ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ಹೆಚ್ಚುತ್ತಿದೆ. ಕಳೆದ ವಾರವಷ್ಟೇ ಬೃಹತ್ ಪ್ರಮಾಣದ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಇನ್ನೊಂದು ಅಂತಹದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಮಿಜೋರಾಂನಲ್ಲಿ ಅಸ್ಸಾಂ ರೈಫಲ್ಸ್, ಕಸ್ಟಮ್ಸ್ ಜಂಟಿ ಕಾರ್ಯಾಚರಣೆಯಲ್ಲಿ 1.79 ಕೋಟಿ ರೂ. ಮೌಲ್ಯದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ.……..ಮುಂದೆ ಓದಿ…..
ಚಂಫೈ ಜಿಲ್ಲೆಯ ಜೊಟೆ-ಟ್ಲಾಂಗ್ಸಮ್ ಕ್ರಾಸಿಂಗ್ ಪಾಯಿಂಟ್ ಬಳಿಯ ಕಾಡಿನಲ್ಲಿ ದಾಸ್ತಾನು ಇರಿಸಿದ್ದ 321 ಚೀಲ ಅಡಿಕೆಯನ್ನು ಅಸ್ಸಾಂ ರೈಫಲ್ಸ್ ಪಡೆ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ದಾಳಿಯಲ್ಲಿ ವಶಪಡಿಸಿಕೊಂಡಿದ್ದಾರೆ. ಮ್ಯಾನ್ಮಾರ್ನಿಂದ ಕಳ್ಳಸಾಗಣೆ ಮಾಡಲಾದ ಅಡಿಕೆಗಳನ್ನು ಭಾರತದ ಇತರ ಭಾಗಗಳಿಗೆ ಸಾಗಿಸುವ ಉದ್ದೇಶದಿಂದ ಕಾಡಿನಲ್ಲಿ ದಾಸ್ತಾನು ಮಾಡಿ ನಂತರ ಲಾರಿಗಳಲ್ಲಿ ತುಂಬಿ ಸಾಗಾಣಿಕೆ ಮಾಡಲಾಗುತ್ತದೆ.ಕಳೆದ ವಾರ ಅಂದರೆ ಮಾ.21 ರಂದು ಇದೇ ಮಾದರಿಯಲ್ಲಿ ಅಡಿಕೆ ಪತ್ತೆಯಾಗಿತ್ತು. ಅಂದು 1.08 ಕೋಟಿ ರೂ. ಮೌಲ್ಯದ ಅಡಿಕೆ ವಶಪಡಿಸಿಕೊಂಡಿದ್ದರು. ಮ್ಯಾನ್ಮಾರ್ನಿಂದ ದೊಡ್ಡ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಣೆಯಾಗುತ್ತಿರುವುದು ಅಸ್ಸಾಂ, ಮಿಜೋರಾಂ ಮತ್ತು ತ್ರಿಪುರಾ ರಾಜ್ಯಗಳ ರೈತರ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ, ಅಲ್ಲಿ ಅಡಿಕೆ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತದೆ. ಇದರ ಜೊತೆಗೆ ಇತರ ಕಡೆಯ ಅಡಿಕೆಯ ಮೇಲೂ ಪರಿಣಾಮ ಬೀರುತ್ತಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…