ಅಸ್ಸಾಂನಲ್ಲಿ ಬರ್ಮಾ ಅಡಿಕೆಗೆ ತಡೆ | ಸುಮಾರು 1.5 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶ | ರೈಲಿನ ಮೂಲಕ ಅಡಿಕೆ ಕಳ್ಳಸಾಗಾಣಿಕೆಯ ಜಾಲ ಪತ್ತೆ |

April 18, 2022
1:21 PM

ಬರ್ಮಾ ಅಡಿಕೆ ಕಳ್ಳಸಾಗಾಣಿಕೆಯನ್ನು ಪೊಲೀಸರು ಮತ್ತೆ ಪತ್ತೆ ಮಾಡಿದ್ದಾರೆ. ಅಸ್ಸಾಂನ ಹೈಲಕಂಡಿ ಪ್ರದೇಶದಲ್ಲಿ ಸುಮಾರು 1.5 ಕೋಟಿ ರೂಪಾಯಿ ಮೌಲ್ಯದ ಬರ್ಮಾ ಅಡಿಕೆಯನ್ನು ಅಸ್ಸಾಂ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಇದೀಗ ರೈಲಿನ ಮೂಲಕ ಅಡಿಕೆ ಕಳ್ಳಸಾಗಾಣಿಕೆ ನಡೆಸುವ ಜಾಲ ಪತ್ತೆಯಾಗಿದೆ.

Advertisement
Advertisement
Advertisement

ಪೊಲೀಸರ ತಂಡವು ಮಿಜೋರಾಂನ ಬೈರಾಬಿಯಿಂದ ಕ್ಯಾಚಾರ್ ಜಿಲ್ಲೆಯ ಸಿಲ್ಚಾರ್‌ಗೆ ತೆರಳುತ್ತಿದ್ದ ರೈಲಿನ ಎರಡು ಬೋಗಿಗಳಿಂದ 560 ಕ್ಕೂ ಹೆಚ್ಚು ಚೀಲಗಳಿದ್ದ ಬರ್ಮಾದ ಅಡಿಕೆಯನ್ನು ವಶಪಡಿಸಿಕೊಂಡಿದೆ. ಅಸ್ಸಾಂ-ಮಿಜೋರಾಂ  ಗಡಿಯ ಸಮೀಪದಲ್ಲಿರುವ ಈ ರೈಲು ನಿಲ್ದಾಣವು ಹೈಲಕಂಡಿ ಬಳಿಯಲ್ಲಿದೆ. ವಶಪಡಿಸಿಕೊಂಡ ಬರ್ಮಾ ಅಡಿಕೆಯನ್ನು ರೈಲ್ವೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ರೈಲಿನ  ಎರಡು ಬೋಗಿಗಳನ್ನು ಮುಚ್ಚಿರುವುದನ್ನು ನೋಡಿದ ರೈಲ್ವೆ ನಿಲ್ದಾಣದಲ್ಲಿದ್ದ ಕೆಲವರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಬೋಗಿಗಳನ್ನು ಪರಿಶೀಲನೆ ನಡೆಸಿದಾಗ ಬರ್ಮಾ ಅಡಿಕೆ ಇರುವುದು ಪತ್ತೆಯಾಗಿದೆ. ತೆರಿಗೆ ರಹಿತವಾಗಿ ಅಕ್ರಮವಾಗಿ ಅಡಿಕೆ ಸಾಗಾಟ ನಡೆಯುತ್ತಿತ್ತು. ಇದೀಗ ರೈಲ್ವೇ ಮೂಲಕವೂ ಅಕ್ರಮವಾಗಿ ಅಡಿಕೆ ಸಾಗಾಣಿಕೆ ಮಾಡುವುದರ ಬಗ್ಗೆ ಗಂಭೀರ ತನಿಖೆ ಆರಂಭವಾಗಿದೆ.

Advertisement

ಬರ್ಮಾದ ಅಡಿಕೆಯನ್ನು ಮಿಜೋರಾಂನಿಂದ ಪಶ್ಚಿಮ ಬಂಗಾಳಕ್ಕೆ ಕಳ್ಳಸಾಗಣೆ ಮಾಡಿ ಅಲ್ಲಿಂದ ದೇಶದ ವಿವಿದೆಡೆಗೆ ಸಾಗಾಟ ಮಾಡುವ ಜಾಲ ಇದರ ಹಿಂದಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.  ಕಳೆದ ತಿಂಗಳಿನಿಂದಲೂ ಕೂಡಾ ಭಾರೀ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆಯನ್ನು ಪೊಲೀಸರು ತಡೆದಿದ್ದರು. ಜ.28 ರಂದು ಕೂಡಾ ಸುಮಾರು ಒಂದು ಕೋಟಿ ರೂಪಾಯಿ ಮೌಲ್ಯದ ಅಡಿಕೆ ಅಕ್ರಮ ಸಾಗಾಟ ತಡೆಯಲಾಗಿತ್ತು. ಜ 5 ರಂದು ಮೂರು ಲಾರಿಗಳಿಂದ  ಬರ್ಮಾ ಅಡಿಕೆಯನ್ನು ವಶಪಡಿಸಿಕೊಂಡು ಏಳು ಜನರನ್ನು ಬಂಧಿಸಲಾಗಿತ್ತು, ಜ 3 ರಂದು ಕರೀಮ್‌ಗಂಜ್ ಜಿಲ್ಲೆಯಲ್ಲಿ ಎರಡು ಲಾರಿಗಳಿಂದ 1 ಕೋಟಿ ಮೌಲ್ಯದ ಅಡಿಕೆ ವಶಪಡಿಸಿಕೊಳ್ಳಲಾಯಿತು ಮತ್ತು ನಾಲ್ವರನ್ನು ಬಂಧಿಸಲಾಯಿತು.

ಇದೀಗ ಕಳೆದ ಕೆಲವು ಸಮಯಗಳಿಂದ ಅಡಿಕೆ ಅಕ್ರಮ ಸಂಪೂರ್ಣ ತಡೆಯಲಾಗಿದ್ದರೂ ಮತ್ತೆ ಅಕ್ರಮ ಚಟುವಟಿಕೆಗಳು ಬಹುದೊಡ್ಡ ಮಾಫಿಯಾ ಮಾದರಿಯಲ್ಲಿಯೇ ಅಡಿಕೆ ಕಳ್ಳ ಸಾಗಾಣಿಕೆ ನಡೆಯುತ್ತಿದೆ. ಸರ್ಕಾರದ ಕಟ್ಟುನಿಟ್ಟಿನ ಕ್ರಮದ ಕಾರಣದಿಂದ ಅಡಿಕೆ ಕಳ್ಳಸಾಗಾಣಿಕೆಗೆ ಬ್ರೇಕ್‌ ಬೀಳುತ್ತಿದೆ. ಈ ಕಾರಣದಿಂದ ದಕ್ಷಿಣ ಭಾರತದ ಅಡಿಕೆ ಧಾರಣೆ ಬಹುಪಾಲು ಸ್ಥಿರತೆಯ ಹಾದಿಯಲ್ಲಿ ಸದ್ಯ ಇದೆ.

Advertisement

 

 

Advertisement

 

 

Advertisement

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 28-03-2024 | ಕೆಲವು ಕಡೆ ತುಂತುರು ಮಳೆ | ಮಾ.31 ನಂತರ ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ |
March 28, 2024
1:19 PM
by: ಸಾಯಿಶೇಖರ್ ಕರಿಕಳ
ಬರ ಹಿನ್ನೆಲೆ | ಮೈಸೂರು ಜಿಲ್ಲೆಯಲ್ಲಿ ಪಂಪ್‌ಸೆಟ್ ಬಳಸಿ ಕೃಷಿಗೆ ನದಿ ನೀರು ಬಳಕೆ ನಿಷೇಧ |
March 27, 2024
10:01 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಪ್ರಕರಣಗಳಲ್ಲಿ ದೂರು ದಾಖಲಾಗುತ್ತಿಲ್ಲವೇಕೆ…? | ಆರೋಪಿಗಳು ಪತ್ತೆಯಾಗುತ್ತಿಲ್ಲವೇಕೆ…? |
March 27, 2024
9:32 PM
by: ದ ರೂರಲ್ ಮಿರರ್.ಕಾಂ
Karnataka Weather | 27-03-2024 | ರಾಜ್ಯದಲ್ಲಿ ಒಣ ಹವೆ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |
March 27, 2024
12:49 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror