ಅಡಿಕೆ ಧಾರಣೆ ಏರಿಕೆ ಕೃಷಿಕರಿಗೆ ಬಹಳಷ್ಟು ಖುಷಿ ತಂದಿದೆ. ಇದೀಗ ಕೃಷಿಕರಿಗೂ, ಅಡಿಕೆ ವ್ಯಾಪಾರಿಗಳಿಗೂ ಕಳ್ಳರ ಭಯ ಆರಂಭವಾಗಿದೆ. ಒಂದು ಕಡೆ ಅಡಿಕೆ ಕಳ್ಳತನಕ್ಕೆ ಮರವನ್ನೇ ಕಡಿದರೆ, ಇನ್ನೊಂದು ಕಡೆ ಅಡಿಕೆ ಮಂಡಿ ಮಾಲೀಕನಿಗೆ 7 ಕೋಟಿ ರೂಪಾಯಿ ಪಂಗನಾಮ ಹಾಕಿದ್ದರೆ ಅವರದೇ ಸಿಬಂದಿಗಳು..!.
ಶಿವಮೊಗ್ಗ ಎಪಿಎಂಸಿಯಲ್ಲಿ ಅಡಿಕೆ ಮಂಡಿ ಮಾಲೀಕನಿಗೆ 7 ಕೋಟಿ ರೂಪಾಯಿ ವಂಚನೆ ಆಗಿದೆ. ನಕಲಿ ಬಿಲ್ ಸೃಷ್ಟಿಸಿ ಅಡಿಕೆ ಮಂಡಿ ಮಾಲೀಕರೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ. ಮಂಡಿ ಮಾಲೀಕ ಮಂಜುನಾಥ್ ವಿನೋಬನಗರ ಠಾಣೆಗೆ ದೂರು ನೀಡಿದ್ದಾರೆ. ಏಳು ವರ್ಷದಿಂದ ಮೇಘನಾ ಮತ್ತು ಮೂರು ವರ್ಷದಿಂದ ಸಹನಾ ಕೆಲಸ ಮಾಡುತ್ತಿದ್ದರು. ಅಂಗಡಿಯ ಎಲ್ಲ ವ್ಯವಹಾರ ಮತ್ತು ಲೆಕ್ಕಪತ್ರಗಳನ್ನು ಈ ಇಬ್ಬರು ಮಹಿಳೆಯರು ನೋಡಿಕೊಳ್ಳುತ್ತಿದ್ದರು. ಮಂಜುನಾಥ್ ಪತ್ನಿಗೆ ಅನಾರೋಗ್ಯ ಇತ್ತು. ಈ ಹಿನ್ನೆಲೆಯಲ್ಲಿ ವ್ಯವಹಾರಗಳನ್ನು ಮಹಿಳೆಯರು ನೋಡಿಕೊಳ್ಳುತ್ತಿದ್ದರು. ಈ ಸಮಯದಲ್ಲಿ ನಕಲಿ ಬಿಲ್ ಸೃಷ್ಟಿಸಿ ವಂಚನೆ ಮಾಡಿದ್ದರು.
ಮೂಡಿಗೆರೆ ಬಳಿಯ ಹೆಸಗಲ್ ಗ್ರಾಮದಲ್ಲಿ ದಿವಾಕರ್ ಎಂಬವರ ತೋಟದಿಂದ ಅಡಿಕೆ ಮರವನ್ನೇ ಕಡಿದು ಅಡಿಕೆ ಕಳ್ಳತನ ಮಾಡಿರುವ ಘಟನೆ ವರದಿಯಾಗಿದೆ. ರಾತ್ರಿ ವೇಳೆ ತೋಟಕ್ಕೆ ನುಗ್ಗಿದ ಕಳ್ಳರು ಅಡಿಕೆ ಮರವನ್ನು ಕಡಿದು ಅದರಿಂದ ಅಡಿಕೆ ಕಳ್ಳತನ ಮಾಡಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಸಮೀಪದ ಸಿಸಿ ಟಿವಿಯಲ್ಲಿ ಈ ಕಳ್ಳತನದ ದೃಶ್ಯ ಸೆರೆಯಾದ ಹಿನ್ನೆಲೆಯಲ್ಲಿ ಖಚಿತವಾಗಿ ದೂರು ನೀಡಲಾಗಿದೆ.ಸುಮಾರು 8 ಮರಗಳನ್ನು ಕಡಿದು ಅಡಿಕೆ ಕಳ್ಳತನ ಮಾಡಲಾಗಿತ್ತು.
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…