ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಬಯಲು | 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |

April 21, 2025
7:37 AM
ಸುಮಾರು 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಹಾಗೂ 12 ಟ್ರಕ್‌ಗಳನ್ನು ಮಹಾರಾಷ್ಟ್ರದ ಧಾರಾಶಿವ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಮಹಾರಾಷ್ಟ್ರದ ಧಾರಾಶಿವ ಪ್ರದೇಶದಲ್ಲಿ ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆಯ ದಂಧೆ ಬಯಲಾಗಿದೆ. ಸುಮಾರು 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.…..ಮುಂದೆ ಓದಿ….

“ದ ರೂರಲ್‌ ಮಿರರ್.ಕಾಂ” WhatsApp ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ….

ಮಹಾರಾಷ್ಟ್ರದ  ನಲ್ದುರ್ಗ ಬಳಿಯ ಫುಲ್ವಾಡಿ ಟೋಲ್ ಬಳಿ ಆಹಾರ ಮತ್ತು ಔಷಧ ವಿಭಾಗ ಹಾಗೂ ಧಾರಾಶಿವ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. 12 ಟ್ರಕ್ ವಶಪಡಿಸಿಕೊಳ್ಳಲಾಗಿದೆ.‌ ಅಡಿಕೆಯು ರಾಜಸ್ಥಾನ, ಗುಜರಾತ್ ಮತ್ತು ಕರ್ನಾಟಕದ ಕಡೆಗೆ ಸಾಗುವ ಬಗ್ಗೆ ಮಾಹಿತಿ ಇತ್ತು. ಕಳಪೆ ಅಡಿಕೆಯನ್ನು ಗುಟ್ಕಾ ಹಾಗೂ ಇತರ ಅಡಿಕೆಯ ಜೊತೆ ಬೆರೆಸಲು ಕೊಂಡೊಯ್ಯಲಾಗುತ್ತಿತ್ತು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.  ಸಾಗಾಣಿಗೆದಾರರ ಬಗ್ಗೆ ತನಿಖೆ ಆರಂಭವಾಗಿದೆ. 2 ಕೋಟಿ 25 ಲಕ್ಷ ರೂ. ಮೌಲ್ಯದ ಸದ್ಯ ಇಷ್ಟು ದೊಡ್ಡ ಪ್ರಮಾಣದ ಅಡಿಕೆ ಎಲ್ಲಿಗೆ ಹೋಗುತ್ತಿತ್ತು? ಎಂಬುದು ಪ್ರಶ್ನೆಯಾಗಿದೆ.

“ದ ರೂರಲ್‌ ಮಿರರ್.ಕಾಂ” WhatsApp ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ….

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?
September 6, 2026
12:28 PM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ
ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!
September 6, 2026
10:01 AM
by: ದ ರೂರಲ್ ಮಿರರ್.ಕಾಂ
ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror