Advertisement
MIRROR FOCUS

ದೇಶದಲ್ಲಿ ಸುಮಾರು 67 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆ | ಅಡಿಕೆ ಮೌಲ್ಯವರ್ಧನೆ ಅನಿವಾರ್ಯತೆ ಇದೆ | ಶಿವಮೊಗ್ಗದಲ್ಲಿ ನಡೆದ ಕಾರ್ಯಾಗಾರದಲ್ಲಿ ಅಭಿಮತ |

Share

ದೇಶದಲ್ಲಿ ಸುಮಾರು 67 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆಯಲಾಗುತ್ತಿದೆ.ಈಗಲೂ ಅಡಿಕೆ ಬೆಳೆ ವಿಸ್ತರಣೆಯಾಗುತ್ತಿದೆ. ಈಗ ಅಡಿಕೆ ಬಳಕೆಯ ಕಡೆಗೆ, ಅಡಿಕೆ ಮೌಲ್ಯವರ್ಧನೆಯ ಕಡೆಗೆ ಗಮನಹರಿಸಬೇಕಿದೆ ಎಂದು ಅಭಿಪ್ರಾಯಪಡಲಾಗಿದೆ.

ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಅಡಿಕೆ ಸಂಶೋಧನಾ ಕೇಂದ್ರ ಶಿವಮೊಗ್ಗ ಹಾಗೂ ಐಸಿಎಆರ್-ಸಿಪಿಸಿಆರ್ ಐ ಕಾಸರಗೋಡು, ಡಿಎಎಸ್‍ಡಿ ಕ್ಯಾಲಿಕಟ್, ಕ್ಯಾಂಪ್ಕೊ, ಮ್ಯಾಮ್ಕೋಸ್, ತುಮ್ಕೋಸ್, ಅಡಿಕೆ ಪತ್ರಿಕೆ, ಅಮೃತ್ ನೋನಿ, ಕ್ರಾಸ್ಮ್, ಕ.ರಾ.ತೋ.ಇ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನವುಲೆಯ ಕೃಷಿ ಕಾಲೇಜಿನಲ್ಲಿ  ‘ಅಡಿಕೆ ಮೌಲ್ಯವರ್ಧಿತ ಉತ್ಪನ್ನ’ ಗಳ ಕುರಿತಾದ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರವನ್ನು ಉದ್ಘಾಟಿಸಿದ ಡಾ.ಸೆಲ್ವಮಣಿ ಆರ್ , ಅಡಿಕೆಯ ಮೌಲ್ಯವರ್ಧನೆ ಮಾಡಿ ಉತ್ತಮ ಆದಾಯ ಗಳಿಸಲು ಸಾಕಷ್ಟು ಸಾಧ್ಯತೆಗಳಿದ್ದು, ಈ ನಿಟ್ಟಿನಲ್ಲಿ ರೈತರು ಗಮನ ಹರಿಸಬೇಕು ಎಂದರು. ಇಂದು ಅಡಿಕೆ ಸಿಪ್ಪೆ ಕೂಡ ತ್ಯಾಜ್ಯವಲ್ಲ.  ರೈತರು ರೋಗಬಾಧೆ, ಪ್ರಾಕೃತಿಕ ವಿಕೋಪ, ಇತರೆ ಸವಾಲುಗಳನ್ನು ಎದುರಿಸಿ ಬೆಳೆ ಬೆಳೆಯುತ್ತಿದ್ದಾರೆ. ಹೀಗಾಗಿ ರೈತರಿಗೆ ಉತ್ತಮ ಬೆಲೆ ಸಿಗಬೇಕು ಅದಕ್ಕಾಗಿ ಪ್ರಯತ್ನ ನಡೆಯಲಿ ಎಂದರು.

ಕಾಸರಗೋಡಿನ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯ ವಿಜ್ಞಾನಿ ಡಾ.ರವಿ ಭಟ್ ಮಾತನಾಡಿ, ಅಡಿಕೆಯ ಮೌಲ್ಯವರ್ಧನೆಯ ಕಡೆಗೆ ಇಂದು ಗಮನಹರಿಸಬೇಕಿದೆ. ಅಡಿಕೆ ಸೋಗೆ, ಹಾಳೆ, ಸಿಪ್ಪೆ ಇದ್ಯಾವದೂ ತ್ಯಾಜ್ಯಗಳಲ್ಲ. ಇವೆಲ್ಲವನ್ನು ಲಾಭದಾಯಕವಾಗಿ ಮೌಲ್ಯವರ್ಧನೆ ಮಾಡಬಹುದು.ಮೇಘಾಲಯದಲ್ಲಿ ಒಂದು ತಂಡ ಶೇ.60 ಅಡಿಕೆ ಸಿಪ್ಪೆ ಬಳಸಿ ಬಟ್ಟೆ ತಯಾರಿಸಿದೆ. ಅಡಿಕೆ ಸಿಪ್ಪೆ/ಸೋಗೆ ಬಳಸಿ ಅಣಬೆ ಬೆಳೆಯಲಾಗುತ್ತಿದೆ ಎಂದರು.

ಕ್ಯಾಲಿಕಟ್‍ನ ಡಿಎಎಸ್‍ಡಿ ಉಪನಿರ್ದೇಶಕಿ ಡಾ.ಫೆಮಿನಾ ಮಾತನಾಡಿ, ಅಡಿಕೆಯ ಮೌಲ್ಯವರ್ಧನೆಯ ಜೊತೆಗೆ ಅಡಿಕೆಯ ಔಷಧೀಯ ಉಪಯೋಗಗಳು, ಮಾನವನ ಆರೋಗ್ಯದ ಮೇಲೆ ಅಡಿಕೆಯ ಪ್ರಭಾವ ಹಾಗೂ ಅಡಿಕೆಯ ವಿತರಣೆ ಮತ್ತು ಬಳಕೆ ಇವುಗಳ ಅಧ್ಯಯನ ನಡೆಸಬೇಕಾಗಿದೆ, ಈ ಪ್ರಯತ್ನ ನಡೆಯುತ್ತಿದೆ ಎಂದರು.

ಅಡಿಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥರಾದ ಡಾ.ನಾಗರಾಜಪ್ಪ ಅಡಿವಪ್ಪರ್, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ಕೆ.ನಾಗರಾಜ್, ಅಡಿಕೆ ಪತ್ರಿಕೆಯ ಸಂಪಾದಕ ಶ್ರೀ ಪಡ್ರೆ ಮೊದಲಾದವರು ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

17 hours ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 days ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

2 days ago