Advertisement
ಸುದ್ದಿಗಳು

ಅಡಿಕೆ ಮಾರುಕಟ್ಟೆ ಸುದ್ದಿ | 1 ಕೋಟಿ ರೂಪಾಯಿ ಮೌಲ್ಯದ ಬರ್ಮಾ ಅಡಿಕೆ ಮತ್ತೆ ವಶಕ್ಕೆ | ಅಡಿಕೆ ಮಾರುಕಟ್ಟೆಗೆ ಬೇಕಿದೆ ಇನ್ನಷ್ಟು ಭದ್ರತೆ |

Share

ಅಡಿಕೆ ಮಾರುಕಟ್ಟೆಯಲ್ಲಿ  ಮತ್ತೆ ಏರಿಳಿತ ಶುರುವಾಗಿದೆ. ಕಳೆದ ಕೆಲವು ದಿನಗಳಿಂದ ಭಾರತದ ಅಡಿಕೆ ಮಾರುಕಟ್ಟೆಯಲ್ಲಿ  ಉತ್ಸಾಹ ಇರಲಿಲ್ಲ. ಈ ನಡುವೆಯೇ ಅಡಿಕೆ ಆಮದು ಕಳ್ಳ ದಾರಿಯ ಮೂಲಕ ನಡೆಯುತ್ತಿದೆ. ನಾಲ್ಕು ದಿನಗಳ ಹಿಂದೆ ಸುಮಾರು 1 ಕೋಟಿ ರೂಪಾಯಿ ಮೌಲ್ಯದ ಬರ್ಮಾ ಅಡಿಕೆಯನ್ನು  ಅಸ್ಸಾಂನ ಕ್ಯಾಚಾರ್‌ ಜಿಲ್ಲೆಯಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಪ್ರಕರಣದಲ್ಲಿ ಅಸ್ಸಾಂ ಪೊಲೀಸರು ಕ್ಯಾಚಾರ್ ಜಿಲ್ಲೆಯಲ್ಲಿ 10 ಜನರನ್ನು ಬಂಧಿಸಿದ್ದಾರೆ.

ಬರ್ಮಾ ಅಡಿಕೆಯನ್ನು ಕಳ್ಳಸಾಗಣೆ ಯತ್ನ ನಡೆಯುತ್ತಲೇ ಇದೆ. ಸುಮಾರು 20 ಟನ್  ಬರ್ಮಾ ಅಡಿಕೆಯನ್ನು ಅಸ್ಸಾಂ ಪೊಲೀಸರು ವಶಕ್ಕೆ ತೆಗೆದುಕೊಂಡರು. ಕಾರ್ಯಾಚರಣೆಯಲ್ಲಿ ಹತ್ತು ವಾಹನಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ಬಗ್ಗೆ ಮಾಧ್ಯಮಗಳಿಗೆ  ಮಾಹಿತಿ ನೀಡಿದ ಕ್ಯಾಚಾರ್ ಜಿಲ್ಲೆಯ ಎ ಸ್ಪಿ ನುಮಲ್ ಮಹತೋ, ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಬರ್ಮಾ  ಅಡಿಕೆಗಳನ್ನು ವಶಪಡಿಸಿಕೊಂಡಿದ್ದಾರೆ.  ಮಿಜೋರಾಂನಿಂದ ಅಡಿಕ ಬರುತ್ತಿದ್ದವು . ದೇಶದ ವಿವಿಧ ಸ್ಥಳಗಳಿಗೆ  ಅಡಿಕೆ ಸಾಗಾಟ ಮಾಡಲು ಉದ್ದೇಶಿದ್ದರು. ವಶಪಡಿಸಿಕೊಂಡ ಅಡಿಕೆಯ ಮಾರುಕಟ್ಟೆ ಮೌಲ್ಯ ಸುಮಾರು 1 ಕೋಟಿ ಎಂದು ಹೇಳಿದ್ದಾರೆ.

ಇದೇ ವೇಳೆ ವಿಶಾಖಪಟ್ಟಣಂ ಬಂದರಿನಲ್ಲೂ ಅಡಿಕೆ ಕಳ್ಳಸಾಗಾಣಿಕೆ ಪತ್ತೆಯಾಗಿದೆ. ಯುಎಇ ಮೂಲಕ ಆಗಮನವಾದ ಒಣ ಖರ್ಜೂರದ ಹೆಸರಿನಲ್ಲಿ  ಅಡಿಕೆ ಕಳ್ಳಸಾಗಾಣಿಕೆ ಬೆಳೆಕಿಗೆ ಬಂದಿದೆ. ಒಟ್ಟು 56 ಮೆಟ್ರಿಕ್‌ ಟನ್‌ ಖರ್ಜೂರ ಎಂದು ಆಮದು ಆಗಿತ್ತು. ಪರಿಶೀಲನೆ ನಡೆಸಿದಾಗ ಅದರಲ್ಲಿ 11.5 ಮೆಟ್ರಿಕ್‌ ಟನ್‌ ಮಾತ್ರವೇ ಖರ್ಜೂರ ಲಭ್ಯವಾಗಿದ್ದು ಉಳಿದ ಎಲ್ಲಾ ಬ್ಯಾಗ್‌ ಗಳಲ್ಲಿ ಅಡಿಕೆ ಇರುವುದು  ಬೆಳೆಕಿಗೆ ಬಂದಿದೆ. ಸುಮಾರು 5.5 ಕೋಟಿ ರೂಪಾಯಿ ಮೌಲ್ಯದ ಅಡಿಕೆ ಇಲ್ಲಿ ಪತ್ತೆಯಾಗಿದೆ. ಇದರಲ್ಲಿ ಕೇವಲ 3.5 ಲಕ್ಷ ರೂಪಾಯಿ ಮೌಲ್ಯದ ಒಣ ಖರ್ಜೂರ ಪತ್ತೆಯಾಗಿತ್ತು. ಈ ಪ್ರಕರಣ ತನಿಖೆಯಾಗುತ್ತಿದೆ.

ಕಳೆದ ಕೆಲವು ದಿನಗಳಿಂದ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಾಣುತ್ತಿಲ್ಲ. ಅಂತಹ ಎಲ್ಲಾ ಸಂದರ್ಭಗಳಲ್ಲೂ ಅಡಿಕೆ ಆಮದು ಕಳ್ಳದಾರಿಯ ಮೂಲಕ ನಡೆಯುತ್ತಿದೆ. ಹೀಗಾಗಿ ಅಡಿಕೆ ಆಮದು ಸಂಪೂರ್ಣ ತಡೆಗೆ ಇನ್ನಷ್ಟು ಕಠಿಣ ಕ್ರಮಗಳ ಅಗತ್ಯ ಇದೆ. ಮುಂದೆ ಚುನಾವಣೆ ಸಮೀಪಿಸುತ್ತಿರುವುದರಿಂದ ಈಗಲೇ ಅಡಿಕೆ ಮಾರುಕಟ್ಟೆ ಕಡೆಗೆ ಗಮನ ಅಗತ್ಯ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

10 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

16 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago