Advertisement
MIRROR FOCUS

ಇಂಡೋನೇಷ್ಯಾದ ಕಳಪೆ ಗುಣಮಟ್ಟದ ಅಡಿಕೆ ಕಳ್ಳಸಾಗಣೆಗೆ ತಡೆ | 100 ಕ್ಕೂ ಹೆಚ್ಚು ಟ್ರಕ್‌ಗಳಲ್ಲಿ ಅಡಿಕೆ ಕಳ್ಳಸಾಗಾಣಿಕೆಯಾಗಿರುವ ಶಂಕೆ

Share

ಅಡಿಕೆ ಕಳ್ಳಸಾಗಣೆ ಮತ್ತು ತೆರಿಗೆ ವಂಚನೆ ಜಾಲವನ್ನು ಮಹಾರಾಷ್ಟ್ರದಲ್ಲಿ ಅಧಿಕಾರಿಗಳು  ಭೇದಿಸಿದ್ದು, ಈ ಸಂದರ್ಭ ಪಾನ್ ಮಸಾಲಾದಲ್ಲಿ ಬಳಸಲಾಗುವ 11 ಲಾರಿಗಳಲ್ಲಿ ಬರುತ್ತಿದ್ದ ಇಂಡೋನೇಷ್ಯಾದ ಅಡಿಕೆ ಸಾಗಾಟವನ್ನು ತಡೆದಿದ್ದಾರೆ.

ಇಂಡೋನೇಷ್ಯಾದಿಂದ ಕಳಪೆ ಗುಣಮಟ್ಟದ ಅಡಿಕೆ ಕಳ್ಳಸಾಗಣೆ ಜಾಲವನ್ನು ಭೇದಿಸಿದ ಕೇಂದ್ರ ಸರಕು ಮತ್ತು ಸೇವಾ ತೆರಿಗೆ (ಸಿಜಿಎಸ್‌ಟಿ) ಇಲಾಖೆ, 2,500 ಟನ್‌ಗಳಿಗಿಂತ ಹೆಚ್ಚು ಕಳ್ಳಸಾಗಣೆ ಮಾಡಿದ 100 ಕ್ಕೂ ಹೆಚ್ಚು ಟ್ರಕ್‌ಗಳು ಈಗಾಗಲೇ ದೆಹಲಿಯ ವಿತರಕರನ್ನು ತಲುಪಿ ನಂತರ ಪಾನ್ ಮಸಾಲಾ ತಯಾರಕರಿಗೆ ಸರಬರಾಜು ಮಾಡಿರಬಹುದು ಎಂದು ಹೇಳಿದೆ, ಈ ಬಗ್ಗೆ ತನಿಖೆ ನಡೆಸುತ್ತಿದೆ. ಸದ್ಯ 11 ಲಾರಿಗಳಲ್ಲಿ ಸಾಗಾಟವಾಗುತ್ತಿದ್ದ ಅಡಿಕೆ ವಶಕ್ಕೆ ಪಡೆದಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಭಾರತೀಯ ಅಡಿಕೆಯಂತೆ ಹೋಲುವ ಕಳಪೆ ಗುಣಮಟ್ಟದ ಅಡಿಕೆಯನ್ನು ಭಾರತಕ್ಕೆ ತರಲಾಗಿದ್ದು ಕಳಪೆ ಅಡಿಕೆಗೆ  ಪಾಲಿಶ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲಾಖೆಯ ಮಾಹಿತಿ ಪ್ರಕಾರ, ಅಡಿಕೆ ಪೂರೈಕೆಗೆ ಜಿಎಸ್‌ಟಿ ನೋಂದಣಿಗಳು ಹೊಂದಿದ ಕರ್ನಾಟಕ ಮೂಲದ  ಎನ್ಎನ್ ಟ್ರೇಡರ್ಸ್ ಮತ್ತು ಎಸ್‌ಆರ್‌ಎಸ್ ಟ್ರೇಡರ್ಸ್‌ಗೆ ಸೇರಿವೆ. ಎರಡೂ ಸಂಸ್ಥೆಗಳ ಮಾಲೀಕರು ಬಡತನ ರೇಖೆಗಿಂತ ಕೆಳಗಿರುವ ಹಿನ್ನೆಲೆಯಿಂದ ಬಂದವರಾಗಿದ್ದು, ನಕಲಿ ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಶಂಕಿಸಲಾಗಿದೆ. ತನಿಖೆಯ ವೇಳೆ ಈ ಸಾಗಾಟದ ಹಿಂದೆ  ಕೇರಳದ ಕಾಸರಗೋಡಿನ ಖಾದರ್ ಖಾನ್ ಮತ್ತು ಕರ್ನಾಟಕದ ಮಂಗಳೂರಿನ ಸಮೀರ್ ಖಾನ್ ಇದ್ದಾರೆ ಎಂದು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ದಕ್ಷಿಣ ರಾಜ್ಯಗಳ ಮೂಲಕ ಕಳ್ಳಸಾಗಣೆ ಮಾಡಿದ ಅಡಿಕೆಯನ್ನು ರಾಸಾಯನಿಕ ಹಾಕಿ ಇಲ್ಲಿನ ಅಡಿಕೆಯಂತೆ ನಕಲು ಮಾಡಿ ನಂತರ ಮಾರಾಟ ಮಾಡಲಾಗುತ್ತಿತ್ತು.  ಇನ್ನೂ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ. (Photo Credit- India Today)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

12 minutes ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

54 minutes ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

5 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

6 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

16 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

16 hours ago