Advertisement
ಸುದ್ದಿಗಳು

ಅಡಿಕೆ ದಾಸ್ತಾನು | ವಿಷರಹಿತ ದಾಸ್ತಾನು ಕೊಠಡಿ ಬಗ್ಗೆ ಕೃಷಿಕ ಎ ಪಿ ಸದಾಶಿವ ಹೇಳುತ್ತಾರೆ….|

Share
ಅಡಿಕೆ ದಾಸ್ತಾನು ಸಂದರ್ಭ ಯಾವುದೇ ಮಾತ್ರೆಗಳನ್ನು ಹಾಕದೆ ನೈಟ್ರೋಜನ್‌ ಗ್ಯಾಸ್‌ ಮೂಲಕ ಅಡಿಕೆ ಸಂರಕ್ಷಣೆ ಮಾಡುವ ವಿಧಾನದ ವಿಶೇಷ ವರದಿಯನ್ನು ರೂರಲ್‌ ಮಿರರ್‌ ಪ್ರಕಟ ಮಾಡಿತ್ತು. ಈ ಬಗ್ಗೆ ಸಾವಯವ ಕೃಷಿಕ ಎ ಪಿ ಸದಾಶಿವ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದರ ಯಥಾವತ್ತಾದ ರೂಪ ಇಲ್ಲಿದೆ…
ರೂರಲ್ ಮಿರರ್ ಪತ್ರಿಕೆಯಲ್ಲಿ ಒಂದು ಎಕ್ಸ್ ಕ್ಲೂಸಿವ್ ಸುದ್ದಿ…. ಪ್ರಕೃತಿಯ ಬಗ್ಗೆ,ಸಾವಯವದ ಬಗ್ಗೆ, ಆರೋಗ್ಯದ ಬಗ್ಗೆ, ವಿಷರಹಿತ ಆಹಾರದ ಬಗ್ಗೆ, ಆ ಮೂಲಕ ನಮ್ಮ ಅಳಿವು ಉಳಿವಿನ ಬಗ್ಗೆ ಚಿಂತಿಸುವವನಿಗೆ ಬಲು ಸಂತೋಷ ಕೊಡುವ ಸುದ್ದಿ.
ಪಿಂಗಾರ ಸಂಸ್ಥೆಯು ಕಳೆದ ಎರಡು ವರ್ಷಗಳ ಅಧ್ಯಯನದ ಫಲವನ್ನು ಇಂದು ಬಿಡುಗಡೆ ಮಾಡಿದೆ. ಅಲ್ಯುಮಿನಿಯಂ ಪಾಸ್ಪೈಡು ವಿಷವಿಲ್ಲದೆ, ಕೃತಕ ಸಂರಕ್ಷಕಗಳಿಲ್ಲದೆ  ಸಾರಜನಕ(ನೈಟ್ರೋಜನ್ )ಗಾಳಿಯ ಮೂಲಕ ವರ್ಷಗಳ ಕಾಲ ಯಾವುದೇ ಹುಳು ಹುಪ್ಪಟೆಗಳಿಂದ ಕೆಡದಂತೆ ಸಂರಕ್ಷಿಸಿ ಇಡಬಹುದೆಂಬ ಬಲು ದೊಡ್ಡ ಸಂಶೋಧನೆ. ತಂಪು ವಾತಾಯನದ ವ್ಯವಸ್ಥೆಯೊಂದಿಗೆ ಇಡಬಹುದೆಂದು ಕಂಡುಕೊಂಡಿದ್ದರೂ ಅದಕ್ಕಾಗುವ ದುಬಾರಿ ವೆಚ್ಚ, ಬಳಸಬೇಕಾದ ವಿದ್ಯುತ್ತು ಎಲ್ಲವೂ ಗಗನ ಕುಸುಮವೇ ಆದಕಾರಣ ಅದರ ಬಳಿ ಸಾರಲು ಯಾರೂ ಹೋಗಿಲ್ಲ.! ಚಿಕ್ಕ ಚಿಕ್ಕ ಆಹಾರ ಪೊಟ್ಟಣಗಳಲ್ಲಿ ಬಳಸುವ ಸಾರಜನಕದ ವಿಧಾನವನ್ನು  ಅಡಿಕೆಯಲ್ಲಿ ಯಾಕೆ ಮಾಡಬಾರದೆಂದು ಪ್ರಯೋಗಿಸಿ ಸಾಫಲ್ಯತೆಯನ್ನು  ಕಂಡವರು ಪಿಂಗಾರ ಸಂಸ್ಥೆಯವರು.
ಹೌದು, ಪಿಂಗಾರದ ಅಧ್ಯಕ್ಷ ರಾಮ ಕಿಶೋರ್ ಮಂಚಿಯವರು ಹುಟ್ಟು ಕೃಷಿಕರು. ಸಾವಯವದಲ್ಲಿ ಅತಿಯಾದ ಆಸಕ್ತಿ. ಯಾವ ಕಾರಣಕ್ಕೂ ಉಣ್ಣುವ ಆಹಾರದಲ್ಲಿ ವಿಷವನ್ನು ಬಳಸಲಾರರು. ಮಾತ್ರೆ ಇದೆ ಎಂದು ಅಡಿಕೆಯನ್ನು ಸುಲಿದು ಇಡಲಾರರು. ಸುಲಭದ ಗೊಬ್ಬರದ ದಾರಿ ಇದೆ ಎಂದು ಗೊತ್ತಿದ್ದರೂ, ಕಷ್ಟದ ದಾರಿಯಾದ ಗೋ ಸಾಕಣೆ, ಸುರಕ್ಷಿತ ಮತ್ತು ಸುಸ್ಥಿರ ಎಂಬ ಮನೋಭಾವದವರು ಮತ್ತು ಅದನ್ನು ಸಾಧಿಸಿ ತೋರಿದವರು.
