ಒಡಿಶಾ ಕರಾವಳಿಯಲ್ಲಿ ಎರಡು ಮೀನುಗಾರಿಕಾ ದೋಣಿಗಳಿಂದ 710 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆಯನ್ನು ಭಾರತೀಯ ಕರಾವಳಿ ರಕ್ಷಣಾ ಪಡೆ ವಶಪಡಿಸಿಕೊಂಡಿದೆ. ಸುಮಾರು ₹1.5 ಕೋಟಿ ಮೌಲ್ಯದ ಅಡಿಕೆಯನ್ನು ವಶಪಡಿಸಿಕೊಂಡಿದೆ.
ಮಂಗಳವಾರ ಸಮುದ್ರದಲ್ಲಿ ಕಾರ್ಯಾಚರಣೆ ನಡೆಸಿದ ಕರಾವಳಿ ಕಾವಲು ಪಡೆ, ‘ಮಾ ಆಯೇಷಾ ಎಲ್’ ಮತ್ತು ‘ಮಾ ಆಯೇಷಾ ಎಲ್ ಐ’ ಎಂಬ ಎರಡು ಭಾರತೀಯ ಮೀನುಗಾರಿಕಾ ದೋಣಿಗಳನ್ನು ಪರಿಶೀಲನೆ ನಡೆಸಿತು. ಈ ವೇಳೆ ಸುಮಾರು 710 ಗೋಣಿ ಚೀಲಗಳ ಅಡಿಕೆ ಪತ್ತೆಯಾಯಿತು. ಪಶ್ಚಿಮ ಬಂಗಾಳದಲ್ಲಿ ನೋಂದಾಯಿತವಾಗಿದ್ದ ಈ ದೋಣಿಗಳು ಯಾವುದೇ ಮಾನ್ಯ ದಾಖಲೆಗಳಿಲ್ಲದೆ ಅಡಿಕೆಯನ್ನು ಸಾಗಿಸುತ್ತಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೋಣಿಗಳು ಮತ್ತು ಸಿಬ್ಬಂದಿಯನ್ನು ಒಡಿಶಾದ ಬಾಲಸೋರ್ನಲ್ಲಿರುವ ಕಸಾಫಲ್ ಮೀನುಗಾರಿಕಾ ಬಂದರಿಗೆ ಕರೆದೊಯ್ಯಲಾಗಿದ್ದು, ಹೆಚ್ಚಿನ ತನಿಖೆಗಾಗಿ ಕಸಾಫಲ್ ಮೆರೈನ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಭಾರತೀಯ ಕರಾವಳಿ ರಕ್ಷಣಾ ಪಡೆ ಮತ್ತು ಒಡಿಶಾ ಸಾಗರ ಪೊಲೀಸರ ಸಂಯುಕ್ತ ಕಾರ್ಯಾಚರಣೆ ಸಮುದ್ರದ ಭದ್ರತೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ.
ಸಮುದ್ರದಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು 24 ಗಂಟೆಗಳ ಜಾಗರೂಕತೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…