ನಿಲ್ಲದ ಅಡಿಕೆ ಕಳ್ಳಸಾಗಾಣಿಕೆ | ಬರ್ಮಾ ಅಡಿಕೆ ಅಕ್ರಮ ಸಾಗಾಟಕ್ಕೆ ಮತ್ತೆ ತಡೆ |

November 5, 2024
7:06 AM

ಈಶಾನ್ಯ ರಾಜ್ಯಗಳ ಮೂಲಕ ಭಾರತಕ್ಕೆ ಕಳ್ಳದಾರಿಯ ಮೂಲಕ ಸಾಗಾಟವಾಗುವ ಬರ್ಮಾ ಅಡಿಕೆ ಇನ್ನೂ ಸ್ಥಗಿತವಾಗಿಲ್ಲ. ಭಾರತದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಚೇತರಿಕೆ ಕಾಣುತ್ತಿರುವಂತೆಯೇ ಹೆಚ್ಚಿನ ಪ್ರಮಾಣದಲ್ಲಿ ಬರ್ಮಾ ಅಡಿಕೆ ಸಾಗಾಟ ನಡೆಯುತ್ತಿದೆ.ಇದೀಗ ಮತ್ತೆ ಅಸ್ಸಾಂ ರೈಫಲ್ಸ್ ಹಾಗೂ ಗಡಿಭದ್ರತಾ ಸಿಬಂದಿಗಳು ಪ್ರತ್ಯೇಕ ಪ್ರಕರಣಗಳಲ್ಲಿ ಸುಮಾರು 2.4 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಅಸ್ಸಾಂ ರೈಫಲ್ಸ್ ಮಣಿಪುರದಲ್ಲಿ  2.4 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಅಡಿಕೆಯನ್ನು ತಡೆದಿದೆ. ಖುಗಾ ಗ್ರಾಮದಲ್ಲಿ ಕಾರ್ಯಾಚರಣೆ ನಡೆದಿದ್ದು, ನಾಲ್ಕು ವಾಹನಗಳಲ್ಲಿ 350 ಚೀಲ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದ್ದು, ಗಡಿಯಾಚೆಗಿನ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಲಾಗಿದೆ.

ಇನ್ನೊಂದು ಪ್ರಕರಣದಲ್ಲಿ  ಅಸ್ಸಾಂ ರೈಫಲ್ಸ್, ಮಿಜೋರಾಂ ಅಬಕಾರಿ ಇಲಾಖೆ ಮತ್ತು ಕೇಂದ್ರ ಕಸ್ಟಮ್ಸ್ ತಂಡವು  ಲಾರಿಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರ್ಮಾ ಅಡಿಕೆಯನ್ನು ಅಸ್ಸಾಂನ ಚಂಫೈ ಜಿಲ್ಲೆಯಲ್ಲಿ ಪತ್ತೆ ಮಾಡಿದೆ.

ಕಳೆದ ಕೆಲವು ಸಮಯಗಳಿಂದ ಅಡಿಕೆ ಅಕ್ರಮವಾಗಿ ಆಮದು ಮಾಡುವ ಪ್ರಯತ್ನ ನಡೆಯುತ್ತಲೇ ಇದೆ. ಅಕ್ರಮ ಸಾಗಾಟವನ್ನು ಪತ್ತೆ ಮಾಡಿ ತಡೆಯೊಡ್ಡುವ ಕೆಲಸವೂ ಅಸ್ಸಾಂ ರೈಫಲ್ಸ್‌, ಗಡಿಭದ್ರತಾ ಪಡೆ ಮಾಡುತ್ತದೆ. ಹಾಗಿದ್ದರೂ ಪದೇ ಪದೇ ಅಕ್ರಮ ಅಡಿಕೆ ಸಾಗಾಟವಾಗುತ್ತಿದೆ, ಸಾಗಾಟವಾದ ಅಡಿಕೆಯ ಮುಂದಿನ ಹಂತಗಳು ಸುದ್ದಿಯಾಗುವುದಿಲ್ಲ. ಈ ಕಾರಣದಿಂದ ಅಕ್ರಮ ಅಡಿಕೆ ಸಾಗಾಟ ಪ್ರಕರಣದಲ್ಲಿ ವಶಕ್ಕೆ ತೆಗೆದುಕೊಂಡ ಅಡಿಕೆಯನ್ನು ನಾಶ ಮಾಡಬೇಕು ಎಂದು ಅಡಿಕೆ ಬೆಳೆಗಾರರು ಒತ್ತಾಯಿಸಿದ್ದರು.

Assam Rifles have successfully intercepted a massive consignment of illegal arecanuts worth Rs 2.4 crore in Manipur. The operation took place in Khuga village, where 350 sacks of the Arecanuts were seized from four vehicles, foiling a cross-border smuggling attempt.

There have been ongoing attempts to illegally import Arecanuts for some time now. Arecaut farmers have requested that any Arecanuts seized in cases of illegal smuggling be destroyed.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror