ಅಡಿಕೆ ಧಾರಣೆ ಏರಿಕೆ ಕೃಷಿಕರಿಗೆ ಬಹಳಷ್ಟು ಖುಷಿ ತಂದಿದೆ. ಇದೀಗ ಕೃಷಿಕರಿಗೂ, ಅಡಿಕೆ ವ್ಯಾಪಾರಿಗಳಿಗೂ ಕಳ್ಳರ ಭಯ ಆರಂಭವಾಗಿದೆ. ಒಂದು ಕಡೆ ಅಡಿಕೆ ಕಳ್ಳತನಕ್ಕೆ ಮರವನ್ನೇ ಕಡಿದರೆ, ಇನ್ನೊಂದು ಕಡೆ ಅಡಿಕೆ ಮಂಡಿ ಮಾಲೀಕನಿಗೆ 7 ಕೋಟಿ ರೂಪಾಯಿ ಪಂಗನಾಮ ಹಾಕಿದ್ದರೆ ಅವರದೇ ಸಿಬಂದಿಗಳು..!.
ಶಿವಮೊಗ್ಗ ಎಪಿಎಂಸಿಯಲ್ಲಿ ಅಡಿಕೆ ಮಂಡಿ ಮಾಲೀಕನಿಗೆ 7 ಕೋಟಿ ರೂಪಾಯಿ ವಂಚನೆ ಆಗಿದೆ. ನಕಲಿ ಬಿಲ್ ಸೃಷ್ಟಿಸಿ ಅಡಿಕೆ ಮಂಡಿ ಮಾಲೀಕರೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ. ಮಂಡಿ ಮಾಲೀಕ ಮಂಜುನಾಥ್ ವಿನೋಬನಗರ ಠಾಣೆಗೆ ದೂರು ನೀಡಿದ್ದಾರೆ. ಏಳು ವರ್ಷದಿಂದ ಮೇಘನಾ ಮತ್ತು ಮೂರು ವರ್ಷದಿಂದ ಸಹನಾ ಕೆಲಸ ಮಾಡುತ್ತಿದ್ದರು. ಅಂಗಡಿಯ ಎಲ್ಲ ವ್ಯವಹಾರ ಮತ್ತು ಲೆಕ್ಕಪತ್ರಗಳನ್ನು ಈ ಇಬ್ಬರು ಮಹಿಳೆಯರು ನೋಡಿಕೊಳ್ಳುತ್ತಿದ್ದರು. ಮಂಜುನಾಥ್ ಪತ್ನಿಗೆ ಅನಾರೋಗ್ಯ ಇತ್ತು. ಈ ಹಿನ್ನೆಲೆಯಲ್ಲಿ ವ್ಯವಹಾರಗಳನ್ನು ಮಹಿಳೆಯರು ನೋಡಿಕೊಳ್ಳುತ್ತಿದ್ದರು. ಈ ಸಮಯದಲ್ಲಿ ನಕಲಿ ಬಿಲ್ ಸೃಷ್ಟಿಸಿ ವಂಚನೆ ಮಾಡಿದ್ದರು.
ಮೂಡಿಗೆರೆ ಬಳಿಯ ಹೆಸಗಲ್ ಗ್ರಾಮದಲ್ಲಿ ದಿವಾಕರ್ ಎಂಬವರ ತೋಟದಿಂದ ಅಡಿಕೆ ಮರವನ್ನೇ ಕಡಿದು ಅಡಿಕೆ ಕಳ್ಳತನ ಮಾಡಿರುವ ಘಟನೆ ವರದಿಯಾಗಿದೆ. ರಾತ್ರಿ ವೇಳೆ ತೋಟಕ್ಕೆ ನುಗ್ಗಿದ ಕಳ್ಳರು ಅಡಿಕೆ ಮರವನ್ನು ಕಡಿದು ಅದರಿಂದ ಅಡಿಕೆ ಕಳ್ಳತನ ಮಾಡಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಸಮೀಪದ ಸಿಸಿ ಟಿವಿಯಲ್ಲಿ ಈ ಕಳ್ಳತನದ ದೃಶ್ಯ ಸೆರೆಯಾದ ಹಿನ್ನೆಲೆಯಲ್ಲಿ ಖಚಿತವಾಗಿ ದೂರು ನೀಡಲಾಗಿದೆ.ಸುಮಾರು 8 ಮರಗಳನ್ನು ಕಡಿದು ಅಡಿಕೆ ಕಳ್ಳತನ ಮಾಡಲಾಗಿತ್ತು.
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…