Advertisement
MIRROR FOCUS

#Arecanut | ಅಡಿಕೆ ಮಾರುಕಟ್ಟೆಯಲ್ಲಿ ಕೃತಕ ಅಭಾವ ಸೃಷ್ಟಿಸಿ ತಂತ್ರ | ಇಡಿ ದಾಳಿಯ ಬಳಿಕ ಬಹಿರಂಗವಾದ ಅಂಶ |

Share

ಅಡಿಕೆ ಅಕ್ರಮ ಸಾಗಾಟಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ(ಇಡಿ) ಈಚೆಗೆ ಮುಂಬಯಿಯಲ್ಲಿ ದಾಳಿ ನಡೆಸಿ ಪ್ರಮುಖ ಆರೋಪಿಯನ್ನು ಬಂಧಿಸಿ, ತನಿಖೆ ನಡೆಸುತ್ತಿದೆ. ಈ ಸಂದರ್ಭ ಅಡಿಕೆ ಮಾರುಕಟ್ಟೆಯಲ್ಲಿ ಕೃತಕ ಅಭಾವ ಸೃಷ್ಟಿಸಿ ತಂತ್ರಗಾರಿಕೆ ಮಾಡುತ್ತಿರುವ ಅಂಶ ಬೆಳಕಿಗೆ ಬಂದಿದೆ.

ತೆರಿಗೆ ವಂಚನೆ, ಆಮದು ಸುಂಕ ವಂಚನೆ  ಆರೋಪದ ಮೇಲೆ ಮುಂಬೈನಲ್ಲಿ ಅಡಿಕೆ ವ್ಯಾಪಾರಿ ವಾಸಿಂ ಬಾವಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಇತ್ತೀಚೆಗೆ ಬಂಧಿಸಿದೆ. ಇದೀಗ ನಾಗಪುರ ಅಡಿಕೆ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದ್ದು, ಅಡಿಕೆ ಕೃತಕ ಅಭಾವ ಸೃಷ್ಟಿಸಿ ಲಾಭ ಮಾಡುವ ಅಂಶಗಳೂ ಬೆಳಕಿಗೆ ಬರುತ್ತಿದೆ.

ನಾಗ್ಪುರದ ಮಾಧ್ಯಮ ವರದಿಗಳ ಪ್ರಕಾರ, ಅಲ್ಲಿನ ಅಡಿಕೆ ವ್ಯಾಪಾರಿಗಳು ಕೆಲವರು ದಾಸ್ತಾನುಗಳನ್ನು ಬೇರೆ ಕಡೆಗೆ ವರ್ಗಾಯಿಸಿ ಅಡಿಕೆ ಮಾರುಕಟ್ಟೆಯ ಕೃತಕ ಅಭಾವ ಸೃಷ್ಟಿಸಿ ಆ ಬಳಿಕ ಹೆಚ್ಚಿನ ದರಕ್ಕೆ ಮಾರಾಟ ಮಾಡುವ ತಂತ್ರಗಳು ನಡೆದಿವೆ.

ಅಡಿಕೆ ಆಮದು ಮತ್ತು ಸಾಗಾಟದ ಸಂದರ್ಭ  ತೆರಿಗೆ ತಪ್ಪಿಸಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ವಂಚಿಸಿದೆ. ಹಿಂದೆ ಪ್ರತಿ ಕಿಲೋಗ್ರಾಂಗೆ 350-380 ರೂ.ಗೆ ಮಾರಾಟವಾಗುತ್ತಿದ್ದ ಅಡಿಕೆ ಈಗ 400-425 ರೂ.ಗೆ ಮಾರಾಟವಾಗುತ್ತಿದೆ. ವಾಸಿಂ ಬಾವಾ  ಬಂಧನದ ನಂತರವೂ  ಉದ್ದೇಶಪೂರ್ವಕವಾಗಿ ಕೃತಕ ಅಭಾವ ಸೃಷ್ಟಿಸಿದ್ದಾರೆ ಎಂದು ವರದಿಯಾಗಿದೆ.

ಜಾರಿ ನಿರ್ದೇಶನಾಲಯ ದಾಳಿ ಬಳಿಕ ಇಂಡೋನೇಷ್ಯಾ ಮೂಲಕ ಇಂಡೋ-ಬಾಂಗ್ಲಾದೇಶ ಮತ್ತು ಇಂಡೋ-ಮ್ಯಾನ್ಮಾರ್ ಗಡಿಗಳಿಂದ ವೀಳ್ಯದೆಲೆ ಪಡೆಯುವ ಅಸ್ಸಾಂ, ನಾಗಾಲ್ಯಾಂಡ್ ಮತ್ತು ಮಿಜೋರಾಂ ಸೇರಿದಂತೆ ಈಶಾನ್ಯ ರಾಜ್ಯಗಳ ವ್ಯಾಪಾರಿಗಳು ತಮ್ಮ ಪೂರೈಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ. ಈಶಾನ್ಯ ರಾಜ್ಯಗಳಿಂದ ಈಗಾಗಲೇ ಸಾಗುತ್ತಿದ್ದ ಅಡಿಕೆ ಸಾಗಾಟದ ಲಾರಿಗಳನ್ನು  ಬೇರೆ ರಾಜ್ಯಗಳಿಗೆ ಸಾಗಾಟ ಮಾಡಲಾಗುತ್ತಿದೆ ಎಂದು ವರದಿಯಾಗಿದೆ.

ತನಿಖೆ ಮುಂದುವರಿದಿದ್ದು, ವಾಸಿಂ ಅವರೊಂದಿಗೆ ನಿಕಟ ಸಂಬಂಧ ಹೊಂದಿರುವ ಸಹಚರರು ತಲೆಮರೆಸಿಕೊಂಡಿದ್ದಾರೆ. ಇಡಿ ದಾಳಿಯ ಸಮಯದಲ್ಲಿ ಅಡಿಕೆಯನ್ನು ವಶಪಡಿಸಿಕೊಳ್ಳುವ ಸಾಧ್ಯತೆ ಮನಗಂಡು  ದಾಸ್ತಾನುಗಳ ವರ್ಗಾವಣೆಯನ್ನು ನಡೆಸಲಾಗುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

3 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

1 day ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago