ಸುದ್ದಿಗಳು

ಅಡಿಕೆ ತಳಿ ಮತ್ತು ಅಡಿಕೆ ಬೆಳೆಯಲ್ಲಿ ಉತ್ತಮ ಬೇಸಾಯ ಕ್ರಮ | ತರಬೇತಿ ಕಾರ್ಯಕ್ರಮ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತೀಯ ಕೃಷಿ ಸಂಶೋಧನಾ ಪರಿಷತ್ತು ಐಸಿಎಆರ್ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ಪ್ರಾಂತೀಯ ಕ್ಷೇತ್ರ ವಿಟ್ಲದಲ್ಲಿ ಅಡಿಕೆ ತಳಿಗಳು ಮತ್ತು ಅಡಿಕೆ ಬೆಳೆಯಲ್ಲಿ ಉತ್ತಮ ಬೇಸಾಯ ಕ್ರಮಗಳ ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ಎಮ್ ಕೆ ರಾಜೇಶ್, ಗೇರು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕರಾದ ಜೆ.ಡಿ ಅಡಿಗ ,ವಿಜ್ಞಾನಿಗಳಾದ  ನಾಗರಾಜ್ ಎನ್ ಆರ್ , ಇಲ್ಲೈನಾ ಅಪ್ಸರಾ , ಮಧು ಹಾಗೂ ಇತರ ವಿಜ್ಞಾನಿಗಳು ಭಾಗವಹಿಸಿದ್ದರು.

Advertisement

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ವಿಜ್ಞಾನಿಗಳಾದ ಡಾ. ನಾಗರಾಜ ಎನ್ ಆರ್ ಮಾತನಾಡಿದರು. ತರಬೇತಿಯಲ್ಲಿ ಅಡಿಕೆಯ ವಿವಿಧ ತಳಿಗಳು ಮತ್ತು ಸಂಕಲನ ತಳಿಗಳು, ಗಿಡಗಳಿಗೆ ಬಾಧಿಸುವ ರೋಗಗಳು ಮತ್ತು ಕೀಟಗಳು ಅವುಗಳ ನಿವಾರಣೋಪಾಯ , ಗಿಡಗಳಿಗೆ ಬಳಸಬಹುದಾದ ಗೊಬ್ಬರಗಳು, ಗಿಡಗಳ ರಕ್ಷಣೆ ಮತ್ತು ಪೋಷಣೆ, ಕಡಿಮೆ ಖರ್ಚಿನಲ್ಲಿ ಅಧಿಕ ಇಳುವರಿ ಪಡೆಯುವ ವಿಧಾನ ಮುಂತಾದ ವಿಚಾರಗಳ ಬಗ್ಗೆ ವಿಜ್ಞಾನಿಗಳು ಮಾಹಿತಿ ನೀಡಿದರು.
ತರಬೇತಿಯ ಬಳಿಕ ಕೃಷಿಕರಿಗೆ ಅಡಿಕೆ ಹಾಗೂ ಕೋಕೋ ಗಿಡಗಳ ವಿತರಣೆ ಮಾಡಲಾಯಿತು. ತರಬೇತಿ ಪಡೆದ ರೈತರಿಗೆ ಪ್ರಮಾಣ ಪತ್ರ ಸಂಸ್ಥೆಯ ವತಿಯಿಂದ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಂಪಾಜೆ ಗ್ರಾಮದ ಕೃಷಿಸಖಿ ಮೋಹಿನಿ ವಿಶ್ವನಾಥ್ (ನಿಶಾ), ಆಲೆಟ್ಟಿ ಗ್ರಾಮದ ಕೃಷಿಸಖಿ ಲೋಚನ ಭಾಗವಹಿಸಿದ್ದರು.

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೇರು ಹಣ್ಣು ಸೇವನೆಯಿಂದ ಪೌಷ್ಠಿಕಾಂಶದ ಕೊರತೆ ನಿವಾರಣೆ

ಗೇರು ಹಣ್ಣು ಸೇವನೆಯಿಂದ ಪೌಷ್ಠಿಕಾಂಶದ ಕೊರತೆ ನಿವಾರಿಸಬಹುದಾಗಿದೆ.ಗೇರು ಕೃಷಿಯಿಂದ ರೈತರು ಆರ್ಥಿಕ ಲಾಭ…

29 minutes ago

ಆಹಾರ ಕಲಬೆರಕೆ ವಿರುದ್ಧ ಕಠಿಣ ಕ್ರಮ | ಸಚಿವ ಪ್ರಲ್ಹಾದ್  ಜೋಷಿ ಸ್ಪಷ್ಟನೆ

ಆಹಾರ ಕಲಬೆರಕೆ  ದೂರುಗಳ ವಿರುದ್ಧ ಸರ್ಕಾರ  ಕಠಿಣ ಹಾಗೂ ತ್ವರಿತ ಕ್ರಮ ಕೈಗೊಳ್ಳುತ್ತಿದೆ.…

44 minutes ago

ಜಲ ಸಂರಕ್ಷಿತ ಗ್ರಾಮಗಳ ರೂಪಿಸಲು ಜಿಲ್ಲಾ ಮಟ್ಟದಲ್ಲಿ ನೀಲನಕ್ಷೆ ತಯಾರಿಸುವಂತೆ ಸೂಚನೆ

ಜಲ ಸಂರಕ್ಷಿತ ಗ್ರಾಮಗಳನ್ನು ರೂಪಿಸಲು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ…

3 hours ago

ಕೊಡಗು ಜಿಲ್ಲೆ | ಬೇಸಿಗೆ  ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಕ್ರಮಕ್ಕೆ ಸೂಚನೆ

ಕೊಡಗು ಜಿಲ್ಲೆಯಲ್ಲಿ ಬೇಸಿಗೆ  ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಮುನ್ನೆಚ್ಚರ ವಹಿಸಬೇಕು.…

4 hours ago

ಅರಣ್ಯ ಪ್ರದೇಶದಲ್ಲಿ ಸಮರ್ಪಕ ಭೂದಾಖಲೆಗಳೊಂದಿಗೆ ವಾಸಿಸುತ್ತಿರುವವರ ಒಕ್ಕೆಲೆಬ್ಬಿಸದಿರಿ

ಅರಣ್ಯ ಪ್ರದೇಶದಲ್ಲಿ ದಶಕಗಳ ಹಿಂದಿನಿಂದಲೂ ಸಮರ್ಪಕವಾದ ಭೂದಾಖಲೆಗಳೊಂದಿಗೆ ವಾಸಿಸುತ್ತಿರುವ ಜನರನ್ನು ಒಕ್ಕಲೆಬ್ಬಿಸುವ ಪ್ರಯತ್ನ…

4 hours ago

ಅವರು ಗೂಡಂಗಡಿಯಲ್ಲಿ ಚಹಾ ಕುಡಿದರೇ ಸುದ್ದಿಯಾಗುತ್ತದೆ…!

ತುಂಬಾ ಸಲ ಹಣ ಇರುವ ವ್ಯಕ್ತಿ, ಶ್ರೀಮಂತನೊಬ್ಬ ಗೂಡಂಗಡಿಯಲ್ಲಿ ಚಹಾ ಕುಡಿದರೆ ಸುದ್ದಿಯಾಗುತ್ತದೆ.…

4 hours ago