ಭಾರತೀಯ ಕೃಷಿ ಸಂಶೋಧನಾ ಪರಿಷತ್ತು ಐಸಿಎಆರ್ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ಪ್ರಾಂತೀಯ ಕ್ಷೇತ್ರ ವಿಟ್ಲದಲ್ಲಿ ಅಡಿಕೆ ತಳಿಗಳು ಮತ್ತು ಅಡಿಕೆ ಬೆಳೆಯಲ್ಲಿ ಉತ್ತಮ ಬೇಸಾಯ ಕ್ರಮಗಳ ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ಎಮ್ ಕೆ ರಾಜೇಶ್, ಗೇರು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕರಾದ ಜೆ.ಡಿ ಅಡಿಗ ,ವಿಜ್ಞಾನಿಗಳಾದ ನಾಗರಾಜ್ ಎನ್ ಆರ್ , ಇಲ್ಲೈನಾ ಅಪ್ಸರಾ , ಮಧು ಹಾಗೂ ಇತರ ವಿಜ್ಞಾನಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ವಿಜ್ಞಾನಿಗಳಾದ ಡಾ. ನಾಗರಾಜ ಎನ್ ಆರ್ ಮಾತನಾಡಿದರು. ತರಬೇತಿಯಲ್ಲಿ ಅಡಿಕೆಯ ವಿವಿಧ ತಳಿಗಳು ಮತ್ತು ಸಂಕಲನ ತಳಿಗಳು, ಗಿಡಗಳಿಗೆ ಬಾಧಿಸುವ ರೋಗಗಳು ಮತ್ತು ಕೀಟಗಳು ಅವುಗಳ ನಿವಾರಣೋಪಾಯ , ಗಿಡಗಳಿಗೆ ಬಳಸಬಹುದಾದ ಗೊಬ್ಬರಗಳು, ಗಿಡಗಳ ರಕ್ಷಣೆ ಮತ್ತು ಪೋಷಣೆ, ಕಡಿಮೆ ಖರ್ಚಿನಲ್ಲಿ ಅಧಿಕ ಇಳುವರಿ ಪಡೆಯುವ ವಿಧಾನ ಮುಂತಾದ ವಿಚಾರಗಳ ಬಗ್ಗೆ ವಿಜ್ಞಾನಿಗಳು ಮಾಹಿತಿ ನೀಡಿದರು.
ತರಬೇತಿಯ ಬಳಿಕ ಕೃಷಿಕರಿಗೆ ಅಡಿಕೆ ಹಾಗೂ ಕೋಕೋ ಗಿಡಗಳ ವಿತರಣೆ ಮಾಡಲಾಯಿತು. ತರಬೇತಿ ಪಡೆದ ರೈತರಿಗೆ ಪ್ರಮಾಣ ಪತ್ರ ಸಂಸ್ಥೆಯ ವತಿಯಿಂದ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಂಪಾಜೆ ಗ್ರಾಮದ ಕೃಷಿಸಖಿ ಮೋಹಿನಿ ವಿಶ್ವನಾಥ್ (ನಿಶಾ), ಆಲೆಟ್ಟಿ ಗ್ರಾಮದ ಕೃಷಿಸಖಿ ಲೋಚನ ಭಾಗವಹಿಸಿದ್ದರು.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…