Advertisement
MIRROR FOCUS

ಅಡಿಕೆ ಧಾರಣೆ ಹಾಗೂ ಕಳ್ಳತನ | ಅಡಿಕೆ ಕಳ್ಳತನಕ್ಕೆ ಮರವನ್ನೇ ಕಡಿದ ಕಳ್ಳರು…!

Share

ಅಡಿಕೆ ಧಾರಣೆ ಏರಿಕೆ ಕೃಷಿಕರಿಗೆ ಬಹಳಷ್ಟು ಖುಷಿ ತಂದಿದೆ. ಇದೀಗ ಕೃಷಿಕರಿಗೂ, ಅಡಿಕೆ ವ್ಯಾಪಾರಿಗಳಿಗೂ ಕಳ್ಳರ ಭಯ ಆರಂಭವಾಗಿದೆ. ಒಂದು ಕಡೆ ಅಡಿಕೆ ಕಳ್ಳತನಕ್ಕೆ ಮರವನ್ನೇ ಕಡಿದರೆ, ಇನ್ನೊಂದು ಕಡೆ ಅಡಿಕೆ ಮಂಡಿ ಮಾಲೀಕನಿಗೆ 7 ಕೋಟಿ ರೂಪಾಯಿ ಪಂಗನಾಮ ಹಾಕಿದ್ದರೆ ಅವರದೇ ಸಿಬಂದಿಗಳು..!.

ಶಿವಮೊಗ್ಗ ಎಪಿಎಂಸಿಯಲ್ಲಿ ಅಡಿಕೆ ಮಂಡಿ ಮಾಲೀಕನಿಗೆ  7 ಕೋಟಿ ರೂಪಾಯಿ ವಂಚನೆ ಆಗಿದೆ. ನಕಲಿ ಬಿಲ್‌ ಸೃಷ್ಟಿಸಿ ಅಡಿಕೆ ಮಂಡಿ ಮಾಲೀಕರೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ. ಮಂಡಿ ಮಾಲೀಕ ಮಂಜುನಾಥ್‌ ವಿನೋಬನಗರ ಠಾಣೆಗೆ ದೂರು ನೀಡಿದ್ದಾರೆ. ಏಳು ವರ್ಷದಿಂದ ಮೇಘನಾ ಮತ್ತು ಮೂರು ವರ್ಷದಿಂದ ಸಹನಾ ಕೆಲಸ ಮಾಡುತ್ತಿದ್ದರು. ಅಂಗಡಿಯ ಎಲ್ಲ ವ್ಯವಹಾರ ಮತ್ತು ಲೆಕ್ಕಪತ್ರಗಳನ್ನು ಈ ಇಬ್ಬರು ಮಹಿಳೆಯರು ನೋಡಿಕೊಳ್ಳುತ್ತಿದ್ದರು. ಮಂಜುನಾಥ್ ಪತ್ನಿಗೆ ಅನಾರೋಗ್ಯ ಇತ್ತು. ಈ ಹಿನ್ನೆಲೆಯಲ್ಲಿ ವ್ಯವಹಾರಗಳನ್ನು ಮಹಿಳೆಯರು ನೋಡಿಕೊಳ್ಳುತ್ತಿದ್ದರು. ಈ ಸಮಯದಲ್ಲಿ ನಕಲಿ ಬಿಲ್‌ ಸೃಷ್ಟಿಸಿ ವಂಚನೆ ಮಾಡಿದ್ದರು.

ಮೂಡಿಗೆರೆ ಬಳಿಯ ಹೆಸಗಲ್‌ ಗ್ರಾಮದಲ್ಲಿ ದಿವಾಕರ್‌ ಎಂಬವರ ತೋಟದಿಂದ ಅಡಿಕೆ ಮರವನ್ನೇ ಕಡಿದು ಅಡಿಕೆ ಕಳ್ಳತನ ಮಾಡಿರುವ ಘಟನೆ ವರದಿಯಾಗಿದೆ. ರಾತ್ರಿ ವೇಳೆ ತೋಟಕ್ಕೆ ನುಗ್ಗಿದ ಕಳ್ಳರು ಅಡಿಕೆ ಮರವನ್ನು ಕಡಿದು ಅದರಿಂದ ಅಡಿಕೆ ಕಳ್ಳತನ ಮಾಡಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಸಮೀಪದ ಸಿಸಿ ಟಿವಿಯಲ್ಲಿ ಈ ಕಳ್ಳತನದ ದೃಶ್ಯ ಸೆರೆಯಾದ ಹಿನ್ನೆಲೆಯಲ್ಲಿ ಖಚಿತವಾಗಿ ದೂರು ನೀಡಲಾಗಿದೆ.ಸುಮಾರು 8 ಮರಗಳನ್ನು ಕಡಿದು ಅಡಿಕೆ ಕಳ್ಳತನ ಮಾಡಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

20 minutes ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

47 minutes ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

4 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

5 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

16 hours ago

ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್

ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…

16 hours ago