ಓರ್ವ ಅಪ್ಪಟ ಸಾವಯವ ಕೃಷಿಕ ಪಿಂಗಾರದಂತಹ ಸಂಸ್ಥೆಯ ಅಧ್ಯಕ್ಷರಾದ ಮೇಲೆ ಕೇಳಬೇಕೆ? ಅನೇಕ ರೈತ ಸ್ನೇಹಿ ಕಾರ್ಯಕ್ರಮಗಳನ್ನು ಪಿಂಗಾರದ ಮೂಲಕ ಹಮ್ಮಿಕೊಂಡು ಸಾಧಿಸಿದವರು, ಸುಲಿದ ಅಡಿಕೆಯನ್ನೇ ಸಂಸ್ಥೆ ಖರೀದಿಸಿದಾಗ ಮಾತ್ರೆ ಇಲ್ಲದೆ ಕಾಪಿಡುವ ಬಗೆಯ ಬಗ್ಗೆ ಚಿಂತಿಸಿದರು. ಅದರ ಫಲಶ್ರುತಿಯೇ ಜಲಜನಕದ ವಾಯು.
ಅಷ್ಟೊಂದು ಜನ ಮಹಾಮಹಾವಿಜ್ಞಾನಿಗಳಿದ್ದಾರೆ, ದಾಸ್ತಾನು ಕೊಠಡಿಯ ತಂತ್ರಜ್ಞರಿದ್ದಾರೆ, ಅವರೆಲ್ಲರೂ ಕಂಡುಕೊಂಡದ್ದು ವಿಷವಾದರೇನು? ಉತ್ಪನ್ನ ಹಾಳಾಗದಿದ್ದರಾಯಿತು ಎಂಬುದನ್ನು ಮಾತ್ರ ! ಕಾಣುವ ಹುಳಗಳಿಗಿಂತ ಕಾಣದ ವಿಷ ಹೆಚ್ಚು ಅಪಾಯಕಾರಿ ಎಂಬುದರ ಬಗ್ಗೆ ಯೋಚನೆಯನ್ನೇ ಮಾಡಲಿಲ್ಲವೇ? ಹುಳುಗಳ ನಾಶಕ್ಕಾಗಿ ಬಳಸುವ ಸಂರಕ್ಷಗಳು ನಮ್ಮ ಅರಿವಿಗೆ ಬಾರದೇ ಮನುಕುಲದ ಅಸ್ತಿತ್ವವನ್ನೇ ನಾಶ ಮಾಡಬಲ್ಲದು ಎಂಬುದರ ಬಗ್ಗೆ ಯೋಚಿಸಲಿಲ್ಲವೇ?
ಇದೋ !ಓರ್ವ ಅಪ್ಪಟ ಸಾವಯವ ಕೃಷಿಕ ಸಂಸ್ಥೆಯೊಂದರ ಅಧ್ಯಕ್ಷರಾಗಿ ಯಾರಿಗೂ, ಯಾವುದಕ್ಕೂ ಅಪಾಯಕಾರಿಯಾಗದಂತಹ ಮಿತವ್ಯಯ ಕಾರಿಯಾದ ಹೊಸ ಸಂರಕ್ಷಣಾ ವ್ಯವಸ್ಥೆ ಒಂದನ್ನು  ಹುಟ್ಟುಹಾಕಿದ್ದಾರೆ . ಅಡಿಕೆ ಮಾತ್ರವಲ್ಲ ನಾವುಣ್ಣುವ ಅಕ್ಕಿ ಬೇಳೆ ಕಾಳುಗಳಿಂದ ಹಿಡಿದು ಸಮಸ್ತ ಆಹಾರದ ವಸ್ತುಗಳಿಗೂ ತಿನ್ನುವ ಕೊನೆಯ ಹಂತದಲ್ಲಾದರೂ ವಿಷವಿಲ್ಲದೆ ಕಾಪಿಡುವ ವ್ಯವಸ್ಥೆ ಒಂದಕ್ಕೆ ಶ್ರೀಕಾರ ಬರೆದಿದ್ದಾರೆ. ಅಡಿಕೆ ಕ್ಯಾನ್ಸರ್ ಕಾರಕ ಎಂಬ ಪಟ್ಟದಿಂದ ಹೊರಬರಲಿ. ಸುದ್ದಿ  ಎಲ್ಲಾ ಕಡೆಗೂ ಪ್ರಚಾರವಾಗಲಿ, ಪ್ರಸಾರವಾಗಲಿ. ವಿಷರಹಿತ ಗೋಧಾಮುಗಳು ಎಲ್ಲಾ ಕಡೆ ನಿರ್ಮಾಣವಾಗಲಿ   ಆ ಮೂಲಕ ವಿಷ ರಹಿತ ಆಹಾರ ನಮ್ಮೆಲ್ಲರದಾಗಲಿ ಎಂಬ ಆಶಯ.
ಬರಹ :
ಎ.ಪಿ. ಸದಾಶಿವ ಮರಿಕೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಎ ಪಿ ಸದಾಶಿವ ಮರಿಕೆ

ಸಾವಯವ ಕೃಷಿಕರು, ಪುತ್ತೂರು ಕಳೆದ ಹಲವಾರು ವರ್ಷಗಳಿಂದ ಸಾವಯವ ಕೃಷಿ, ಗೋಆಧಾರಿತ ಕೃಷಿಯ ಮೂಲಕ ಗಮನ ಸೆಳೆದ ಕೃಷಿಕ ಇವರು.

Published by
ಎ ಪಿ ಸದಾಶಿವ ಮರಿಕೆ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

3 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

7 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

16 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

16 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

17 hours ago