Advertisement
MIRROR FOCUS

ಅಸ್ಸಾಂನಲ್ಲಿ ಬರ್ಮಾ ಅಡಿಕೆಗೆ ತಡೆ | ಸುಮಾರು 1.5 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶ | ರೈಲಿನ ಮೂಲಕ ಅಡಿಕೆ ಕಳ್ಳಸಾಗಾಣಿಕೆಯ ಜಾಲ ಪತ್ತೆ |

Share

ಬರ್ಮಾ ಅಡಿಕೆ ಕಳ್ಳಸಾಗಾಣಿಕೆಯನ್ನು ಪೊಲೀಸರು ಮತ್ತೆ ಪತ್ತೆ ಮಾಡಿದ್ದಾರೆ. ಅಸ್ಸಾಂನ ಹೈಲಕಂಡಿ ಪ್ರದೇಶದಲ್ಲಿ ಸುಮಾರು 1.5 ಕೋಟಿ ರೂಪಾಯಿ ಮೌಲ್ಯದ ಬರ್ಮಾ ಅಡಿಕೆಯನ್ನು ಅಸ್ಸಾಂ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಇದೀಗ ರೈಲಿನ ಮೂಲಕ ಅಡಿಕೆ ಕಳ್ಳಸಾಗಾಣಿಕೆ ನಡೆಸುವ ಜಾಲ ಪತ್ತೆಯಾಗಿದೆ.

ಪೊಲೀಸರ ತಂಡವು ಮಿಜೋರಾಂನ ಬೈರಾಬಿಯಿಂದ ಕ್ಯಾಚಾರ್ ಜಿಲ್ಲೆಯ ಸಿಲ್ಚಾರ್‌ಗೆ ತೆರಳುತ್ತಿದ್ದ ರೈಲಿನ ಎರಡು ಬೋಗಿಗಳಿಂದ 560 ಕ್ಕೂ ಹೆಚ್ಚು ಚೀಲಗಳಿದ್ದ ಬರ್ಮಾದ ಅಡಿಕೆಯನ್ನು ವಶಪಡಿಸಿಕೊಂಡಿದೆ. ಅಸ್ಸಾಂ-ಮಿಜೋರಾಂ  ಗಡಿಯ ಸಮೀಪದಲ್ಲಿರುವ ಈ ರೈಲು ನಿಲ್ದಾಣವು ಹೈಲಕಂಡಿ ಬಳಿಯಲ್ಲಿದೆ. ವಶಪಡಿಸಿಕೊಂಡ ಬರ್ಮಾ ಅಡಿಕೆಯನ್ನು ರೈಲ್ವೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ರೈಲಿನ  ಎರಡು ಬೋಗಿಗಳನ್ನು ಮುಚ್ಚಿರುವುದನ್ನು ನೋಡಿದ ರೈಲ್ವೆ ನಿಲ್ದಾಣದಲ್ಲಿದ್ದ ಕೆಲವರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಬೋಗಿಗಳನ್ನು ಪರಿಶೀಲನೆ ನಡೆಸಿದಾಗ ಬರ್ಮಾ ಅಡಿಕೆ ಇರುವುದು ಪತ್ತೆಯಾಗಿದೆ. ತೆರಿಗೆ ರಹಿತವಾಗಿ ಅಕ್ರಮವಾಗಿ ಅಡಿಕೆ ಸಾಗಾಟ ನಡೆಯುತ್ತಿತ್ತು. ಇದೀಗ ರೈಲ್ವೇ ಮೂಲಕವೂ ಅಕ್ರಮವಾಗಿ ಅಡಿಕೆ ಸಾಗಾಣಿಕೆ ಮಾಡುವುದರ ಬಗ್ಗೆ ಗಂಭೀರ ತನಿಖೆ ಆರಂಭವಾಗಿದೆ.

ಬರ್ಮಾದ ಅಡಿಕೆಯನ್ನು ಮಿಜೋರಾಂನಿಂದ ಪಶ್ಚಿಮ ಬಂಗಾಳಕ್ಕೆ ಕಳ್ಳಸಾಗಣೆ ಮಾಡಿ ಅಲ್ಲಿಂದ ದೇಶದ ವಿವಿದೆಡೆಗೆ ಸಾಗಾಟ ಮಾಡುವ ಜಾಲ ಇದರ ಹಿಂದಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.  ಕಳೆದ ತಿಂಗಳಿನಿಂದಲೂ ಕೂಡಾ ಭಾರೀ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆಯನ್ನು ಪೊಲೀಸರು ತಡೆದಿದ್ದರು. ಜ.28 ರಂದು ಕೂಡಾ ಸುಮಾರು ಒಂದು ಕೋಟಿ ರೂಪಾಯಿ ಮೌಲ್ಯದ ಅಡಿಕೆ ಅಕ್ರಮ ಸಾಗಾಟ ತಡೆಯಲಾಗಿತ್ತು. ಜ 5 ರಂದು ಮೂರು ಲಾರಿಗಳಿಂದ  ಬರ್ಮಾ ಅಡಿಕೆಯನ್ನು ವಶಪಡಿಸಿಕೊಂಡು ಏಳು ಜನರನ್ನು ಬಂಧಿಸಲಾಗಿತ್ತು, ಜ 3 ರಂದು ಕರೀಮ್‌ಗಂಜ್ ಜಿಲ್ಲೆಯಲ್ಲಿ ಎರಡು ಲಾರಿಗಳಿಂದ 1 ಕೋಟಿ ಮೌಲ್ಯದ ಅಡಿಕೆ ವಶಪಡಿಸಿಕೊಳ್ಳಲಾಯಿತು ಮತ್ತು ನಾಲ್ವರನ್ನು ಬಂಧಿಸಲಾಯಿತು.

ಇದೀಗ ಕಳೆದ ಕೆಲವು ಸಮಯಗಳಿಂದ ಅಡಿಕೆ ಅಕ್ರಮ ಸಂಪೂರ್ಣ ತಡೆಯಲಾಗಿದ್ದರೂ ಮತ್ತೆ ಅಕ್ರಮ ಚಟುವಟಿಕೆಗಳು ಬಹುದೊಡ್ಡ ಮಾಫಿಯಾ ಮಾದರಿಯಲ್ಲಿಯೇ ಅಡಿಕೆ ಕಳ್ಳ ಸಾಗಾಣಿಕೆ ನಡೆಯುತ್ತಿದೆ. ಸರ್ಕಾರದ ಕಟ್ಟುನಿಟ್ಟಿನ ಕ್ರಮದ ಕಾರಣದಿಂದ ಅಡಿಕೆ ಕಳ್ಳಸಾಗಾಣಿಕೆಗೆ ಬ್ರೇಕ್‌ ಬೀಳುತ್ತಿದೆ. ಈ ಕಾರಣದಿಂದ ದಕ್ಷಿಣ ಭಾರತದ ಅಡಿಕೆ ಧಾರಣೆ ಬಹುಪಾಲು ಸ್ಥಿರತೆಯ ಹಾದಿಯಲ್ಲಿ ಸದ್ಯ ಇದೆ.

 

 

 

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

6 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

8 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

14 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

15 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

22 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

1 day ago