನೀಡಿದ ಕ್ಯಾಚಾರ್ ಜಿಲ್ಲೆಯ ಎ ಸ್ಪಿ ನುಮಲ್ ಮಹತೋ, ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಬರ್ಮಾ  ಅಡಿಕೆಗಳನ್ನು ವಶಪಡಿಸಿಕೊಂಡಿದ್ದಾರೆ.  ಮಿಜೋರಾಂನಿಂದ ಅಡಿಕ ಬರುತ್ತಿದ್ದವು . ದೇಶದ ವಿವಿಧ ಸ್ಥಳಗಳಿಗೆ  ಅಡಿಕೆ ಸಾಗಾಟ ಮಾಡಲು ಉದ್ದೇಶಿದ್ದರು. ವಶಪಡಿಸಿಕೊಂಡ ಅಡಿಕೆಯ ಮಾರುಕಟ್ಟೆ ಮೌಲ್ಯ ಸುಮಾರು 1 ಕೋಟಿ ಎಂದು ಹೇಳಿದ್ದಾರೆ.

ಇದೇ ವೇಳೆ ವಿಶಾಖಪಟ್ಟಣಂ ಬಂದರಿನಲ್ಲೂ ಅಡಿಕೆ ಕಳ್ಳಸಾಗಾಣಿಕೆ ಪತ್ತೆಯಾಗಿದೆ. ಯುಎಇ ಮೂಲಕ ಆಗಮನವಾದ ಒಣ ಖರ್ಜೂರದ ಹೆಸರಿನಲ್ಲಿ  ಅಡಿಕೆ ಕಳ್ಳಸಾಗಾಣಿಕೆ ಬೆಳೆಕಿಗೆ ಬಂದಿದೆ. ಒಟ್ಟು 56 ಮೆಟ್ರಿಕ್‌ ಟನ್‌ ಖರ್ಜೂರ ಎಂದು ಆಮದು ಆಗಿತ್ತು. ಪರಿಶೀಲನೆ ನಡೆಸಿದಾಗ ಅದರಲ್ಲಿ 11.5 ಮೆಟ್ರಿಕ್‌ ಟನ್‌ ಮಾತ್ರವೇ ಖರ್ಜೂರ ಲಭ್ಯವಾಗಿದ್ದು ಉಳಿದ ಎಲ್ಲಾ ಬ್ಯಾಗ್‌ ಗಳಲ್ಲಿ ಅಡಿಕೆ ಇರುವುದು  ಬೆಳೆಕಿಗೆ ಬಂದಿದೆ. ಸುಮಾರು 5.5 ಕೋಟಿ ರೂಪಾಯಿ ಮೌಲ್ಯದ ಅಡಿಕೆ ಇಲ್ಲಿ ಪತ್ತೆಯಾಗಿದೆ. ಇದರಲ್ಲಿ ಕೇವಲ 3.5 ಲಕ್ಷ ರೂಪಾಯಿ ಮೌಲ್ಯದ ಒಣ ಖರ್ಜೂರ ಪತ್ತೆಯಾಗಿತ್ತು. ಈ ಪ್ರಕರಣ ತನಿಖೆಯಾಗುತ್ತಿದೆ.

ಕಳೆದ ಕೆಲವು ದಿನಗಳಿಂದ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಾಣುತ್ತಿಲ್ಲ. ಅಂತಹ ಎಲ್ಲಾ ಸಂದರ್ಭಗಳಲ್ಲೂ ಅಡಿಕೆ ಆಮದು ಕಳ್ಳದಾರಿಯ ಮೂಲಕ ನಡೆಯುತ್ತಿದೆ. ಹೀಗಾಗಿ ಅಡಿಕೆ ಆಮದು ಸಂಪೂರ್ಣ ತಡೆಗೆ ಇನ್ನಷ್ಟು ಕಠಿಣ ಕ್ರಮಗಳ ಅಗತ್ಯ ಇದೆ. ಮುಂದೆ ಚುನಾವಣೆ ಸಮೀಪಿಸುತ್ತಿರುವುದರಿಂದ ಈಗಲೇ ಅಡಿಕೆ ಮಾರುಕಟ್ಟೆ ಕಡೆಗೆ ಗಮನ ಅಗತ್ಯ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

7 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

1 day ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

1 day ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

2 days ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 days ago