ಅಡಿಕೆ ಧಾರಣೆ ಏರಿಕೆ ಕೃಷಿಕರಿಗೆ ಬಹಳಷ್ಟು ಖುಷಿ ತಂದಿದೆ. ಇದೀಗ ಕೃಷಿಕರಿಗೂ, ಅಡಿಕೆ ವ್ಯಾಪಾರಿಗಳಿಗೂ ಕಳ್ಳರ ಭಯ ಆರಂಭವಾಗಿದೆ. ಒಂದು ಕಡೆ ಅಡಿಕೆ ಕಳ್ಳತನಕ್ಕೆ ಮರವನ್ನೇ ಕಡಿದರೆ, ಇನ್ನೊಂದು ಕಡೆ ಅಡಿಕೆ ಮಂಡಿ ಮಾಲೀಕನಿಗೆ 7 ಕೋಟಿ ರೂಪಾಯಿ ಪಂಗನಾಮ ಹಾಕಿದ್ದರೆ ಅವರದೇ ಸಿಬಂದಿಗಳು..!.
ಶಿವಮೊಗ್ಗ ಎಪಿಎಂಸಿಯಲ್ಲಿ ಅಡಿಕೆ ಮಂಡಿ ಮಾಲೀಕನಿಗೆ 7 ಕೋಟಿ ರೂಪಾಯಿ ವಂಚನೆ ಆಗಿದೆ. ನಕಲಿ ಬಿಲ್ ಸೃಷ್ಟಿಸಿ ಅಡಿಕೆ ಮಂಡಿ ಮಾಲೀಕರೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ. ಮಂಡಿ ಮಾಲೀಕ ಮಂಜುನಾಥ್ ವಿನೋಬನಗರ ಠಾಣೆಗೆ ದೂರು ನೀಡಿದ್ದಾರೆ. ಏಳು ವರ್ಷದಿಂದ ಮೇಘನಾ ಮತ್ತು ಮೂರು ವರ್ಷದಿಂದ ಸಹನಾ ಕೆಲಸ ಮಾಡುತ್ತಿದ್ದರು. ಅಂಗಡಿಯ ಎಲ್ಲ ವ್ಯವಹಾರ ಮತ್ತು ಲೆಕ್ಕಪತ್ರಗಳನ್ನು ಈ ಇಬ್ಬರು ಮಹಿಳೆಯರು ನೋಡಿಕೊಳ್ಳುತ್ತಿದ್ದರು. ಮಂಜುನಾಥ್ ಪತ್ನಿಗೆ ಅನಾರೋಗ್ಯ ಇತ್ತು. ಈ ಹಿನ್ನೆಲೆಯಲ್ಲಿ ವ್ಯವಹಾರಗಳನ್ನು ಮಹಿಳೆಯರು ನೋಡಿಕೊಳ್ಳುತ್ತಿದ್ದರು. ಈ ಸಮಯದಲ್ಲಿ ನಕಲಿ ಬಿಲ್ ಸೃಷ್ಟಿಸಿ ವಂಚನೆ ಮಾಡಿದ್ದರು.
ಮೂಡಿಗೆರೆ ಬಳಿಯ ಹೆಸಗಲ್ ಗ್ರಾಮದಲ್ಲಿ ದಿವಾಕರ್ ಎಂಬವರ ತೋಟದಿಂದ ಅಡಿಕೆ ಮರವನ್ನೇ ಕಡಿದು ಅಡಿಕೆ ಕಳ್ಳತನ ಮಾಡಿರುವ ಘಟನೆ ವರದಿಯಾಗಿದೆ. ರಾತ್ರಿ ವೇಳೆ ತೋಟಕ್ಕೆ ನುಗ್ಗಿದ ಕಳ್ಳರು ಅಡಿಕೆ ಮರವನ್ನು ಕಡಿದು ಅದರಿಂದ ಅಡಿಕೆ ಕಳ್ಳತನ ಮಾಡಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಸಮೀಪದ ಸಿಸಿ ಟಿವಿಯಲ್ಲಿ ಈ ಕಳ್ಳತನದ ದೃಶ್ಯ ಸೆರೆಯಾದ ಹಿನ್ನೆಲೆಯಲ್ಲಿ ಖಚಿತವಾಗಿ ದೂರು ನೀಡಲಾಗಿದೆ.ಸುಮಾರು 8 ಮರಗಳನ್ನು ಕಡಿದು ಅಡಿಕೆ ಕಳ್ಳತನ ಮಾಡಲಾಗಿತ್ತು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…