Advertisement
MIRROR FOCUS

ಅಕ್ರಮವಾಗಿ ಅಡಿಕೆ ಸಾಗಾಣಿಕೆ | 460 ಚೀಲ ಅಡಿಕೆ ವಶಕ್ಕೆ | ವಿಮಾನದ ಮೂಲಕ ಅಸ್ಸಾಂನಿಂದ ಬರುತ್ತಿರುವ ಅಡಿಕೆ…! |

Share

ಈಶಾನ್ಯ ರಾಜ್ಯಗಳಿಂದ ವಿಮಾನದ ಮೂಲಕ ಅಡಿಕೆಯ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತ್ತಿದೆ. ವಾರದ ಹಿಂದಷ್ಟೇ ಕ್ಯಾಂಪ್ಕೋ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿಗಳಿಗೆ ಪತ್ರ ಬರೆದಿತ್ತು. ಇದೀಗ ಮತ್ತೆ ಅಧಿಕೃತವಾಗಿ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಅಡಿಕೆ ಕಳ್ಳಸಾಗಾಣಿಕೆಯನ್ನು ಬೆಂಗಳೂರಿನಲ್ಲಿ ಪತ್ತೆ ಮಾಡಿದ್ದಾರೆ.ಈಶಾನ್ಯ ರಾಜ್ಯಗಳಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ 11,500 ಕೆಜಿ ತೂಕದ 460 ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತರರಾಜ್ಯ ಅಡಿಕೆ ಸಾಗಣೆ ಪ್ರಕರಣವನ್ನು ಪತ್ತೆ ಹಚ್ಚಿದ್ದು, ಈಶಾನ್ಯ ರಾಜ್ಯಗಳಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಅಡಿಕೆ ಎಂದು ತಿಳಿದುಬಂದಿದೆ. ಈಶಾನ್ಯ ಭಾಗದಿಂದ, ಅಂದರೆ ಅಸ್ಸಾಂ ಮತ್ತು ಮಣಿಪುರದಿಂದ ಈ ಅಡಿಕೆ ರವಾನೆಯಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಬಿಲ್‌ಗಳಲ್ಲಿ ವ್ಯಕ್ತಿಗಳ ಹೆಸರುಗಳು ಮತ್ತು ಅವರ ಮೊಬೈಲ್ ಸಂಖ್ಯೆಗಳು ಇದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಿದಾಗ ವ್ಯಾಪಾರಿಗಳು ಎಂದು ತಿಳಿದುಬಂದಿದ್ದು, ಅವರು ನಾಪತ್ತೆಯಾಗಿದ್ದಾರೆ.

ಕಳೆದ ಕೆಲವು ಸಮಯಗಳಿಂದ ಬರ್ಮಾ ಅಡಿಕೆಯು ಕಳ್ಳದಾರಿಯ ಮೂಲಕ ಅಸ್ಸಾಂ, ಮಣಿಪುರ ಬಂದು ಅಲ್ಲಿಂದ ನಂತರ ವಿಮಾನದ ಮೂಲಕ ಬೇಕಾದ ಸ್ಥಳಗಳಿಗೆ ರವಾನೆಯಾಗುತಿತ್ತು.  ಹೀಗೆ ಬಂದ ಅಡಿಕೆಯನ್ನು ಇಲ್ಲಿನ ಅಡಿಕೆಯ ಜೊತೆ ಬೆರೆಸಿ ಮತ್ತೆ ಮಾರುಕಟ್ಟೆಗೆ ಬಿಡುವ ಪ್ರಯತ್ನ ನಡೆಯುತ್ತಿದೆ. ಕಳೆದ ತಿಂಗಳು ಹಡಗಿನ ಮೂಲಕ ಬಂದಿರುವ ಅಡಿಕೆಯನ್ನೂ ಅಧಿಕಾರಿಗಳು ಪತ್ತೆ ಮಾಡಿದ್ದರು.  ಪ್ರತೀ ಸಂದರ್ಭದಲ್ಲಿ ಕಳ್ಳ ಸಾಗಾಣಿಕೆದಾರರು ರೈತರ ಹೆಸರಿನಲ್ಲಿ ಸಾಗಾಟ ಮಾಡಿ ಇಲ್ಲಿಯ ಅಡಿಕೆ ಜೊತೆ ಬೆರೆಸಿ ಇಲ್ಲಿಯೂ ರೈತರ ಹೆಸರಿನಲ್ಲಿ ಸಂಸ್ಥೆಗಳಿ ಮಾರಾಟ ಮಾಡುತ್ತಿರುವುದು ಈ ಹಿಂದೆ ಬೆಳಕಿಗೆ ಬಂದಿತ್ತು.

ಅಕ್ರಮ ಸಾಗಾಟ ಹಿನ್ನೆಲೆಯಲ್ಲಿ ಹಾಗೂ ತೆರಿಗೆ ವಂಚನೆಯ ಹಿನ್ನೆಲೆಯಲ್ಲಿ  ಕೆಜಿಎಸ್‌ಟಿ ಕಾಯ್ದೆಯ ಪ್ರಕಾರ  24 ಲಕ್ಷ ರೂಪಾಯಿ  ದಂಡವನ್ನು ವಿಧಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

7 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

17 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

23 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

2 days ago