Advertisement
ಸುದ್ದಿಗಳು

ಪುತ್ತೂರು | ಜ.4 ರಂದು ಅಡಿಕೆ ಬೆಳೆಗಾರರ ಜಿಲ್ಲಾ ಮಟ್ಟದ ಹಕ್ಕೊತ್ತಾಯ ಸಮಾವೇಶ

Share

ಒಂದೆಡೆ ಅಡಿಕೆ ಬೆಳೆ ವಿಸ್ತರಣೆಯಾಗುತ್ತಿರುವ ನಡುವೆಯೇ, ಮತ್ತೊಂದೆಡೆ ಅಡಿಕೆ ಬೆಳೆಗೆ ನಾನಾ ರೀತಿಯ ಸಂಕಟಗಳು ಎದುರಾಗುತ್ತಿದ್ದು, ಬೆಳೆಗಾರರು ಆತಂಕಕ್ಕೆ ತುತ್ತಾಗಿದ್ದಾರೆ. ಉತ್ತಮ ಧಾರಣೆಯ ಖುಷಿಯ ನಡುವೆಯೂ ರೋಗ ರುಜಿನ ಹಾಗೂ ಬೆಳೆ ನಿಷೇಧದ ತೂಗುಕತ್ತಿ ನೇತಾಡುತ್ತಿದ್ದು ರೈತರನ್ನು ವಸ್ತುಶಃ ಭೀತಿಗೆ ತಳ್ಳುತ್ತಿದೆ.

ಈ ವಿಷಮ ಪರಿಸ್ಥಿತಿಯಲ್ಲಿ ಅಡಿಕೆ ಬೆಳೆಗಾರರಿಗೆ ಧೈರ್ಯ ತುಂಬಲು ಮತ್ತು ಬೆಳೆಗಾರರ ಮನದಾಳದ ದುಗುಡ ಹಾಗೂ ಹಕ್ಕೊತ್ತಾಯಗಳನ್ನು ಸಮರ್ಥವಾಗಿ ಸರಕಾರದ ಮುಂದಿಡಲು ವಿಜಯ ಕರ್ನಾಟಕ ಪತ್ರಿಕೆ ಮುಂದಾಗಿದೆ.ಈ ನಿಟ್ಟಿನಲ್ಲಿ ಜನವರಿ 4ರಂದು ಬುಧವಾರ ಪುತ್ತೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಅಡಿಕೆ ಬೆಳೆಗಾರರ ಹಕ್ಕೊತ್ತಾಯ ಸಮಾವೇಶ ಸಂಘಟಿಸಿದೆ.ಬೆಳಗ್ಗೆ 10 ಗಂಟೆಗೆ ಪುತ್ತೂರಿನ ಕೋ ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಹಕ್ಕೊತ್ತಾಯ ಸಮಾವೇಶ ನಡೆಯಲಿದೆ.

ಈ ಸಮಾವೇಶದಲ್ಲಿ ಇಲಾಖಾ ಮಟ್ಟದ ಅಧಿಕಾರಿಗಳು, ವಿಜ್ಞಾನಿಗಳು, ಸರಕಾರದ ಪ್ರತಿನಿಧಿಗಳು, ಬೆಳೆಗಾರ ಸಂಸ್ಥೆಗಳ ಮುಖಂಡರು, ನಾನಾ ರೈತ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ರೈತರು ತಮ್ಮ ಅಹವಾಲು, ದುಗುಡ, ಬೇಡಿಕೆ, ಮುನ್ನೋಟಗಳನ್ನು ಮಂಡಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ. ಹಳದಿ ರೋಗ, ಎಲೆ ಚುಕ್ಕಿ ರೋಗ, ಪರಿಹಾರ ಕ್ರಮಗಳು, ಪರ್ಯಾಯ ಮಾರ್ಗೋಪಾಯಗಳು, ಸರಕಾರದಿಂದ ಸಿಗುವ ಉತ್ತೇಜನಗಳು, ಸರಕಾರ ಕೈಗೊಳ್ಳಬೇಕಾದ ಕ್ರಮಗಳನ್ನು ಮಂಡಿಸಲಾಗುತ್ತದೆ. ವಿಜ್ಞಾನಿಗಳು, ಅಧಿಕಾರಿಗಳು, ಜನಪ್ರತಿನಿಧಿಗಳು ರೈತರ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ. ರೈತ ಸಂಸ್ಥೆಗಳು ತಮ್ಮ ಹಕ್ಕೊತ್ತಾಯಗಳನ್ನು ಮಂಡಿಸಲು ಅವಕಾಶವಿದೆ.ಸಮಾವೇಶದಲ್ಲಿ ಸಮಗ್ರವಾಗಿ ನಿರ್ಣಯ ಅಂಗೀಕರಿಸಿ ಅದನ್ನು ಸರಕಾರಕ್ಕೆ ತಲುಪಿಸಲಾಗುತ್ತದೆ.

ವಿಜಯ ಕರ್ನಾಟಕ ಪತ್ರಿಕೆ ವತಿಯಿಂದ 2019ರಲ್ಲಿ ಅಡಿಕೆ ಬೆಳೆಯುವ ಜಿಲ್ಲೆಗಳಲ್ಲಿ ಸರಣಿ ಸಮಾವೇಶ ನಡೆಸಿ ಸರಕಾರಕ್ಕೆ ಹಕ್ಕೊತ್ತಾಯ ಮಂಡಿಸಿದ ಫಲವಾಗಿ ಅಡಿಕೆ ಕಾರ್ಯಪಡೆ ರಚನೆಯೂ ಸೇರಿದಂತೆ ಅನೇಕ ಉಪಕ್ರಮಗಳನ್ನು ಸರಕಾರ ಕೈಗೊಂಡಿತ್ತು. ಇದೀಗ ಮತ್ತೊಮ್ಮೆ ಅಡಿಕೆ ಬೆಳೆಗಾರ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ವಿಜಯ ಕರ್ನಾಟಕ ಬೆಳೆಗಾರರ ಪರ ನಿಂತಿದೆ.

ದ.ಕ. ಜಿಲ್ಲಾ ಮಟ್ಟದ ಸಮಾವೇಶದಲ್ಲಿ ಜಿಲ್ಲೆಯ ಅಡಿಕೆ ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಜಿಲ್ಲೆಯ ಆರ್ಥಿಕ ಬೆನ್ನೆಲುಬಾದ ಅಡಿಕೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕೈಜೋಡಿಸಬೇಕೆಂದು ವಿನಂತಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

16 hours ago

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

3 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

3 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

3 days ago