MIRROR FOCUS

ಅಡಿಕೆ ಧಾರಣೆ ಹಾಗೂ ಕಳ್ಳತನ | ಅಡಿಕೆ ಕಳ್ಳತನಕ್ಕೆ ಮರವನ್ನೇ ಕಡಿದ ಕಳ್ಳರು…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಧಾರಣೆ ಏರಿಕೆ ಕೃಷಿಕರಿಗೆ ಬಹಳಷ್ಟು ಖುಷಿ ತಂದಿದೆ. ಇದೀಗ ಕೃಷಿಕರಿಗೂ, ಅಡಿಕೆ ವ್ಯಾಪಾರಿಗಳಿಗೂ ಕಳ್ಳರ ಭಯ ಆರಂಭವಾಗಿದೆ. ಒಂದು ಕಡೆ ಅಡಿಕೆ ಕಳ್ಳತನಕ್ಕೆ ಮರವನ್ನೇ ಕಡಿದರೆ, ಇನ್ನೊಂದು ಕಡೆ ಅಡಿಕೆ ಮಂಡಿ ಮಾಲೀಕನಿಗೆ 7 ಕೋಟಿ ರೂಪಾಯಿ ಪಂಗನಾಮ ಹಾಕಿದ್ದರೆ ಅವರದೇ ಸಿಬಂದಿಗಳು..!.

Advertisement

ಶಿವಮೊಗ್ಗ ಎಪಿಎಂಸಿಯಲ್ಲಿ ಅಡಿಕೆ ಮಂಡಿ ಮಾಲೀಕನಿಗೆ  7 ಕೋಟಿ ರೂಪಾಯಿ ವಂಚನೆ ಆಗಿದೆ. ನಕಲಿ ಬಿಲ್‌ ಸೃಷ್ಟಿಸಿ ಅಡಿಕೆ ಮಂಡಿ ಮಾಲೀಕರೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ. ಮಂಡಿ ಮಾಲೀಕ ಮಂಜುನಾಥ್‌ ವಿನೋಬನಗರ ಠಾಣೆಗೆ ದೂರು ನೀಡಿದ್ದಾರೆ. ಏಳು ವರ್ಷದಿಂದ ಮೇಘನಾ ಮತ್ತು ಮೂರು ವರ್ಷದಿಂದ ಸಹನಾ ಕೆಲಸ ಮಾಡುತ್ತಿದ್ದರು. ಅಂಗಡಿಯ ಎಲ್ಲ ವ್ಯವಹಾರ ಮತ್ತು ಲೆಕ್ಕಪತ್ರಗಳನ್ನು ಈ ಇಬ್ಬರು ಮಹಿಳೆಯರು ನೋಡಿಕೊಳ್ಳುತ್ತಿದ್ದರು. ಮಂಜುನಾಥ್ ಪತ್ನಿಗೆ ಅನಾರೋಗ್ಯ ಇತ್ತು. ಈ ಹಿನ್ನೆಲೆಯಲ್ಲಿ ವ್ಯವಹಾರಗಳನ್ನು ಮಹಿಳೆಯರು ನೋಡಿಕೊಳ್ಳುತ್ತಿದ್ದರು. ಈ ಸಮಯದಲ್ಲಿ ನಕಲಿ ಬಿಲ್‌ ಸೃಷ್ಟಿಸಿ ವಂಚನೆ ಮಾಡಿದ್ದರು.

ಮೂಡಿಗೆರೆ ಬಳಿಯ ಹೆಸಗಲ್‌ ಗ್ರಾಮದಲ್ಲಿ ದಿವಾಕರ್‌ ಎಂಬವರ ತೋಟದಿಂದ ಅಡಿಕೆ ಮರವನ್ನೇ ಕಡಿದು ಅಡಿಕೆ ಕಳ್ಳತನ ಮಾಡಿರುವ ಘಟನೆ ವರದಿಯಾಗಿದೆ. ರಾತ್ರಿ ವೇಳೆ ತೋಟಕ್ಕೆ ನುಗ್ಗಿದ ಕಳ್ಳರು ಅಡಿಕೆ ಮರವನ್ನು ಕಡಿದು ಅದರಿಂದ ಅಡಿಕೆ ಕಳ್ಳತನ ಮಾಡಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಸಮೀಪದ ಸಿಸಿ ಟಿವಿಯಲ್ಲಿ ಈ ಕಳ್ಳತನದ ದೃಶ್ಯ ಸೆರೆಯಾದ ಹಿನ್ನೆಲೆಯಲ್ಲಿ ಖಚಿತವಾಗಿ ದೂರು ನೀಡಲಾಗಿದೆ.ಸುಮಾರು 8 ಮರಗಳನ್ನು ಕಡಿದು ಅಡಿಕೆ ಕಳ್ಳತನ ಮಾಡಲಾಗಿತ್ತು.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ

ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…

9 hours ago

ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…

16 hours ago

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

21 hours ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

23 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

2 days ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago