ಅಡಿಕೆ ಅಕ್ರಮ ಸಾಗಾಟಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ(ಇಡಿ) ಈಚೆಗೆ ಮುಂಬಯಿಯಲ್ಲಿ ದಾಳಿ ನಡೆಸಿ ಪ್ರಮುಖ ಆರೋಪಿಯನ್ನು ಬಂಧಿಸಿ, ತನಿಖೆ ನಡೆಸುತ್ತಿದೆ. ಈ ಸಂದರ್ಭ ಅಡಿಕೆ ಮಾರುಕಟ್ಟೆಯಲ್ಲಿ ಕೃತಕ ಅಭಾವ ಸೃಷ್ಟಿಸಿ ತಂತ್ರಗಾರಿಕೆ ಮಾಡುತ್ತಿರುವ ಅಂಶ ಬೆಳಕಿಗೆ ಬಂದಿದೆ.
ತೆರಿಗೆ ವಂಚನೆ, ಆಮದು ಸುಂಕ ವಂಚನೆ ಆರೋಪದ ಮೇಲೆ ಮುಂಬೈನಲ್ಲಿ ಅಡಿಕೆ ವ್ಯಾಪಾರಿ ವಾಸಿಂ ಬಾವಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಇತ್ತೀಚೆಗೆ ಬಂಧಿಸಿದೆ. ಇದೀಗ ನಾಗಪುರ ಅಡಿಕೆ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದ್ದು, ಅಡಿಕೆ ಕೃತಕ ಅಭಾವ ಸೃಷ್ಟಿಸಿ ಲಾಭ ಮಾಡುವ ಅಂಶಗಳೂ ಬೆಳಕಿಗೆ ಬರುತ್ತಿದೆ.
ನಾಗ್ಪುರದ ಮಾಧ್ಯಮ ವರದಿಗಳ ಪ್ರಕಾರ, ಅಲ್ಲಿನ ಅಡಿಕೆ ವ್ಯಾಪಾರಿಗಳು ಕೆಲವರು ದಾಸ್ತಾನುಗಳನ್ನು ಬೇರೆ ಕಡೆಗೆ ವರ್ಗಾಯಿಸಿ ಅಡಿಕೆ ಮಾರುಕಟ್ಟೆಯ ಕೃತಕ ಅಭಾವ ಸೃಷ್ಟಿಸಿ ಆ ಬಳಿಕ ಹೆಚ್ಚಿನ ದರಕ್ಕೆ ಮಾರಾಟ ಮಾಡುವ ತಂತ್ರಗಳು ನಡೆದಿವೆ.
ಅಡಿಕೆ ಆಮದು ಮತ್ತು ಸಾಗಾಟದ ಸಂದರ್ಭ ತೆರಿಗೆ ತಪ್ಪಿಸಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ವಂಚಿಸಿದೆ. ಹಿಂದೆ ಪ್ರತಿ ಕಿಲೋಗ್ರಾಂಗೆ 350-380 ರೂ.ಗೆ ಮಾರಾಟವಾಗುತ್ತಿದ್ದ ಅಡಿಕೆ ಈಗ 400-425 ರೂ.ಗೆ ಮಾರಾಟವಾಗುತ್ತಿದೆ. ವಾಸಿಂ ಬಾವಾ ಬಂಧನದ ನಂತರವೂ ಉದ್ದೇಶಪೂರ್ವಕವಾಗಿ ಕೃತಕ ಅಭಾವ ಸೃಷ್ಟಿಸಿದ್ದಾರೆ ಎಂದು ವರದಿಯಾಗಿದೆ.
ಜಾರಿ ನಿರ್ದೇಶನಾಲಯ ದಾಳಿ ಬಳಿಕ ಇಂಡೋನೇಷ್ಯಾ ಮೂಲಕ ಇಂಡೋ-ಬಾಂಗ್ಲಾದೇಶ ಮತ್ತು ಇಂಡೋ-ಮ್ಯಾನ್ಮಾರ್ ಗಡಿಗಳಿಂದ ವೀಳ್ಯದೆಲೆ ಪಡೆಯುವ ಅಸ್ಸಾಂ, ನಾಗಾಲ್ಯಾಂಡ್ ಮತ್ತು ಮಿಜೋರಾಂ ಸೇರಿದಂತೆ ಈಶಾನ್ಯ ರಾಜ್ಯಗಳ ವ್ಯಾಪಾರಿಗಳು ತಮ್ಮ ಪೂರೈಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ. ಈಶಾನ್ಯ ರಾಜ್ಯಗಳಿಂದ ಈಗಾಗಲೇ ಸಾಗುತ್ತಿದ್ದ ಅಡಿಕೆ ಸಾಗಾಟದ ಲಾರಿಗಳನ್ನು ಬೇರೆ ರಾಜ್ಯಗಳಿಗೆ ಸಾಗಾಟ ಮಾಡಲಾಗುತ್ತಿದೆ ಎಂದು ವರದಿಯಾಗಿದೆ.
ತನಿಖೆ ಮುಂದುವರಿದಿದ್ದು, ವಾಸಿಂ ಅವರೊಂದಿಗೆ ನಿಕಟ ಸಂಬಂಧ ಹೊಂದಿರುವ ಸಹಚರರು ತಲೆಮರೆಸಿಕೊಂಡಿದ್ದಾರೆ. ಇಡಿ ದಾಳಿಯ ಸಮಯದಲ್ಲಿ ಅಡಿಕೆಯನ್ನು ವಶಪಡಿಸಿಕೊಳ್ಳುವ ಸಾಧ್ಯತೆ ಮನಗಂಡು ದಾಸ್ತಾನುಗಳ ವರ್ಗಾವಣೆಯನ್ನು ನಡೆಸಲಾಗುತ್ತಿದೆ.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…