ಭಾರತೀಯ ಕೃಷಿ ಸಂಶೋಧನಾ ಪರಿಷತ್ತು ಐಸಿಎಆರ್ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ಪ್ರಾಂತೀಯ ಕ್ಷೇತ್ರ ವಿಟ್ಲದಲ್ಲಿ ಅಡಿಕೆ ತಳಿಗಳು ಮತ್ತು ಅಡಿಕೆ ಬೆಳೆಯಲ್ಲಿ ಉತ್ತಮ ಬೇಸಾಯ ಕ್ರಮಗಳ ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ಎಮ್ ಕೆ ರಾಜೇಶ್, ಗೇರು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕರಾದ ಜೆ.ಡಿ ಅಡಿಗ ,ವಿಜ್ಞಾನಿಗಳಾದ ನಾಗರಾಜ್ ಎನ್ ಆರ್ , ಇಲ್ಲೈನಾ ಅಪ್ಸರಾ , ಮಧು ಹಾಗೂ ಇತರ ವಿಜ್ಞಾನಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ವಿಜ್ಞಾನಿಗಳಾದ ಡಾ. ನಾಗರಾಜ ಎನ್ ಆರ್ ಮಾತನಾಡಿದರು. ತರಬೇತಿಯಲ್ಲಿ ಅಡಿಕೆಯ ವಿವಿಧ ತಳಿಗಳು ಮತ್ತು ಸಂಕಲನ ತಳಿಗಳು, ಗಿಡಗಳಿಗೆ ಬಾಧಿಸುವ ರೋಗಗಳು ಮತ್ತು ಕೀಟಗಳು ಅವುಗಳ ನಿವಾರಣೋಪಾಯ , ಗಿಡಗಳಿಗೆ ಬಳಸಬಹುದಾದ ಗೊಬ್ಬರಗಳು, ಗಿಡಗಳ ರಕ್ಷಣೆ ಮತ್ತು ಪೋಷಣೆ, ಕಡಿಮೆ ಖರ್ಚಿನಲ್ಲಿ ಅಧಿಕ ಇಳುವರಿ ಪಡೆಯುವ ವಿಧಾನ ಮುಂತಾದ ವಿಚಾರಗಳ ಬಗ್ಗೆ ವಿಜ್ಞಾನಿಗಳು ಮಾಹಿತಿ ನೀಡಿದರು.
ತರಬೇತಿಯ ಬಳಿಕ ಕೃಷಿಕರಿಗೆ ಅಡಿಕೆ ಹಾಗೂ ಕೋಕೋ ಗಿಡಗಳ ವಿತರಣೆ ಮಾಡಲಾಯಿತು. ತರಬೇತಿ ಪಡೆದ ರೈತರಿಗೆ ಪ್ರಮಾಣ ಪತ್ರ ಸಂಸ್ಥೆಯ ವತಿಯಿಂದ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಂಪಾಜೆ ಗ್ರಾಮದ ಕೃಷಿಸಖಿ ಮೋಹಿನಿ ವಿಶ್ವನಾಥ್ (ನಿಶಾ), ಆಲೆಟ್ಟಿ ಗ್ರಾಮದ ಕೃಷಿಸಖಿ ಲೋಚನ ಭಾಗವಹಿಸಿದ್ದರು.
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…