Advertisement
The Rural Mirror ಫಾಲೋಅಪ್

ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ದಿ | ಮರಗಳ ಗುರುತಿಸುವಿಕೆ ಕಾರ್ಯ ಆರಂಭ | ರೋಗ ನಿರೋಧಕ ಮರ ಗುರುತಿಸುವುದು ಹೇಗೆ ?

Share

ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ಧಿ ಹಿನ್ನೆಲೆಯಲ್ಲಿ ಸಿಪಿಸಿಆರ್‌ಐ ವಿಜ್ಞಾನಿಗಳು ರೋಗ ನಿರೋಧಕ ಗುಣ ಇರುವ ಮರಗಳ ಗುರುತಿಸುವಿಕೆ ಕಾರ್ಯ ಆರಂಭಿಸಿದ್ದಾರೆ. 

ಅಡಿಕೆ ಹಳದಿ ಎಲೆರೋಗಕ್ಕೆ ಸುಳ್ಯ ತಾಲೂಕಿನ ಸಂಪಾಜೆ ಹಾಗೂ ಕೊಡಗು ಜಿಲ್ಲೆಯ ಚೆಂಬು ಪ್ರದೇಶವು ಹಾಟ್‌ಸ್ಫಾಟ್‌ ಎಂದು ಗುರುತಿಸಲಾಗಿತ್ತು. ಹೀಗಾಗಿ ಈ ಪ್ರದೇಶದಲ್ಲಿ ಈಗ ಮರಗಳ ಗುರುತಿಸುವಿಕೆ ಕಾರ್ಯ ಆರಂಭವಾಗಿದೆ. ಈ ಮರಗಳ ಗುರುತಿಸುವಿಕೆ ಈಗ ವಿಜ್ಞಾನಿಗಳ ಹಾಗೂ ಕೃಷಿಕರ ಪಾಲಿಗೆ ಸವಾಲಿನ ಕೆಲಸವೂ ಹೌದು. ಈ ಹಂತದಲ್ಲಿ ಲೋಪವಾದರೆ ಇಡೀ ಅಧ್ಯಯನ ಹಾಗೂ ರೋಗ ನಿರೋಧಕ ಗಿಡ ಅಭಿವೃದ್ಧಿ ಮೇಲೆಯೂ ಪರಿಣಾಮವಾಗಬಹುದು. ಅಡಿಕೆ ಮರದಲ್ಲಿ ಹಳದಿ ಎಲೆ ರೋಗ ನಿರೋಧಕ ಗುಣ ಇದೆಯೇ ಎಂದು ಪರೀಕ್ಷಿಸುವ ಯಾವುದೇ ವಿಧಾನ ಸದ್ಯಕ್ಕೆ ಲಭ್ಯವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹಳದಿ ಎಲೆ ರೋಗ ನಿರೋಧಕ ಶಕ್ತಿ ಇರುವ ಮರ ಎಂದು ಗುರುತಿಸುವ ವಿಧಾನ ಹೇಗೆ ? ಇದಕ್ಕಾಗಿ ಒಂದಷ್ಟು ಮಾನದಂಡಗಳನ್ನು ವಿಜ್ಞಾನಿಗಳು ಹಾಕಿಕೊಂಡಿದ್ದಾರೆ. ಅದಾದ ಬಳಿಕ ಪ್ರಯೋಗಾಲಯದಲ್ಲಿ ಈ ಬಗ್ಗೆ ಅಧ್ಯಯನ ನಡೆದು ರೋಗ ಇಲ್ಲದೇ ಇರುವುದರ ಬಗ್ಗೆ ಖಚಿತ ಪಡಿಸಿಕೊಳ್ಳಲಾಗುತ್ತದೆ. ಸದ್ಯ ಮರ ಗುರುತಿಸಿಕೊಳ್ಳಲು ವಿಜ್ಞಾನಿಗಳಿ ಕೆಲವೊಂದು ಪಟ್ಟಿ ಮಾಡಿದ್ದಾರೆ.

  • ಮರಗಳನ್ನು ಹಳದಿ ರೋಗ ಹಾಟ್‌ಸ್ಫಾಟ್‌ ಪ್ರದೇಶದಲ್ಲಿಯೇ  ಆಯ್ದು ಕೊಳ್ಳ ಬೇಕು.ಇದು ಅನೇಕ ವರ್ಷಗಳಿಂದ ಈ ರೋಗದಿಂದ ಬಳಲಿದ ತೋಟವಾಗಿರಬೇಕು
  • ಪರಿಶೀಲಿಸ ಬೇಕಾದ ತೋಟಕ್ಕೆ ಕನಿಷ್ಟ 25 ವರ್ಷಗಳಾದರೂ ಆಗಿರಬೇಕು.
  • ತೋಟದ 90 ಶೇಕಡಾ ಮರಗಳು ರೋಗ ಪೀಡಿತವಾಗಿರಬೇಕು
  • ತೋಟದಲ್ಲಿ ರೋಗ ಕಾಣಿಸಿಕೊಂಡು 15-20 ವರ್ಷಗಳು ಆಗಿರಬೇಕು.
  • ಪರಿಶೀಲಿಸ ಬೇಕಾದ ಮರಗಳಲ್ಲಿ ಅಡಿಕೆ,ಸಿಂಗಾರ ಇರಬೇಕು.
  • ಪರಿಶೀಲಿಸ ಬೇಕಾದ ಮರಗಳಲ್ಲಿ ರೋಗದ ಲಕ್ಷಣಗಳು ಕಾಣಿಸಬಾರದು.ಮೇಲ್ನೋಟಕ್ಕೆ ಆರೋಗ್ಯವಂತ ಮರ ಆಗಿರ ಬೇಕು.
  • ಅಂದರೆ ಸತತವಾಗಿ ರೋಗಕಾರಕಗಳಿಂದ ದಾಳಿಗೆ ಒಳಗಾಗುತ್ತಿದ್ದರೂ ಅದನ್ನು ದೀರ್ಘಾವಧಿಯಲ್ಲಿ ಯಶಸ್ವಿಯಾಗಿ ಎದುರಿಸಿದ ಮರ ಅದಾಗಿರ ಬೇಕು.ಇಂತಹ ಮರಗಳನ್ನು ಗುರುತು ಹಾಕಿ ಪ್ರಥಮ ಹಂತದ ಪರಿಶೀಲನೆಗಾಗಿ ಆಯ್ದು ಕೊಳ್ಳುವುದು.
  • ಸುಮಾರು ಎರಡು ವರ್ಷ ಆಯ್ದು ಕೊಂಡ ಮರಗಳನ್ನು ಹಲವು ವಿಧದ ತಪಾಸಣೆಗೆ ಒಳ ಪಡಿಸಲಿಕ್ಕಿದೆ.ಅದರಲ್ಲಿ ಯಶಸ್ವಿಯಾದ ಮರಗಳನ್ನಷ್ಟೇ ಅಂತಿಮವಾಗಿ ಕೃತಕ ಪರಾಗ ಸ್ಪರ್ಷಕ್ಕಾಗಿ ಆಯ್ದು ಕೊಳ್ಳ ಬೇಕಿದೆ.
  • ಈ ಮಾದರಿಯ ಎಷ್ಟು ಹೆಚ್ಚು ಮರಗಳು ಪರಿಶೀಲನೆಗೆ ಸಿಗುತ್ತವೋ ಅಷ್ಟು ಯೋಜನೆಯ ಯಶಸ್ಸು ಹೆಚ್ಚುತ್ತದೆ.
    ಸಂಪಾಜೆ ,ಚೆಂಬು ಗ್ರಾಮದ ಆಸು ಪಾಸು ಇಂತಹ ಮರಗಳು ಇದ್ದರೆ ಯೋಜನೆಯ ಯಶಸ್ಸಿಗೆ  ಸಹಾಯಕವಾಗುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

19 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

20 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

21 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

22 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago