MIRROR FOCUS

ನಿಲ್ಲದ ಅಡಿಕೆ ಕಳ್ಳಸಾಗಾಣಿಕೆ | ಬರ್ಮಾ ಅಡಿಕೆ ಅಕ್ರಮ ಸಾಗಾಟಕ್ಕೆ ಮತ್ತೆ ತಡೆ |

Share

ಈಶಾನ್ಯ ರಾಜ್ಯಗಳ ಮೂಲಕ ಭಾರತಕ್ಕೆ ಕಳ್ಳದಾರಿಯ ಮೂಲಕ ಸಾಗಾಟವಾಗುವ ಬರ್ಮಾ ಅಡಿಕೆ ಇನ್ನೂ ಸ್ಥಗಿತವಾಗಿಲ್ಲ. ಭಾರತದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಚೇತರಿಕೆ ಕಾಣುತ್ತಿರುವಂತೆಯೇ ಹೆಚ್ಚಿನ ಪ್ರಮಾಣದಲ್ಲಿ ಬರ್ಮಾ ಅಡಿಕೆ ಸಾಗಾಟ ನಡೆಯುತ್ತಿದೆ.ಇದೀಗ ಮತ್ತೆ ಅಸ್ಸಾಂ ರೈಫಲ್ಸ್ ಹಾಗೂ ಗಡಿಭದ್ರತಾ ಸಿಬಂದಿಗಳು ಪ್ರತ್ಯೇಕ ಪ್ರಕರಣಗಳಲ್ಲಿ ಸುಮಾರು 2.4 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

Advertisement

ಅಸ್ಸಾಂ ರೈಫಲ್ಸ್ ಮಣಿಪುರದಲ್ಲಿ  2.4 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಅಡಿಕೆಯನ್ನು ತಡೆದಿದೆ. ಖುಗಾ ಗ್ರಾಮದಲ್ಲಿ ಕಾರ್ಯಾಚರಣೆ ನಡೆದಿದ್ದು, ನಾಲ್ಕು ವಾಹನಗಳಲ್ಲಿ 350 ಚೀಲ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದ್ದು, ಗಡಿಯಾಚೆಗಿನ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಲಾಗಿದೆ.

ಇನ್ನೊಂದು ಪ್ರಕರಣದಲ್ಲಿ  ಅಸ್ಸಾಂ ರೈಫಲ್ಸ್, ಮಿಜೋರಾಂ ಅಬಕಾರಿ ಇಲಾಖೆ ಮತ್ತು ಕೇಂದ್ರ ಕಸ್ಟಮ್ಸ್ ತಂಡವು  ಲಾರಿಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರ್ಮಾ ಅಡಿಕೆಯನ್ನು ಅಸ್ಸಾಂನ ಚಂಫೈ ಜಿಲ್ಲೆಯಲ್ಲಿ ಪತ್ತೆ ಮಾಡಿದೆ.

ಕಳೆದ ಕೆಲವು ಸಮಯಗಳಿಂದ ಅಡಿಕೆ ಅಕ್ರಮವಾಗಿ ಆಮದು ಮಾಡುವ ಪ್ರಯತ್ನ ನಡೆಯುತ್ತಲೇ ಇದೆ. ಅಕ್ರಮ ಸಾಗಾಟವನ್ನು ಪತ್ತೆ ಮಾಡಿ ತಡೆಯೊಡ್ಡುವ ಕೆಲಸವೂ ಅಸ್ಸಾಂ ರೈಫಲ್ಸ್‌, ಗಡಿಭದ್ರತಾ ಪಡೆ ಮಾಡುತ್ತದೆ. ಹಾಗಿದ್ದರೂ ಪದೇ ಪದೇ ಅಕ್ರಮ ಅಡಿಕೆ ಸಾಗಾಟವಾಗುತ್ತಿದೆ, ಸಾಗಾಟವಾದ ಅಡಿಕೆಯ ಮುಂದಿನ ಹಂತಗಳು ಸುದ್ದಿಯಾಗುವುದಿಲ್ಲ. ಈ ಕಾರಣದಿಂದ ಅಕ್ರಮ ಅಡಿಕೆ ಸಾಗಾಟ ಪ್ರಕರಣದಲ್ಲಿ ವಶಕ್ಕೆ ತೆಗೆದುಕೊಂಡ ಅಡಿಕೆಯನ್ನು ನಾಶ ಮಾಡಬೇಕು ಎಂದು ಅಡಿಕೆ ಬೆಳೆಗಾರರು ಒತ್ತಾಯಿಸಿದ್ದರು.

Assam Rifles have successfully intercepted a massive consignment of illegal arecanuts worth Rs 2.4 crore in Manipur. The operation took place in Khuga village, where 350 sacks of the Arecanuts were seized from four vehicles, foiling a cross-border smuggling attempt.

There have been ongoing attempts to illegally import Arecanuts for some time now. Arecaut farmers have requested that any Arecanuts seized in cases of illegal smuggling be destroyed.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಈಗ ಮನಸುಗಳಿಗೇ ಒಂದು ಬ್ರಹ್ಮಕಲಶ ಯಾಕಾಗಬೇಕು…?

ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…

48 minutes ago

ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |

ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…

1 hour ago

ಹೊಸರುಚಿ | ಗುಜ್ಜೆ ಕಡಲೆ ಗಸಿ

ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…

1 hour ago

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …

2 hours ago

ರೆಪೋ ದರದಲ್ಲಿ ಶೇಕಡ  0.25ರಷ್ಟು  ಕಡಿತ | ಶೇಕಡ 6.25ರಿಂದ ಶೇಕಡ 6ಕ್ಕೆ  ಇಳಿಕೆ

ಭಾರತೀಯ ರಿಸರ್ವ್ ಬ್ಯಾಂಕ್ ನ  ಹಣಕಾಸು ನೀತಿ ಸಮಿತಿ ಹಲವು  ಮಹತ್ವದ ನಿರ್ಧಾರಗಳನ್ನು…

2 hours ago

ಪಾರಂಪರಿಕ ಮಾಗಿ ಉಳುಮೆ ಮಾಡಿದರೆ ರೈತರಿಗೆ ಹೆಚ್ಚಿನ ಅನುಕೂಲ | ಕೃಷಿ ಇಲಾಖೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವುರಿಂದ, ಪಾರಂಪರಿಕ ಮಾಗಿ…

2 hours ago