ಈಶಾನ್ಯ ರಾಜ್ಯಗಳಿಂದ ವಿಮಾನದ ಮೂಲಕ ಅಡಿಕೆಯ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತ್ತಿದೆ. ವಾರದ ಹಿಂದಷ್ಟೇ ಕ್ಯಾಂಪ್ಕೋ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿಗಳಿಗೆ ಪತ್ರ ಬರೆದಿತ್ತು. ಇದೀಗ ಮತ್ತೆ ಅಧಿಕೃತವಾಗಿ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಅಡಿಕೆ ಕಳ್ಳಸಾಗಾಣಿಕೆಯನ್ನು ಬೆಂಗಳೂರಿನಲ್ಲಿ ಪತ್ತೆ ಮಾಡಿದ್ದಾರೆ.ಈಶಾನ್ಯ ರಾಜ್ಯಗಳಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ 11,500 ಕೆಜಿ ತೂಕದ 460 ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತರರಾಜ್ಯ ಅಡಿಕೆ ಸಾಗಣೆ ಪ್ರಕರಣವನ್ನು ಪತ್ತೆ ಹಚ್ಚಿದ್ದು, ಈಶಾನ್ಯ ರಾಜ್ಯಗಳಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಅಡಿಕೆ ಎಂದು ತಿಳಿದುಬಂದಿದೆ. ಈಶಾನ್ಯ ಭಾಗದಿಂದ, ಅಂದರೆ ಅಸ್ಸಾಂ ಮತ್ತು ಮಣಿಪುರದಿಂದ ಈ ಅಡಿಕೆ ರವಾನೆಯಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಬಿಲ್ಗಳಲ್ಲಿ ವ್ಯಕ್ತಿಗಳ ಹೆಸರುಗಳು ಮತ್ತು ಅವರ ಮೊಬೈಲ್ ಸಂಖ್ಯೆಗಳು ಇದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಿದಾಗ ವ್ಯಾಪಾರಿಗಳು ಎಂದು ತಿಳಿದುಬಂದಿದ್ದು, ಅವರು ನಾಪತ್ತೆಯಾಗಿದ್ದಾರೆ.
ಕಳೆದ ಕೆಲವು ಸಮಯಗಳಿಂದ ಬರ್ಮಾ ಅಡಿಕೆಯು ಕಳ್ಳದಾರಿಯ ಮೂಲಕ ಅಸ್ಸಾಂ, ಮಣಿಪುರ ಬಂದು ಅಲ್ಲಿಂದ ನಂತರ ವಿಮಾನದ ಮೂಲಕ ಬೇಕಾದ ಸ್ಥಳಗಳಿಗೆ ರವಾನೆಯಾಗುತಿತ್ತು. ಹೀಗೆ ಬಂದ ಅಡಿಕೆಯನ್ನು ಇಲ್ಲಿನ ಅಡಿಕೆಯ ಜೊತೆ ಬೆರೆಸಿ ಮತ್ತೆ ಮಾರುಕಟ್ಟೆಗೆ ಬಿಡುವ ಪ್ರಯತ್ನ ನಡೆಯುತ್ತಿದೆ. ಕಳೆದ ತಿಂಗಳು ಹಡಗಿನ ಮೂಲಕ ಬಂದಿರುವ ಅಡಿಕೆಯನ್ನೂ ಅಧಿಕಾರಿಗಳು ಪತ್ತೆ ಮಾಡಿದ್ದರು. ಪ್ರತೀ ಸಂದರ್ಭದಲ್ಲಿ ಕಳ್ಳ ಸಾಗಾಣಿಕೆದಾರರು ರೈತರ ಹೆಸರಿನಲ್ಲಿ ಸಾಗಾಟ ಮಾಡಿ ಇಲ್ಲಿಯ ಅಡಿಕೆ ಜೊತೆ ಬೆರೆಸಿ ಇಲ್ಲಿಯೂ ರೈತರ ಹೆಸರಿನಲ್ಲಿ ಸಂಸ್ಥೆಗಳಿ ಮಾರಾಟ ಮಾಡುತ್ತಿರುವುದು ಈ ಹಿಂದೆ ಬೆಳಕಿಗೆ ಬಂದಿತ್ತು.
ಅಕ್ರಮ ಸಾಗಾಟ ಹಿನ್ನೆಲೆಯಲ್ಲಿ ಹಾಗೂ ತೆರಿಗೆ ವಂಚನೆಯ ಹಿನ್ನೆಲೆಯಲ್ಲಿ ಕೆಜಿಎಸ್ಟಿ ಕಾಯ್ದೆಯ ಪ್ರಕಾರ 24 ಲಕ್ಷ ರೂಪಾಯಿ ದಂಡವನ್ನು ವಿಧಿಸಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…
ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ. ಏಕೆಂದರೆ ಈಗ ಕರ್ಕಾಟಕ…
ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಕಲಜೀವಿಗಳ ಆಡುಂಬೊಲ ನಮ್ಮೀ ಪ್ರಕೃತಿ. ಪ್ರಕೃತಿಯೊಡಲು ನಮ್ಮತಾಯ ಮಡಿಲು. ಪ್ರಕೃತಿಯು ಕೆಲವೆಡೆ ರುದ್ರರಮಣೀಯ;…
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…