Advertisement
MIRROR FOCUS

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

Share

ಮಹಾರಾಷ್ಟ್ರದಲ್ಲಿ ತಡೆಹಿಡಿಯಲಾಗಿರುವ ಅಡಿಕೆ ಸಾಗಣೆ ವಾಹನಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಹಾಗೂ ಮುಂದಿನ ದಿನಗಳಲ್ಲಿ ಸೂಕ್ತ ದಾಖಲೆಗಳಿರುವ ಅಡಿಕೆ ಸಾಗಣೆ ವಾಹನಗಳಿಗೆ ಯಾವುದೇ ಅಡಚಣೆ ಉಂಟಾಗದಂತೆ ಪಾರದರ್ಶಕ ಕಾರ್ಯವಿಧಾನ ರೂಪಿಸುವಂತೆ ಕರ್ನಾಟಕದ ಅಡಿಕೆ ಸಹಕಾರಿ ಸಂಸ್ಥೆಗಳ ನಿಯೋಗವು ರಾಜ್ಯದ ಸಂಸದರ ಜೊತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು.

ನಿಯೋಗಕ್ಕೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ನೇತೃತ್ವ ವಹಿಸಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಉಪಸ್ಥಿತಿಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಮಹತ್ವದ ಸಭೆ ನಡೆಯಿತು.

ಸಭೆಯಲ್ಲಿ MAMCOS, CAMPCO, TUMCOS ಹಾಗೂ ಕರ್ನಾಟಕ ರಾಜ್ಯ ಅಡಿಕೆ ಮಾರುಕಟ್ಟೆ ಸಹಕಾರ ಸಂಘಗಳ ಒಕ್ಕೂಟದ ಪ್ರತಿನಿಧಿಗಳು ಭಾಗವಹಿಸಿದ್ದರು.

ನಿಯೋಗದ ಮಾಹಿತಿ ಪ್ರಕಾರ, ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ (FDA) ಅಧಿಕಾರಿಗಳು ಉತ್ತರ ಭಾರತದ ಮಾರುಕಟ್ಟೆಗಳಿಗೆ ತೆರಳುತ್ತಿದ್ದ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ವಿವಿಧ ಚೆಕ್‌ಪೋಸ್ಟ್‌ಗಳಲ್ಲಿ ತಡೆಹಿಡಿದಿದ್ದಾರೆ. ಈ ಎಲ್ಲಾ ಲಾರಿಗಳಲ್ಲಿ GST ಇನ್‌ವಾಯ್ಸ್‌, ಇ-ವೇ ಬಿಲ್‌, FSSAI ನೋಂದಣಿ ಸೇರಿದಂತೆ ಎಲ್ಲಾ ಕಡ್ಡಾಯ ದಾಖಲೆಗಳು ಇದ್ದರೂ ಸಾಗಣೆ ಸ್ಥಗಿತಗೊಂಡಿರುವುದರಿಂದ ರೈತರು ಹಾಗೂ ಸಹಕಾರಿ ಸಂಸ್ಥೆಗಳಿಗೆ ಆರ್ಥಿಕ ನಷ್ಟ ಉಂಟಾಗಿದೆ ಎಂದು ನಿಯೋಗ ತಿಳಿಸಿದೆ.

“ಅಡಿಕೆ ಕೇವಲ ಬೆಳೆ ಅಲ್ಲ, ಲಕ್ಷಾಂತರ ಕುಟುಂಬಗಳ ಜೀವನಾಧಾರ”

ಸಭೆಯಲ್ಲಿ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ, ಭಾರತದ ಒಟ್ಟು ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಪಾಲು ಶೇ.70ಕ್ಕೂ ಅಧಿಕವಾಗಿದೆ. ದಕ್ಷಿಣ ಭಾರತದ ಲಕ್ಷಾಂತರ ರೈತ ಕುಟುಂಬಗಳ ಜೀವನೋಪಾಯ ಅಡಿಕೆ ಕೃಷಿಯನ್ನು ಅವಲಂಬಿಸಿದೆ ಎಂದು ಹೇಳಿದರು.

“ಪ್ರತಿಯೊಂದು ಅಡಿಕೆ ಲಾರಿಯ ಹಿಂದೆ ನೂರಾರು ರೈತ ಕುಟುಂಬಗಳ ಶ್ರಮವಿದೆ. ಸೂಕ್ತ ದಾಖಲೆಗಳೊಂದಿಗೆ ಸಾಗುತ್ತಿರುವ ವಾಹನಗಳನ್ನು ಅನಗತ್ಯವಾಗಿ ತಡೆಹಿಡಿಯಬಾರದು. ಅಡಿಕೆ ಕೇವಲ ಒಂದು ಬೆಳೆ ಅಲ್ಲ, ಅದು ಲಕ್ಷಾಂತರ ಕುಟುಂಬಗಳ ಜೀವನಾಧಾರವಾಗಿದೆ” ಎಂದು ಅವರು ಹೇಳಿದರು.

ಪ್ರಸ್ತುತ ತಡೆಹಿಡಿದಿರುವ ಎಲ್ಲಾ ಅಡಿಕೆ ವಾಹನಗಳನ್ನು ತಕ್ಷಣ ಬಿಡುಗಡೆ ಮಾಡಬೇಕು. ಮುಂದಿನ ದಿನಗಳಲ್ಲಿ ಮಾನ್ಯತೆ ಪಡೆದ ಸಹಕಾರಿ ಸಂಸ್ಥೆಗಳ ದಾಖಲೆಗಳಿರುವ ವಾಹನಗಳ ಸುಗಮ ಸಂಚಾರಕ್ಕೆ ಸ್ಪಷ್ಟ ಹಾಗೂ ಕಾಲಬದ್ಧ ಕಾರ್ಯವಿಧಾನ ರೂಪಿಸಬೇಕು ಎಂದು ನಿಯೋಗ ಒತ್ತಾಯಿಸಿತು.

ಮಹಾರಾಷ್ಟ್ರದಲ್ಲಿ ಪ್ರವಾಹ ಪರಿಸ್ಥಿತಿಯ ನಡುವೆಯೂ ಸಭೆಗೆ ಅವಕಾಶ ನೀಡಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಸಂಸದ ರಾಘವೇಂದ್ರ ಧನ್ಯವಾದ ಸಲ್ಲಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ನಿಯೋಗದಲ್ಲಿ ಯಾರಿದ್ದರು..? : ಅಡಿಕೆ ಮಹಾಮಂಡಲ ಅಧ್ಯಕ್ಷ ಆರಗ ಜ್ಞಾನೇಂದ್ರ, ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಚಿಕ್ಕಮಗಳೂರು–ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ್‌, MAMCOS ಉಪಾಧ್ಯಕ್ಷ ಮಹೇಶ್ ಹುಲ್ಕುಳಿ, ಕ್ಯಾಂಪ್ಕೊ ಎಂಡಿ ಡಾ.ಸತ್ಯನಾರಾಯಣ CAMPCO ಹಾಗೂ TUMCOS ಉಪಾಧ್ಯಕ್ಷರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

A delegation representing CAMPCO, MAMCOS, TUMCOS and the Karnataka Arecanut Cooperative Federation, led by MP B.Y. Raghavendra, met Maharashtra Chief Minister Devendra Fadnavis in New Delhi seeking the immediate release of over 50 detained arecanut trucks. The delegation urged Maharashtra to ensure smooth movement of legally documented arecanut consignments to protect the livelihoods of lakhs of arecanut farmers.

ನಿಮ್ಮ ಅಭಿಪ್ರಾಯ, ಪ್ರತಿಕ್ರಿಯೆಗಳನ್ನು ಕಮೆಂಟ್‌ ಮೂಲಕ ತಿಳಿಸಿ…
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

16 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

16 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

20 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

21 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

21 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

2 days ago