ಅಡಿಕೆ ಧಾರಣೆ ಏರಿಕೆ ಕೃಷಿಕರಿಗೆ ಬಹಳಷ್ಟು ಖುಷಿ ತಂದಿದೆ. ಇದೀಗ ಕೃಷಿಕರಿಗೂ, ಅಡಿಕೆ ವ್ಯಾಪಾರಿಗಳಿಗೂ ಕಳ್ಳರ ಭಯ ಆರಂಭವಾಗಿದೆ. ಒಂದು ಕಡೆ ಅಡಿಕೆ ಕಳ್ಳತನಕ್ಕೆ ಮರವನ್ನೇ ಕಡಿದರೆ, ಇನ್ನೊಂದು ಕಡೆ ಅಡಿಕೆ ಮಂಡಿ ಮಾಲೀಕನಿಗೆ 7 ಕೋಟಿ ರೂಪಾಯಿ ಪಂಗನಾಮ ಹಾಕಿದ್ದರೆ ಅವರದೇ ಸಿಬಂದಿಗಳು..!.
ಶಿವಮೊಗ್ಗ ಎಪಿಎಂಸಿಯಲ್ಲಿ ಅಡಿಕೆ ಮಂಡಿ ಮಾಲೀಕನಿಗೆ 7 ಕೋಟಿ ರೂಪಾಯಿ ವಂಚನೆ ಆಗಿದೆ. ನಕಲಿ ಬಿಲ್ ಸೃಷ್ಟಿಸಿ ಅಡಿಕೆ ಮಂಡಿ ಮಾಲೀಕರೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ. ಮಂಡಿ ಮಾಲೀಕ ಮಂಜುನಾಥ್ ವಿನೋಬನಗರ ಠಾಣೆಗೆ ದೂರು ನೀಡಿದ್ದಾರೆ. ಏಳು ವರ್ಷದಿಂದ ಮೇಘನಾ ಮತ್ತು ಮೂರು ವರ್ಷದಿಂದ ಸಹನಾ ಕೆಲಸ ಮಾಡುತ್ತಿದ್ದರು. ಅಂಗಡಿಯ ಎಲ್ಲ ವ್ಯವಹಾರ ಮತ್ತು ಲೆಕ್ಕಪತ್ರಗಳನ್ನು ಈ ಇಬ್ಬರು ಮಹಿಳೆಯರು ನೋಡಿಕೊಳ್ಳುತ್ತಿದ್ದರು. ಮಂಜುನಾಥ್ ಪತ್ನಿಗೆ ಅನಾರೋಗ್ಯ ಇತ್ತು. ಈ ಹಿನ್ನೆಲೆಯಲ್ಲಿ ವ್ಯವಹಾರಗಳನ್ನು ಮಹಿಳೆಯರು ನೋಡಿಕೊಳ್ಳುತ್ತಿದ್ದರು. ಈ ಸಮಯದಲ್ಲಿ ನಕಲಿ ಬಿಲ್ ಸೃಷ್ಟಿಸಿ ವಂಚನೆ ಮಾಡಿದ್ದರು.
ಮೂಡಿಗೆರೆ ಬಳಿಯ ಹೆಸಗಲ್ ಗ್ರಾಮದಲ್ಲಿ ದಿವಾಕರ್ ಎಂಬವರ ತೋಟದಿಂದ ಅಡಿಕೆ ಮರವನ್ನೇ ಕಡಿದು ಅಡಿಕೆ ಕಳ್ಳತನ ಮಾಡಿರುವ ಘಟನೆ ವರದಿಯಾಗಿದೆ. ರಾತ್ರಿ ವೇಳೆ ತೋಟಕ್ಕೆ ನುಗ್ಗಿದ ಕಳ್ಳರು ಅಡಿಕೆ ಮರವನ್ನು ಕಡಿದು ಅದರಿಂದ ಅಡಿಕೆ ಕಳ್ಳತನ ಮಾಡಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಸಮೀಪದ ಸಿಸಿ ಟಿವಿಯಲ್ಲಿ ಈ ಕಳ್ಳತನದ ದೃಶ್ಯ ಸೆರೆಯಾದ ಹಿನ್ನೆಲೆಯಲ್ಲಿ ಖಚಿತವಾಗಿ ದೂರು ನೀಡಲಾಗಿದೆ.ಸುಮಾರು 8 ಮರಗಳನ್ನು ಕಡಿದು ಅಡಿಕೆ ಕಳ್ಳತನ ಮಾಡಲಾಗಿತ್ತು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…