Advertisement
ಸುದ್ದಿಗಳು

ಅಡಿಕೆ ಮಾರುಕಟ್ಟೆ ಸುದ್ದಿ | 1 ಕೋಟಿ ರೂಪಾಯಿ ಮೌಲ್ಯದ ಬರ್ಮಾ ಅಡಿಕೆ ಮತ್ತೆ ವಶಕ್ಕೆ | ಅಡಿಕೆ ಮಾರುಕಟ್ಟೆಗೆ ಬೇಕಿದೆ ಇನ್ನಷ್ಟು ಭದ್ರತೆ |

Share

ಅಡಿಕೆ ಮಾರುಕಟ್ಟೆಯಲ್ಲಿ  ಮತ್ತೆ ಏರಿಳಿತ ಶುರುವಾಗಿದೆ. ಕಳೆದ ಕೆಲವು ದಿನಗಳಿಂದ ಭಾರತದ ಅಡಿಕೆ ಮಾರುಕಟ್ಟೆಯಲ್ಲಿ  ಉತ್ಸಾಹ ಇರಲಿಲ್ಲ. ಈ ನಡುವೆಯೇ ಅಡಿಕೆ ಆಮದು ಕಳ್ಳ ದಾರಿಯ ಮೂಲಕ ನಡೆಯುತ್ತಿದೆ. ನಾಲ್ಕು ದಿನಗಳ ಹಿಂದೆ ಸುಮಾರು 1 ಕೋಟಿ ರೂಪಾಯಿ ಮೌಲ್ಯದ ಬರ್ಮಾ ಅಡಿಕೆಯನ್ನು  ಅಸ್ಸಾಂನ ಕ್ಯಾಚಾರ್‌ ಜಿಲ್ಲೆಯಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಪ್ರಕರಣದಲ್ಲಿ ಅಸ್ಸಾಂ ಪೊಲೀಸರು ಕ್ಯಾಚಾರ್ ಜಿಲ್ಲೆಯಲ್ಲಿ 10 ಜನರನ್ನು ಬಂಧಿಸಿದ್ದಾರೆ.

Advertisement
Advertisement

ಬರ್ಮಾ ಅಡಿಕೆಯನ್ನು ಕಳ್ಳಸಾಗಣೆ ಯತ್ನ ನಡೆಯುತ್ತಲೇ ಇದೆ. ಸುಮಾರು 20 ಟನ್  ಬರ್ಮಾ ಅಡಿಕೆಯನ್ನು ಅಸ್ಸಾಂ ಪೊಲೀಸರು ವಶಕ್ಕೆ ತೆಗೆದುಕೊಂಡರು. ಕಾರ್ಯಾಚರಣೆಯಲ್ಲಿ ಹತ್ತು ವಾಹನಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ಬಗ್ಗೆ ಮಾಧ್ಯಮಗಳಿಗೆ  ಮಾಹಿತಿ ನೀಡಿದ ಕ್ಯಾಚಾರ್ ಜಿಲ್ಲೆಯ ಎ ಸ್ಪಿ ನುಮಲ್ ಮಹತೋ, ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಬರ್ಮಾ  ಅಡಿಕೆಗಳನ್ನು ವಶಪಡಿಸಿಕೊಂಡಿದ್ದಾರೆ.  ಮಿಜೋರಾಂನಿಂದ ಅಡಿಕ ಬರುತ್ತಿದ್ದವು . ದೇಶದ ವಿವಿಧ ಸ್ಥಳಗಳಿಗೆ  ಅಡಿಕೆ ಸಾಗಾಟ ಮಾಡಲು ಉದ್ದೇಶಿದ್ದರು. ವಶಪಡಿಸಿಕೊಂಡ ಅಡಿಕೆಯ ಮಾರುಕಟ್ಟೆ ಮೌಲ್ಯ ಸುಮಾರು 1 ಕೋಟಿ ಎಂದು ಹೇಳಿದ್ದಾರೆ.

ಇದೇ ವೇಳೆ ವಿಶಾಖಪಟ್ಟಣಂ ಬಂದರಿನಲ್ಲೂ ಅಡಿಕೆ ಕಳ್ಳಸಾಗಾಣಿಕೆ ಪತ್ತೆಯಾಗಿದೆ. ಯುಎಇ ಮೂಲಕ ಆಗಮನವಾದ ಒಣ ಖರ್ಜೂರದ ಹೆಸರಿನಲ್ಲಿ  ಅಡಿಕೆ ಕಳ್ಳಸಾಗಾಣಿಕೆ ಬೆಳೆಕಿಗೆ ಬಂದಿದೆ. ಒಟ್ಟು 56 ಮೆಟ್ರಿಕ್‌ ಟನ್‌ ಖರ್ಜೂರ ಎಂದು ಆಮದು ಆಗಿತ್ತು. ಪರಿಶೀಲನೆ ನಡೆಸಿದಾಗ ಅದರಲ್ಲಿ 11.5 ಮೆಟ್ರಿಕ್‌ ಟನ್‌ ಮಾತ್ರವೇ ಖರ್ಜೂರ ಲಭ್ಯವಾಗಿದ್ದು ಉಳಿದ ಎಲ್ಲಾ ಬ್ಯಾಗ್‌ ಗಳಲ್ಲಿ ಅಡಿಕೆ ಇರುವುದು  ಬೆಳೆಕಿಗೆ ಬಂದಿದೆ. ಸುಮಾರು 5.5 ಕೋಟಿ ರೂಪಾಯಿ ಮೌಲ್ಯದ ಅಡಿಕೆ ಇಲ್ಲಿ ಪತ್ತೆಯಾಗಿದೆ. ಇದರಲ್ಲಿ ಕೇವಲ 3.5 ಲಕ್ಷ ರೂಪಾಯಿ ಮೌಲ್ಯದ ಒಣ ಖರ್ಜೂರ ಪತ್ತೆಯಾಗಿತ್ತು. ಈ ಪ್ರಕರಣ ತನಿಖೆಯಾಗುತ್ತಿದೆ.

ಕಳೆದ ಕೆಲವು ದಿನಗಳಿಂದ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಾಣುತ್ತಿಲ್ಲ. ಅಂತಹ ಎಲ್ಲಾ ಸಂದರ್ಭಗಳಲ್ಲೂ ಅಡಿಕೆ ಆಮದು ಕಳ್ಳದಾರಿಯ ಮೂಲಕ ನಡೆಯುತ್ತಿದೆ. ಹೀಗಾಗಿ ಅಡಿಕೆ ಆಮದು ಸಂಪೂರ್ಣ ತಡೆಗೆ ಇನ್ನಷ್ಟು ಕಠಿಣ ಕ್ರಮಗಳ ಅಗತ್ಯ ಇದೆ. ಮುಂದೆ ಚುನಾವಣೆ ಸಮೀಪಿಸುತ್ತಿರುವುದರಿಂದ ಈಗಲೇ ಅಡಿಕೆ ಮಾರುಕಟ್ಟೆ ಕಡೆಗೆ ಗಮನ ಅಗತ್ಯ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

4 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago