ಬರ್ಮಾ ಅಡಿಕೆ ಕಳ್ಳಸಾಗಾಣಿಕೆಯನ್ನು ಪೊಲೀಸರು ಮತ್ತೆ ಪತ್ತೆ ಮಾಡಿದ್ದಾರೆ. ಅಸ್ಸಾಂನ ಹೈಲಕಂಡಿ ಪ್ರದೇಶದಲ್ಲಿ ಸುಮಾರು 1.5 ಕೋಟಿ ರೂಪಾಯಿ ಮೌಲ್ಯದ ಬರ್ಮಾ ಅಡಿಕೆಯನ್ನು ಅಸ್ಸಾಂ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಇದೀಗ ರೈಲಿನ ಮೂಲಕ ಅಡಿಕೆ ಕಳ್ಳಸಾಗಾಣಿಕೆ ನಡೆಸುವ ಜಾಲ ಪತ್ತೆಯಾಗಿದೆ.
ಪೊಲೀಸರ ತಂಡವು ಮಿಜೋರಾಂನ ಬೈರಾಬಿಯಿಂದ ಕ್ಯಾಚಾರ್ ಜಿಲ್ಲೆಯ ಸಿಲ್ಚಾರ್ಗೆ ತೆರಳುತ್ತಿದ್ದ ರೈಲಿನ ಎರಡು ಬೋಗಿಗಳಿಂದ 560 ಕ್ಕೂ ಹೆಚ್ಚು ಚೀಲಗಳಿದ್ದ ಬರ್ಮಾದ ಅಡಿಕೆಯನ್ನು ವಶಪಡಿಸಿಕೊಂಡಿದೆ. ಅಸ್ಸಾಂ-ಮಿಜೋರಾಂ ಗಡಿಯ ಸಮೀಪದಲ್ಲಿರುವ ಈ ರೈಲು ನಿಲ್ದಾಣವು ಹೈಲಕಂಡಿ ಬಳಿಯಲ್ಲಿದೆ. ವಶಪಡಿಸಿಕೊಂಡ ಬರ್ಮಾ ಅಡಿಕೆಯನ್ನು ರೈಲ್ವೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ರೈಲಿನ ಎರಡು ಬೋಗಿಗಳನ್ನು ಮುಚ್ಚಿರುವುದನ್ನು ನೋಡಿದ ರೈಲ್ವೆ ನಿಲ್ದಾಣದಲ್ಲಿದ್ದ ಕೆಲವರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಬೋಗಿಗಳನ್ನು ಪರಿಶೀಲನೆ ನಡೆಸಿದಾಗ ಬರ್ಮಾ ಅಡಿಕೆ ಇರುವುದು ಪತ್ತೆಯಾಗಿದೆ. ತೆರಿಗೆ ರಹಿತವಾಗಿ ಅಕ್ರಮವಾಗಿ ಅಡಿಕೆ ಸಾಗಾಟ ನಡೆಯುತ್ತಿತ್ತು. ಇದೀಗ ರೈಲ್ವೇ ಮೂಲಕವೂ ಅಕ್ರಮವಾಗಿ ಅಡಿಕೆ ಸಾಗಾಣಿಕೆ ಮಾಡುವುದರ ಬಗ್ಗೆ ಗಂಭೀರ ತನಿಖೆ ಆರಂಭವಾಗಿದೆ.
ಬರ್ಮಾದ ಅಡಿಕೆಯನ್ನು ಮಿಜೋರಾಂನಿಂದ ಪಶ್ಚಿಮ ಬಂಗಾಳಕ್ಕೆ ಕಳ್ಳಸಾಗಣೆ ಮಾಡಿ ಅಲ್ಲಿಂದ ದೇಶದ ವಿವಿದೆಡೆಗೆ ಸಾಗಾಟ ಮಾಡುವ ಜಾಲ ಇದರ ಹಿಂದಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಕಳೆದ ತಿಂಗಳಿನಿಂದಲೂ ಕೂಡಾ ಭಾರೀ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆಯನ್ನು ಪೊಲೀಸರು ತಡೆದಿದ್ದರು. ಜ.28 ರಂದು ಕೂಡಾ ಸುಮಾರು ಒಂದು ಕೋಟಿ ರೂಪಾಯಿ ಮೌಲ್ಯದ ಅಡಿಕೆ ಅಕ್ರಮ ಸಾಗಾಟ ತಡೆಯಲಾಗಿತ್ತು. ಜ 5 ರಂದು ಮೂರು ಲಾರಿಗಳಿಂದ ಬರ್ಮಾ ಅಡಿಕೆಯನ್ನು ವಶಪಡಿಸಿಕೊಂಡು ಏಳು ಜನರನ್ನು ಬಂಧಿಸಲಾಗಿತ್ತು, ಜ 3 ರಂದು ಕರೀಮ್ಗಂಜ್ ಜಿಲ್ಲೆಯಲ್ಲಿ ಎರಡು ಲಾರಿಗಳಿಂದ 1 ಕೋಟಿ ಮೌಲ್ಯದ ಅಡಿಕೆ ವಶಪಡಿಸಿಕೊಳ್ಳಲಾಯಿತು ಮತ್ತು ನಾಲ್ವರನ್ನು ಬಂಧಿಸಲಾಯಿತು.
ಇದೀಗ ಕಳೆದ ಕೆಲವು ಸಮಯಗಳಿಂದ ಅಡಿಕೆ ಅಕ್ರಮ ಸಂಪೂರ್ಣ ತಡೆಯಲಾಗಿದ್ದರೂ ಮತ್ತೆ ಅಕ್ರಮ ಚಟುವಟಿಕೆಗಳು ಬಹುದೊಡ್ಡ ಮಾಫಿಯಾ ಮಾದರಿಯಲ್ಲಿಯೇ ಅಡಿಕೆ ಕಳ್ಳ ಸಾಗಾಣಿಕೆ ನಡೆಯುತ್ತಿದೆ. ಸರ್ಕಾರದ ಕಟ್ಟುನಿಟ್ಟಿನ ಕ್ರಮದ ಕಾರಣದಿಂದ ಅಡಿಕೆ ಕಳ್ಳಸಾಗಾಣಿಕೆಗೆ ಬ್ರೇಕ್ ಬೀಳುತ್ತಿದೆ. ಈ ಕಾರಣದಿಂದ ದಕ್ಷಿಣ ಭಾರತದ ಅಡಿಕೆ ಧಾರಣೆ ಬಹುಪಾಲು ಸ್ಥಿರತೆಯ ಹಾದಿಯಲ್ಲಿ ಸದ್ಯ ಇದೆ.
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…