ಭಾರತೀಯ ಕೃಷಿ ಸಂಶೋಧನಾ ಪರಿಷತ್ತು ಐಸಿಎಆರ್ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ಪ್ರಾಂತೀಯ ಕ್ಷೇತ್ರ ವಿಟ್ಲದಲ್ಲಿ ಅಡಿಕೆ ತಳಿಗಳು ಮತ್ತು ಅಡಿಕೆ ಬೆಳೆಯಲ್ಲಿ ಉತ್ತಮ ಬೇಸಾಯ ಕ್ರಮಗಳ ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ಎಮ್ ಕೆ ರಾಜೇಶ್, ಗೇರು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕರಾದ ಜೆ.ಡಿ ಅಡಿಗ ,ವಿಜ್ಞಾನಿಗಳಾದ ನಾಗರಾಜ್ ಎನ್ ಆರ್ , ಇಲ್ಲೈನಾ ಅಪ್ಸರಾ , ಮಧು ಹಾಗೂ ಇತರ ವಿಜ್ಞಾನಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ವಿಜ್ಞಾನಿಗಳಾದ ಡಾ. ನಾಗರಾಜ ಎನ್ ಆರ್ ಮಾತನಾಡಿದರು. ತರಬೇತಿಯಲ್ಲಿ ಅಡಿಕೆಯ ವಿವಿಧ ತಳಿಗಳು ಮತ್ತು ಸಂಕಲನ ತಳಿಗಳು, ಗಿಡಗಳಿಗೆ ಬಾಧಿಸುವ ರೋಗಗಳು ಮತ್ತು ಕೀಟಗಳು ಅವುಗಳ ನಿವಾರಣೋಪಾಯ , ಗಿಡಗಳಿಗೆ ಬಳಸಬಹುದಾದ ಗೊಬ್ಬರಗಳು, ಗಿಡಗಳ ರಕ್ಷಣೆ ಮತ್ತು ಪೋಷಣೆ, ಕಡಿಮೆ ಖರ್ಚಿನಲ್ಲಿ ಅಧಿಕ ಇಳುವರಿ ಪಡೆಯುವ ವಿಧಾನ ಮುಂತಾದ ವಿಚಾರಗಳ ಬಗ್ಗೆ ವಿಜ್ಞಾನಿಗಳು ಮಾಹಿತಿ ನೀಡಿದರು.
ತರಬೇತಿಯ ಬಳಿಕ ಕೃಷಿಕರಿಗೆ ಅಡಿಕೆ ಹಾಗೂ ಕೋಕೋ ಗಿಡಗಳ ವಿತರಣೆ ಮಾಡಲಾಯಿತು. ತರಬೇತಿ ಪಡೆದ ರೈತರಿಗೆ ಪ್ರಮಾಣ ಪತ್ರ ಸಂಸ್ಥೆಯ ವತಿಯಿಂದ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಂಪಾಜೆ ಗ್ರಾಮದ ಕೃಷಿಸಖಿ ಮೋಹಿನಿ ವಿಶ್ವನಾಥ್ (ನಿಶಾ), ಆಲೆಟ್ಟಿ ಗ್ರಾಮದ ಕೃಷಿಸಖಿ ಲೋಚನ ಭಾಗವಹಿಸಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨…
ಹಲಸಿನ ಕಾಯಿ ಪೂರಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಕಾಯಿ 1/2 ಕಪ್, ಗೋಧಿ ಹುಡಿ.1…
ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…
ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…
ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಖಾಸಗಿಯವರಿಂದ ಒತ್ತುವರಿಯಾಗಿರುವ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…