Advertisement
ಸುದ್ದಿಗಳು

ಅಡಿಕೆ ಮಾರುಕಟ್ಟೆ ಸುದ್ದಿ | 1 ಕೋಟಿ ರೂಪಾಯಿ ಮೌಲ್ಯದ ಬರ್ಮಾ ಅಡಿಕೆ ಮತ್ತೆ ವಶಕ್ಕೆ | ಅಡಿಕೆ ಮಾರುಕಟ್ಟೆಗೆ ಬೇಕಿದೆ ಇನ್ನಷ್ಟು ಭದ್ರತೆ |

Share

ಅಡಿಕೆ ಮಾರುಕಟ್ಟೆಯಲ್ಲಿ  ಮತ್ತೆ ಏರಿಳಿತ ಶುರುವಾಗಿದೆ. ಕಳೆದ ಕೆಲವು ದಿನಗಳಿಂದ ಭಾರತದ ಅಡಿಕೆ ಮಾರುಕಟ್ಟೆಯಲ್ಲಿ  ಉತ್ಸಾಹ ಇರಲಿಲ್ಲ. ಈ ನಡುವೆಯೇ ಅಡಿಕೆ ಆಮದು ಕಳ್ಳ ದಾರಿಯ ಮೂಲಕ ನಡೆಯುತ್ತಿದೆ. ನಾಲ್ಕು ದಿನಗಳ ಹಿಂದೆ ಸುಮಾರು 1 ಕೋಟಿ ರೂಪಾಯಿ ಮೌಲ್ಯದ ಬರ್ಮಾ ಅಡಿಕೆಯನ್ನು  ಅಸ್ಸಾಂನ ಕ್ಯಾಚಾರ್‌ ಜಿಲ್ಲೆಯಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಪ್ರಕರಣದಲ್ಲಿ ಅಸ್ಸಾಂ ಪೊಲೀಸರು ಕ್ಯಾಚಾರ್ ಜಿಲ್ಲೆಯಲ್ಲಿ 10 ಜನರನ್ನು ಬಂಧಿಸಿದ್ದಾರೆ.

ಬರ್ಮಾ ಅಡಿಕೆಯನ್ನು ಕಳ್ಳಸಾಗಣೆ ಯತ್ನ ನಡೆಯುತ್ತಲೇ ಇದೆ. ಸುಮಾರು 20 ಟನ್  ಬರ್ಮಾ ಅಡಿಕೆಯನ್ನು ಅಸ್ಸಾಂ ಪೊಲೀಸರು ವಶಕ್ಕೆ ತೆಗೆದುಕೊಂಡರು. ಕಾರ್ಯಾಚರಣೆಯಲ್ಲಿ ಹತ್ತು ವಾಹನಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ಬಗ್ಗೆ ಮಾಧ್ಯಮಗಳಿಗೆ  ಮಾಹಿತಿ ನೀಡಿದ ಕ್ಯಾಚಾರ್ ಜಿಲ್ಲೆಯ ಎ ಸ್ಪಿ ನುಮಲ್ ಮಹತೋ, ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಬರ್ಮಾ  ಅಡಿಕೆಗಳನ್ನು ವಶಪಡಿಸಿಕೊಂಡಿದ್ದಾರೆ.  ಮಿಜೋರಾಂನಿಂದ ಅಡಿಕ ಬರುತ್ತಿದ್ದವು . ದೇಶದ ವಿವಿಧ ಸ್ಥಳಗಳಿಗೆ  ಅಡಿಕೆ ಸಾಗಾಟ ಮಾಡಲು ಉದ್ದೇಶಿದ್ದರು. ವಶಪಡಿಸಿಕೊಂಡ ಅಡಿಕೆಯ ಮಾರುಕಟ್ಟೆ ಮೌಲ್ಯ ಸುಮಾರು 1 ಕೋಟಿ ಎಂದು ಹೇಳಿದ್ದಾರೆ.

ಇದೇ ವೇಳೆ ವಿಶಾಖಪಟ್ಟಣಂ ಬಂದರಿನಲ್ಲೂ ಅಡಿಕೆ ಕಳ್ಳಸಾಗಾಣಿಕೆ ಪತ್ತೆಯಾಗಿದೆ. ಯುಎಇ ಮೂಲಕ ಆಗಮನವಾದ ಒಣ ಖರ್ಜೂರದ ಹೆಸರಿನಲ್ಲಿ  ಅಡಿಕೆ ಕಳ್ಳಸಾಗಾಣಿಕೆ ಬೆಳೆಕಿಗೆ ಬಂದಿದೆ. ಒಟ್ಟು 56 ಮೆಟ್ರಿಕ್‌ ಟನ್‌ ಖರ್ಜೂರ ಎಂದು ಆಮದು ಆಗಿತ್ತು. ಪರಿಶೀಲನೆ ನಡೆಸಿದಾಗ ಅದರಲ್ಲಿ 11.5 ಮೆಟ್ರಿಕ್‌ ಟನ್‌ ಮಾತ್ರವೇ ಖರ್ಜೂರ ಲಭ್ಯವಾಗಿದ್ದು ಉಳಿದ ಎಲ್ಲಾ ಬ್ಯಾಗ್‌ ಗಳಲ್ಲಿ ಅಡಿಕೆ ಇರುವುದು  ಬೆಳೆಕಿಗೆ ಬಂದಿದೆ. ಸುಮಾರು 5.5 ಕೋಟಿ ರೂಪಾಯಿ ಮೌಲ್ಯದ ಅಡಿಕೆ ಇಲ್ಲಿ ಪತ್ತೆಯಾಗಿದೆ. ಇದರಲ್ಲಿ ಕೇವಲ 3.5 ಲಕ್ಷ ರೂಪಾಯಿ ಮೌಲ್ಯದ ಒಣ ಖರ್ಜೂರ ಪತ್ತೆಯಾಗಿತ್ತು. ಈ ಪ್ರಕರಣ ತನಿಖೆಯಾಗುತ್ತಿದೆ.

ಕಳೆದ ಕೆಲವು ದಿನಗಳಿಂದ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಾಣುತ್ತಿಲ್ಲ. ಅಂತಹ ಎಲ್ಲಾ ಸಂದರ್ಭಗಳಲ್ಲೂ ಅಡಿಕೆ ಆಮದು ಕಳ್ಳದಾರಿಯ ಮೂಲಕ ನಡೆಯುತ್ತಿದೆ. ಹೀಗಾಗಿ ಅಡಿಕೆ ಆಮದು ಸಂಪೂರ್ಣ ತಡೆಗೆ ಇನ್ನಷ್ಟು ಕಠಿಣ ಕ್ರಮಗಳ ಅಗತ್ಯ ಇದೆ. ಮುಂದೆ ಚುನಾವಣೆ ಸಮೀಪಿಸುತ್ತಿರುವುದರಿಂದ ಈಗಲೇ ಅಡಿಕೆ ಮಾರುಕಟ್ಟೆ ಕಡೆಗೆ ಗಮನ ಅಗತ್ಯ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

11 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 day ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago