ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ಧಿ ಹಿನ್ನೆಲೆಯಲ್ಲಿ ಸಿಪಿಸಿಆರ್ಐ ವಿಜ್ಞಾನಿಗಳು ರೋಗ ನಿರೋಧಕ ಗುಣ ಇರುವ ಮರಗಳ ಗುರುತಿಸುವಿಕೆ ಕಾರ್ಯ ಆರಂಭಿಸಿದ್ದಾರೆ.
ಅಡಿಕೆ ಹಳದಿ ಎಲೆರೋಗಕ್ಕೆ ಸುಳ್ಯ ತಾಲೂಕಿನ ಸಂಪಾಜೆ ಹಾಗೂ ಕೊಡಗು ಜಿಲ್ಲೆಯ ಚೆಂಬು ಪ್ರದೇಶವು ಹಾಟ್ಸ್ಫಾಟ್ ಎಂದು ಗುರುತಿಸಲಾಗಿತ್ತು. ಹೀಗಾಗಿ ಈ ಪ್ರದೇಶದಲ್ಲಿ ಈಗ ಮರಗಳ ಗುರುತಿಸುವಿಕೆ ಕಾರ್ಯ ಆರಂಭವಾಗಿದೆ. ಈ ಮರಗಳ ಗುರುತಿಸುವಿಕೆ ಈಗ ವಿಜ್ಞಾನಿಗಳ ಹಾಗೂ ಕೃಷಿಕರ ಪಾಲಿಗೆ ಸವಾಲಿನ ಕೆಲಸವೂ ಹೌದು. ಈ ಹಂತದಲ್ಲಿ ಲೋಪವಾದರೆ ಇಡೀ ಅಧ್ಯಯನ ಹಾಗೂ ರೋಗ ನಿರೋಧಕ ಗಿಡ ಅಭಿವೃದ್ಧಿ ಮೇಲೆಯೂ ಪರಿಣಾಮವಾಗಬಹುದು. ಅಡಿಕೆ ಮರದಲ್ಲಿ ಹಳದಿ ಎಲೆ ರೋಗ ನಿರೋಧಕ ಗುಣ ಇದೆಯೇ ಎಂದು ಪರೀಕ್ಷಿಸುವ ಯಾವುದೇ ವಿಧಾನ ಸದ್ಯಕ್ಕೆ ಲಭ್ಯವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹಳದಿ ಎಲೆ ರೋಗ ನಿರೋಧಕ ಶಕ್ತಿ ಇರುವ ಮರ ಎಂದು ಗುರುತಿಸುವ ವಿಧಾನ ಹೇಗೆ ? ಇದಕ್ಕಾಗಿ ಒಂದಷ್ಟು ಮಾನದಂಡಗಳನ್ನು ವಿಜ್ಞಾನಿಗಳು ಹಾಕಿಕೊಂಡಿದ್ದಾರೆ. ಅದಾದ ಬಳಿಕ ಪ್ರಯೋಗಾಲಯದಲ್ಲಿ ಈ ಬಗ್ಗೆ ಅಧ್ಯಯನ ನಡೆದು ರೋಗ ಇಲ್ಲದೇ ಇರುವುದರ ಬಗ್ಗೆ ಖಚಿತ ಪಡಿಸಿಕೊಳ್ಳಲಾಗುತ್ತದೆ. ಸದ್ಯ ಮರ ಗುರುತಿಸಿಕೊಳ್ಳಲು ವಿಜ್ಞಾನಿಗಳಿ ಕೆಲವೊಂದು ಪಟ್ಟಿ ಮಾಡಿದ್ದಾರೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…