Advertisement
MIRROR FOCUS

ದೇಶದಲ್ಲಿ ಸುಮಾರು 67 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆ | ಅಡಿಕೆ ಮೌಲ್ಯವರ್ಧನೆ ಅನಿವಾರ್ಯತೆ ಇದೆ | ಶಿವಮೊಗ್ಗದಲ್ಲಿ ನಡೆದ ಕಾರ್ಯಾಗಾರದಲ್ಲಿ ಅಭಿಮತ |

Share

ದೇಶದಲ್ಲಿ ಸುಮಾರು 67 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆಯಲಾಗುತ್ತಿದೆ.ಈಗಲೂ ಅಡಿಕೆ ಬೆಳೆ ವಿಸ್ತರಣೆಯಾಗುತ್ತಿದೆ. ಈಗ ಅಡಿಕೆ ಬಳಕೆಯ ಕಡೆಗೆ, ಅಡಿಕೆ ಮೌಲ್ಯವರ್ಧನೆಯ ಕಡೆಗೆ ಗಮನಹರಿಸಬೇಕಿದೆ ಎಂದು ಅಭಿಪ್ರಾಯಪಡಲಾಗಿದೆ.

ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಅಡಿಕೆ ಸಂಶೋಧನಾ ಕೇಂದ್ರ ಶಿವಮೊಗ್ಗ ಹಾಗೂ ಐಸಿಎಆರ್-ಸಿಪಿಸಿಆರ್ ಐ ಕಾಸರಗೋಡು, ಡಿಎಎಸ್‍ಡಿ ಕ್ಯಾಲಿಕಟ್, ಕ್ಯಾಂಪ್ಕೊ, ಮ್ಯಾಮ್ಕೋಸ್, ತುಮ್ಕೋಸ್, ಅಡಿಕೆ ಪತ್ರಿಕೆ, ಅಮೃತ್ ನೋನಿ, ಕ್ರಾಸ್ಮ್, ಕ.ರಾ.ತೋ.ಇ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನವುಲೆಯ ಕೃಷಿ ಕಾಲೇಜಿನಲ್ಲಿ  ‘ಅಡಿಕೆ ಮೌಲ್ಯವರ್ಧಿತ ಉತ್ಪನ್ನ’ ಗಳ ಕುರಿತಾದ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರವನ್ನು ಉದ್ಘಾಟಿಸಿದ ಡಾ.ಸೆಲ್ವಮಣಿ ಆರ್ , ಅಡಿಕೆಯ ಮೌಲ್ಯವರ್ಧನೆ ಮಾಡಿ ಉತ್ತಮ ಆದಾಯ ಗಳಿಸಲು ಸಾಕಷ್ಟು ಸಾಧ್ಯತೆಗಳಿದ್ದು, ಈ ನಿಟ್ಟಿನಲ್ಲಿ ರೈತರು ಗಮನ ಹರಿಸಬೇಕು ಎಂದರು. ಇಂದು ಅಡಿಕೆ ಸಿಪ್ಪೆ ಕೂಡ ತ್ಯಾಜ್ಯವಲ್ಲ.  ರೈತರು ರೋಗಬಾಧೆ, ಪ್ರಾಕೃತಿಕ ವಿಕೋಪ, ಇತರೆ ಸವಾಲುಗಳನ್ನು ಎದುರಿಸಿ ಬೆಳೆ ಬೆಳೆಯುತ್ತಿದ್ದಾರೆ. ಹೀಗಾಗಿ ರೈತರಿಗೆ ಉತ್ತಮ ಬೆಲೆ ಸಿಗಬೇಕು ಅದಕ್ಕಾಗಿ ಪ್ರಯತ್ನ ನಡೆಯಲಿ ಎಂದರು.

ಕಾಸರಗೋಡಿನ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯ ವಿಜ್ಞಾನಿ ಡಾ.ರವಿ ಭಟ್ ಮಾತನಾಡಿ, ಅಡಿಕೆಯ ಮೌಲ್ಯವರ್ಧನೆಯ ಕಡೆಗೆ ಇಂದು ಗಮನಹರಿಸಬೇಕಿದೆ. ಅಡಿಕೆ ಸೋಗೆ, ಹಾಳೆ, ಸಿಪ್ಪೆ ಇದ್ಯಾವದೂ ತ್ಯಾಜ್ಯಗಳಲ್ಲ. ಇವೆಲ್ಲವನ್ನು ಲಾಭದಾಯಕವಾಗಿ ಮೌಲ್ಯವರ್ಧನೆ ಮಾಡಬಹುದು.ಮೇಘಾಲಯದಲ್ಲಿ ಒಂದು ತಂಡ ಶೇ.60 ಅಡಿಕೆ ಸಿಪ್ಪೆ ಬಳಸಿ ಬಟ್ಟೆ ತಯಾರಿಸಿದೆ. ಅಡಿಕೆ ಸಿಪ್ಪೆ/ಸೋಗೆ ಬಳಸಿ ಅಣಬೆ ಬೆಳೆಯಲಾಗುತ್ತಿದೆ ಎಂದರು.

ಕ್ಯಾಲಿಕಟ್‍ನ ಡಿಎಎಸ್‍ಡಿ ಉಪನಿರ್ದೇಶಕಿ ಡಾ.ಫೆಮಿನಾ ಮಾತನಾಡಿ, ಅಡಿಕೆಯ ಮೌಲ್ಯವರ್ಧನೆಯ ಜೊತೆಗೆ ಅಡಿಕೆಯ ಔಷಧೀಯ ಉಪಯೋಗಗಳು, ಮಾನವನ ಆರೋಗ್ಯದ ಮೇಲೆ ಅಡಿಕೆಯ ಪ್ರಭಾವ ಹಾಗೂ ಅಡಿಕೆಯ ವಿತರಣೆ ಮತ್ತು ಬಳಕೆ ಇವುಗಳ ಅಧ್ಯಯನ ನಡೆಸಬೇಕಾಗಿದೆ, ಈ ಪ್ರಯತ್ನ ನಡೆಯುತ್ತಿದೆ ಎಂದರು.

ಅಡಿಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥರಾದ ಡಾ.ನಾಗರಾಜಪ್ಪ ಅಡಿವಪ್ಪರ್, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ಕೆ.ನಾಗರಾಜ್, ಅಡಿಕೆ ಪತ್ರಿಕೆಯ ಸಂಪಾದಕ ಶ್ರೀ ಪಡ್ರೆ ಮೊದಲಾದವರು ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

8 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

9 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

14 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

16 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

16 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

18 hours ago