Advertisement
ಸುದ್ದಿಗಳು

ಅಡಿಕೆ ತಳಿ ಮತ್ತು ಅಡಿಕೆ ಬೆಳೆಯಲ್ಲಿ ಉತ್ತಮ ಬೇಸಾಯ ಕ್ರಮ | ತರಬೇತಿ ಕಾರ್ಯಕ್ರಮ

Share

ಭಾರತೀಯ ಕೃಷಿ ಸಂಶೋಧನಾ ಪರಿಷತ್ತು ಐಸಿಎಆರ್ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ಪ್ರಾಂತೀಯ ಕ್ಷೇತ್ರ ವಿಟ್ಲದಲ್ಲಿ ಅಡಿಕೆ ತಳಿಗಳು ಮತ್ತು ಅಡಿಕೆ ಬೆಳೆಯಲ್ಲಿ ಉತ್ತಮ ಬೇಸಾಯ ಕ್ರಮಗಳ ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ಎಮ್ ಕೆ ರಾಜೇಶ್, ಗೇರು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕರಾದ ಜೆ.ಡಿ ಅಡಿಗ ,ವಿಜ್ಞಾನಿಗಳಾದ  ನಾಗರಾಜ್ ಎನ್ ಆರ್ , ಇಲ್ಲೈನಾ ಅಪ್ಸರಾ , ಮಧು ಹಾಗೂ ಇತರ ವಿಜ್ಞಾನಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ವಿಜ್ಞಾನಿಗಳಾದ ಡಾ. ನಾಗರಾಜ ಎನ್ ಆರ್ ಮಾತನಾಡಿದರು. ತರಬೇತಿಯಲ್ಲಿ ಅಡಿಕೆಯ ವಿವಿಧ ತಳಿಗಳು ಮತ್ತು ಸಂಕಲನ ತಳಿಗಳು, ಗಿಡಗಳಿಗೆ ಬಾಧಿಸುವ ರೋಗಗಳು ಮತ್ತು ಕೀಟಗಳು ಅವುಗಳ ನಿವಾರಣೋಪಾಯ , ಗಿಡಗಳಿಗೆ ಬಳಸಬಹುದಾದ ಗೊಬ್ಬರಗಳು, ಗಿಡಗಳ ರಕ್ಷಣೆ ಮತ್ತು ಪೋಷಣೆ, ಕಡಿಮೆ ಖರ್ಚಿನಲ್ಲಿ ಅಧಿಕ ಇಳುವರಿ ಪಡೆಯುವ ವಿಧಾನ ಮುಂತಾದ ವಿಚಾರಗಳ ಬಗ್ಗೆ ವಿಜ್ಞಾನಿಗಳು ಮಾಹಿತಿ ನೀಡಿದರು.
ತರಬೇತಿಯ ಬಳಿಕ ಕೃಷಿಕರಿಗೆ ಅಡಿಕೆ ಹಾಗೂ ಕೋಕೋ ಗಿಡಗಳ ವಿತರಣೆ ಮಾಡಲಾಯಿತು. ತರಬೇತಿ ಪಡೆದ ರೈತರಿಗೆ ಪ್ರಮಾಣ ಪತ್ರ ಸಂಸ್ಥೆಯ ವತಿಯಿಂದ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಂಪಾಜೆ ಗ್ರಾಮದ ಕೃಷಿಸಖಿ ಮೋಹಿನಿ ವಿಶ್ವನಾಥ್ (ನಿಶಾ), ಆಲೆಟ್ಟಿ ಗ್ರಾಮದ ಕೃಷಿಸಖಿ ಲೋಚನ ಭಾಗವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

5 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

7 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

8 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

9 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

21 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago