The Rural Mirror ಫಾಲೋಅಪ್

ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ದಿ | ಮರಗಳ ಗುರುತಿಸುವಿಕೆ ಕಾರ್ಯ ಆರಂಭ | ರೋಗ ನಿರೋಧಕ ಮರ ಗುರುತಿಸುವುದು ಹೇಗೆ ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ಧಿ ಹಿನ್ನೆಲೆಯಲ್ಲಿ ಸಿಪಿಸಿಆರ್‌ಐ ವಿಜ್ಞಾನಿಗಳು ರೋಗ ನಿರೋಧಕ ಗುಣ ಇರುವ ಮರಗಳ ಗುರುತಿಸುವಿಕೆ ಕಾರ್ಯ ಆರಂಭಿಸಿದ್ದಾರೆ. 

Advertisement

ಅಡಿಕೆ ಹಳದಿ ಎಲೆರೋಗಕ್ಕೆ ಸುಳ್ಯ ತಾಲೂಕಿನ ಸಂಪಾಜೆ ಹಾಗೂ ಕೊಡಗು ಜಿಲ್ಲೆಯ ಚೆಂಬು ಪ್ರದೇಶವು ಹಾಟ್‌ಸ್ಫಾಟ್‌ ಎಂದು ಗುರುತಿಸಲಾಗಿತ್ತು. ಹೀಗಾಗಿ ಈ ಪ್ರದೇಶದಲ್ಲಿ ಈಗ ಮರಗಳ ಗುರುತಿಸುವಿಕೆ ಕಾರ್ಯ ಆರಂಭವಾಗಿದೆ. ಈ ಮರಗಳ ಗುರುತಿಸುವಿಕೆ ಈಗ ವಿಜ್ಞಾನಿಗಳ ಹಾಗೂ ಕೃಷಿಕರ ಪಾಲಿಗೆ ಸವಾಲಿನ ಕೆಲಸವೂ ಹೌದು. ಈ ಹಂತದಲ್ಲಿ ಲೋಪವಾದರೆ ಇಡೀ ಅಧ್ಯಯನ ಹಾಗೂ ರೋಗ ನಿರೋಧಕ ಗಿಡ ಅಭಿವೃದ್ಧಿ ಮೇಲೆಯೂ ಪರಿಣಾಮವಾಗಬಹುದು. ಅಡಿಕೆ ಮರದಲ್ಲಿ ಹಳದಿ ಎಲೆ ರೋಗ ನಿರೋಧಕ ಗುಣ ಇದೆಯೇ ಎಂದು ಪರೀಕ್ಷಿಸುವ ಯಾವುದೇ ವಿಧಾನ ಸದ್ಯಕ್ಕೆ ಲಭ್ಯವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹಳದಿ ಎಲೆ ರೋಗ ನಿರೋಧಕ ಶಕ್ತಿ ಇರುವ ಮರ ಎಂದು ಗುರುತಿಸುವ ವಿಧಾನ ಹೇಗೆ ? ಇದಕ್ಕಾಗಿ ಒಂದಷ್ಟು ಮಾನದಂಡಗಳನ್ನು ವಿಜ್ಞಾನಿಗಳು ಹಾಕಿಕೊಂಡಿದ್ದಾರೆ. ಅದಾದ ಬಳಿಕ ಪ್ರಯೋಗಾಲಯದಲ್ಲಿ ಈ ಬಗ್ಗೆ ಅಧ್ಯಯನ ನಡೆದು ರೋಗ ಇಲ್ಲದೇ ಇರುವುದರ ಬಗ್ಗೆ ಖಚಿತ ಪಡಿಸಿಕೊಳ್ಳಲಾಗುತ್ತದೆ. ಸದ್ಯ ಮರ ಗುರುತಿಸಿಕೊಳ್ಳಲು ವಿಜ್ಞಾನಿಗಳಿ ಕೆಲವೊಂದು ಪಟ್ಟಿ ಮಾಡಿದ್ದಾರೆ.

  • ಮರಗಳನ್ನು ಹಳದಿ ರೋಗ ಹಾಟ್‌ಸ್ಫಾಟ್‌ ಪ್ರದೇಶದಲ್ಲಿಯೇ  ಆಯ್ದು ಕೊಳ್ಳ ಬೇಕು.ಇದು ಅನೇಕ ವರ್ಷಗಳಿಂದ ಈ ರೋಗದಿಂದ ಬಳಲಿದ ತೋಟವಾಗಿರಬೇಕು
  • ಪರಿಶೀಲಿಸ ಬೇಕಾದ ತೋಟಕ್ಕೆ ಕನಿಷ್ಟ 25 ವರ್ಷಗಳಾದರೂ ಆಗಿರಬೇಕು.
  • ತೋಟದ 90 ಶೇಕಡಾ ಮರಗಳು ರೋಗ ಪೀಡಿತವಾಗಿರಬೇಕು
  • ತೋಟದಲ್ಲಿ ರೋಗ ಕಾಣಿಸಿಕೊಂಡು 15-20 ವರ್ಷಗಳು ಆಗಿರಬೇಕು.
  • ಪರಿಶೀಲಿಸ ಬೇಕಾದ ಮರಗಳಲ್ಲಿ ಅಡಿಕೆ,ಸಿಂಗಾರ ಇರಬೇಕು.
  • ಪರಿಶೀಲಿಸ ಬೇಕಾದ ಮರಗಳಲ್ಲಿ ರೋಗದ ಲಕ್ಷಣಗಳು ಕಾಣಿಸಬಾರದು.ಮೇಲ್ನೋಟಕ್ಕೆ ಆರೋಗ್ಯವಂತ ಮರ ಆಗಿರ ಬೇಕು.
  • ಅಂದರೆ ಸತತವಾಗಿ ರೋಗಕಾರಕಗಳಿಂದ ದಾಳಿಗೆ ಒಳಗಾಗುತ್ತಿದ್ದರೂ ಅದನ್ನು ದೀರ್ಘಾವಧಿಯಲ್ಲಿ ಯಶಸ್ವಿಯಾಗಿ ಎದುರಿಸಿದ ಮರ ಅದಾಗಿರ ಬೇಕು.ಇಂತಹ ಮರಗಳನ್ನು ಗುರುತು ಹಾಕಿ ಪ್ರಥಮ ಹಂತದ ಪರಿಶೀಲನೆಗಾಗಿ ಆಯ್ದು ಕೊಳ್ಳುವುದು.
  • ಸುಮಾರು ಎರಡು ವರ್ಷ ಆಯ್ದು ಕೊಂಡ ಮರಗಳನ್ನು ಹಲವು ವಿಧದ ತಪಾಸಣೆಗೆ ಒಳ ಪಡಿಸಲಿಕ್ಕಿದೆ.ಅದರಲ್ಲಿ ಯಶಸ್ವಿಯಾದ ಮರಗಳನ್ನಷ್ಟೇ ಅಂತಿಮವಾಗಿ ಕೃತಕ ಪರಾಗ ಸ್ಪರ್ಷಕ್ಕಾಗಿ ಆಯ್ದು ಕೊಳ್ಳ ಬೇಕಿದೆ.
  • ಈ ಮಾದರಿಯ ಎಷ್ಟು ಹೆಚ್ಚು ಮರಗಳು ಪರಿಶೀಲನೆಗೆ ಸಿಗುತ್ತವೋ ಅಷ್ಟು ಯೋಜನೆಯ ಯಶಸ್ಸು ಹೆಚ್ಚುತ್ತದೆ.
    ಸಂಪಾಜೆ ,ಚೆಂಬು ಗ್ರಾಮದ ಆಸು ಪಾಸು ಇಂತಹ ಮರಗಳು ಇದ್ದರೆ ಯೋಜನೆಯ ಯಶಸ್ಸಿಗೆ  ಸಹಾಯಕವಾಗುತ್ತದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

2 hours ago

ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

3 hours ago

ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ

ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…

3 hours ago

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ

ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…

11 hours ago

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…

22 hours ago

ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…

22 hours ago