ಮತ್ತೆ ಬರ್ಮಾ ಅಕ್ರಮ ಅಡಿಕೆ ಆಮದು | 220 ಕ್ಕೂ ಅಧಿಕ ಚೀಲ ಅಡಿಕೆ ವಶ |

September 27, 2022
8:00 AM

ಮತ್ತೆ ಅಡಿಕೆ ಆಮದು ತಡೆಗೆ ಪೊಲೀಸರು ಸಜ್ಜಾಗಿದ್ದಾರೆ.ಅಕ್ರಮವಾಗಿ ಅಡಿಕೆ ಮಾಡುವುದನ್ನು ಮಿಜೋರಾಂ ಹಾಗೂ ಗುವಾಹಟಿ ರೈಲು ನಿಲ್ದಾಣದಲ್ಲಿ ಪೊಲೀಸರು ಪತ್ತೆ ಮಾಡಿದ್ದಾರೆ. ಎರಡೂ ಕಡೆ ಸೇರಿ ಸುಮಾರು 220 ಚೀಲ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

Advertisement
Advertisement
Advertisement
Advertisement

ಮಿಜೋರಾಂ ಪೊಲೀಸರು ಲಾರಿಗಳಲ್ಲಿ ಅಕ್ರಮ ಬರ್ಮಾ ಅಡಿಕೆಯನ್ನು ಸಾಗಾಟ ಮಾಡುತ್ತಿದ್ದ ಪ್ರಕರಣ ಪತ್ತೆ ಮಾಡಿ ವಾಹನ ಸಹಿತ ಅಡಿಕೆಯನ್ನು  ವಶಪಡಿಸಿಕೊಂಡಿದ್ದಾರೆ.ಮಿಜೋರಾಂನ ಮಮಿತ್ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ  32 ಲಕ್ಷ ರೂ. ಮೌಲ್ಯದ ಅಕ್ರಮ ಬರ್ಮಾ ಅಡಿಕೆ  ವಶಪಡಿಸಿಕೊಂಡಿದ್ದಾರೆ. ಮಿಜೋರಾಂನ ಮಮಿತ್ ಜಿಲ್ಲೆಯ ಕೌರ್ತಾಹ್ ಉಪವಿಭಾಗದ ಕಡೆಗೆ ಅಡಿಕೆ ರವಾನೆಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು.ಅಡಿಕೆ ಸಾಗಿಸುತ್ತಿದ್ದ ಒಟ್ಟು ಆರು ವಾಹನಗಳನ್ನು ಮಿಜೋರಾಂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇಲ್ಲಿ  ಒಟ್ಟು 187 ಚೀಲಗಳಲ್ಲಿ ಅಡಿಕೆ ಪತ್ತೆಯಾಗಿತ್ತು.

Advertisement

ಇದೇ ವೇಳೆ ಗುವಾಹಟಿ ರೈಲು ನಿಲ್ದಾಣದಲ್ಲಿ 50 ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ ಬರ್ಮಾ ಅಡಿಕೆಯನ್ನು ರೈಲ್ವೇ ಪೊಲೀಸರು ವಶಪಡಿಸಿಕೊಂಡಿದ್ದಾರೆ. ರಾಜಧಾನಿ ಎಕ್ಸ್‌ಪ್ರೆಸ್‌ನ ಒಂದು ಬೋಗಿಯಿಂದ ಒಟ್ಟು 40 ಗೋಣಿಚೀಲಗಳು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಅಡಿಕೆಯನ್ನು ದಿಮಾಪುರದಿಂದ ಅಕ್ರಮವಾಗಿ ಸಾಗಿಸಲಾಗುತ್ತಿತ್ತು.

ಇದೆರಡು ದೊಡ್ಡ ಪ್ರಕರಣಗಳಾದರೆ, ಇನ್ನಷ್ಟು ಅಡಿಕೆ ಕಳ್ಳಸಾಗಾಣಿಕೆಯ ಪ್ರಯತ್ನಗಳು ನಡೆಯುತ್ತಲೇ ಇವೆ. ಇದೀಗ ಮತ್ತೆ ಗಡಿ ಭದ್ರತೆ ಹಾಗೂ ಪೊಲೀಸರು ಅಡಿಕೆ ಕಳ್ಳ ಸಾಗಾಣಿಕೆಯನ್ನು ತಡೆಯುತ್ತಿದ್ದಾರೆ. ಅಸ್ಸಾಂ, ಮಿಜೋರಾಂ ಮೂಲಕ ಅಡಿಕೆ ಕಳ್ಳಸಾಗಾಣಿಕೆಯಾಗಿ ಗುಜರಾತ್‌ ಕಡೆಗೆ ಅಡಿಕೆ ಸಾಗಾಣಿಕೆಯಾಗುತ್ತದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |
February 25, 2025
10:11 PM
by: The Rural Mirror ಸುದ್ದಿಜಾಲ
ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |
February 25, 2025
9:41 PM
by: The Rural Mirror ಸುದ್ದಿಜಾಲ
ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ
February 25, 2025
8:57 PM
by: The Rural Mirror ಸುದ್ದಿಜಾಲ
ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |
February 25, 2025
8:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror