ಒಡಿಶಾ ಕರಾವಳಿಯಲ್ಲಿ ಎರಡು ಮೀನುಗಾರಿಕಾ ದೋಣಿಗಳಿಂದ 710 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆಯನ್ನು ಭಾರತೀಯ ಕರಾವಳಿ ರಕ್ಷಣಾ ಪಡೆ ವಶಪಡಿಸಿಕೊಂಡಿದೆ. ಸುಮಾರು ₹1.5 ಕೋಟಿ ಮೌಲ್ಯದ ಅಡಿಕೆಯನ್ನು ವಶಪಡಿಸಿಕೊಂಡಿದೆ.
ಮಂಗಳವಾರ ಸಮುದ್ರದಲ್ಲಿ ಕಾರ್ಯಾಚರಣೆ ನಡೆಸಿದ ಕರಾವಳಿ ಕಾವಲು ಪಡೆ, ‘ಮಾ ಆಯೇಷಾ ಎಲ್’ ಮತ್ತು ‘ಮಾ ಆಯೇಷಾ ಎಲ್ ಐ’ ಎಂಬ ಎರಡು ಭಾರತೀಯ ಮೀನುಗಾರಿಕಾ ದೋಣಿಗಳನ್ನು ಪರಿಶೀಲನೆ ನಡೆಸಿತು. ಈ ವೇಳೆ ಸುಮಾರು 710 ಗೋಣಿ ಚೀಲಗಳ ಅಡಿಕೆ ಪತ್ತೆಯಾಯಿತು. ಪಶ್ಚಿಮ ಬಂಗಾಳದಲ್ಲಿ ನೋಂದಾಯಿತವಾಗಿದ್ದ ಈ ದೋಣಿಗಳು ಯಾವುದೇ ಮಾನ್ಯ ದಾಖಲೆಗಳಿಲ್ಲದೆ ಅಡಿಕೆಯನ್ನು ಸಾಗಿಸುತ್ತಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೋಣಿಗಳು ಮತ್ತು ಸಿಬ್ಬಂದಿಯನ್ನು ಒಡಿಶಾದ ಬಾಲಸೋರ್ನಲ್ಲಿರುವ ಕಸಾಫಲ್ ಮೀನುಗಾರಿಕಾ ಬಂದರಿಗೆ ಕರೆದೊಯ್ಯಲಾಗಿದ್ದು, ಹೆಚ್ಚಿನ ತನಿಖೆಗಾಗಿ ಕಸಾಫಲ್ ಮೆರೈನ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಭಾರತೀಯ ಕರಾವಳಿ ರಕ್ಷಣಾ ಪಡೆ ಮತ್ತು ಒಡಿಶಾ ಸಾಗರ ಪೊಲೀಸರ ಸಂಯುಕ್ತ ಕಾರ್ಯಾಚರಣೆ ಸಮುದ್ರದ ಭದ್ರತೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ.
ಸಮುದ್ರದಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು 24 ಗಂಟೆಗಳ ಜಾಗರೂಕತೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…