ಭಾರತೀಯ ಕೃಷಿ ಸಂಶೋಧನಾ ಪರಿಷತ್ತು ಐಸಿಎಆರ್ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ಪ್ರಾಂತೀಯ ಕ್ಷೇತ್ರ ವಿಟ್ಲದಲ್ಲಿ ಅಡಿಕೆ ತಳಿಗಳು ಮತ್ತು ಅಡಿಕೆ ಬೆಳೆಯಲ್ಲಿ ಉತ್ತಮ ಬೇಸಾಯ ಕ್ರಮಗಳ ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ಎಮ್ ಕೆ ರಾಜೇಶ್, ಗೇರು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕರಾದ ಜೆ.ಡಿ ಅಡಿಗ ,ವಿಜ್ಞಾನಿಗಳಾದ ನಾಗರಾಜ್ ಎನ್ ಆರ್ , ಇಲ್ಲೈನಾ ಅಪ್ಸರಾ , ಮಧು ಹಾಗೂ ಇತರ ವಿಜ್ಞಾನಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ವಿಜ್ಞಾನಿಗಳಾದ ಡಾ. ನಾಗರಾಜ ಎನ್ ಆರ್ ಮಾತನಾಡಿದರು. ತರಬೇತಿಯಲ್ಲಿ ಅಡಿಕೆಯ ವಿವಿಧ ತಳಿಗಳು ಮತ್ತು ಸಂಕಲನ ತಳಿಗಳು, ಗಿಡಗಳಿಗೆ ಬಾಧಿಸುವ ರೋಗಗಳು ಮತ್ತು ಕೀಟಗಳು ಅವುಗಳ ನಿವಾರಣೋಪಾಯ , ಗಿಡಗಳಿಗೆ ಬಳಸಬಹುದಾದ ಗೊಬ್ಬರಗಳು, ಗಿಡಗಳ ರಕ್ಷಣೆ ಮತ್ತು ಪೋಷಣೆ, ಕಡಿಮೆ ಖರ್ಚಿನಲ್ಲಿ ಅಧಿಕ ಇಳುವರಿ ಪಡೆಯುವ ವಿಧಾನ ಮುಂತಾದ ವಿಚಾರಗಳ ಬಗ್ಗೆ ವಿಜ್ಞಾನಿಗಳು ಮಾಹಿತಿ ನೀಡಿದರು.
ತರಬೇತಿಯ ಬಳಿಕ ಕೃಷಿಕರಿಗೆ ಅಡಿಕೆ ಹಾಗೂ ಕೋಕೋ ಗಿಡಗಳ ವಿತರಣೆ ಮಾಡಲಾಯಿತು. ತರಬೇತಿ ಪಡೆದ ರೈತರಿಗೆ ಪ್ರಮಾಣ ಪತ್ರ ಸಂಸ್ಥೆಯ ವತಿಯಿಂದ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಂಪಾಜೆ ಗ್ರಾಮದ ಕೃಷಿಸಖಿ ಮೋಹಿನಿ ವಿಶ್ವನಾಥ್ (ನಿಶಾ), ಆಲೆಟ್ಟಿ ಗ್ರಾಮದ ಕೃಷಿಸಖಿ ಲೋಚನ ಭಾಗವಹಿಸಿದ್ದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…