ಮತ್ತೆ ಅಡಿಕೆ ಆಮದು ತಡೆಗೆ ಪೊಲೀಸರು ಸಜ್ಜಾಗಿದ್ದಾರೆ.ಅಕ್ರಮವಾಗಿ ಅಡಿಕೆ ಮಾಡುವುದನ್ನು ಮಿಜೋರಾಂ ಹಾಗೂ ಗುವಾಹಟಿ ರೈಲು ನಿಲ್ದಾಣದಲ್ಲಿ ಪೊಲೀಸರು ಪತ್ತೆ ಮಾಡಿದ್ದಾರೆ. ಎರಡೂ ಕಡೆ ಸೇರಿ ಸುಮಾರು 220 ಚೀಲ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಮಿಜೋರಾಂ ಪೊಲೀಸರು ಲಾರಿಗಳಲ್ಲಿ ಅಕ್ರಮ ಬರ್ಮಾ ಅಡಿಕೆಯನ್ನು ಸಾಗಾಟ ಮಾಡುತ್ತಿದ್ದ ಪ್ರಕರಣ ಪತ್ತೆ ಮಾಡಿ ವಾಹನ ಸಹಿತ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ.ಮಿಜೋರಾಂನ ಮಮಿತ್ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 32 ಲಕ್ಷ ರೂ. ಮೌಲ್ಯದ ಅಕ್ರಮ ಬರ್ಮಾ ಅಡಿಕೆ ವಶಪಡಿಸಿಕೊಂಡಿದ್ದಾರೆ. ಮಿಜೋರಾಂನ ಮಮಿತ್ ಜಿಲ್ಲೆಯ ಕೌರ್ತಾಹ್ ಉಪವಿಭಾಗದ ಕಡೆಗೆ ಅಡಿಕೆ ರವಾನೆಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು.ಅಡಿಕೆ ಸಾಗಿಸುತ್ತಿದ್ದ ಒಟ್ಟು ಆರು ವಾಹನಗಳನ್ನು ಮಿಜೋರಾಂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇಲ್ಲಿ ಒಟ್ಟು 187 ಚೀಲಗಳಲ್ಲಿ ಅಡಿಕೆ ಪತ್ತೆಯಾಗಿತ್ತು.
ಇದೇ ವೇಳೆ ಗುವಾಹಟಿ ರೈಲು ನಿಲ್ದಾಣದಲ್ಲಿ 50 ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ ಬರ್ಮಾ ಅಡಿಕೆಯನ್ನು ರೈಲ್ವೇ ಪೊಲೀಸರು ವಶಪಡಿಸಿಕೊಂಡಿದ್ದಾರೆ. ರಾಜಧಾನಿ ಎಕ್ಸ್ಪ್ರೆಸ್ನ ಒಂದು ಬೋಗಿಯಿಂದ ಒಟ್ಟು 40 ಗೋಣಿಚೀಲಗಳು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಅಡಿಕೆಯನ್ನು ದಿಮಾಪುರದಿಂದ ಅಕ್ರಮವಾಗಿ ಸಾಗಿಸಲಾಗುತ್ತಿತ್ತು.
ಇದೆರಡು ದೊಡ್ಡ ಪ್ರಕರಣಗಳಾದರೆ, ಇನ್ನಷ್ಟು ಅಡಿಕೆ ಕಳ್ಳಸಾಗಾಣಿಕೆಯ ಪ್ರಯತ್ನಗಳು ನಡೆಯುತ್ತಲೇ ಇವೆ. ಇದೀಗ ಮತ್ತೆ ಗಡಿ ಭದ್ರತೆ ಹಾಗೂ ಪೊಲೀಸರು ಅಡಿಕೆ ಕಳ್ಳ ಸಾಗಾಣಿಕೆಯನ್ನು ತಡೆಯುತ್ತಿದ್ದಾರೆ. ಅಸ್ಸಾಂ, ಮಿಜೋರಾಂ ಮೂಲಕ ಅಡಿಕೆ ಕಳ್ಳಸಾಗಾಣಿಕೆಯಾಗಿ ಗುಜರಾತ್ ಕಡೆಗೆ ಅಡಿಕೆ ಸಾಗಾಣಿಕೆಯಾಗುತ್ತದೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…