Advertisement
The Rural Mirror ಫಾಲೋಅಪ್

ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ದಿ | ಮರಗಳ ಗುರುತಿಸುವಿಕೆ ಕಾರ್ಯ ಆರಂಭ | ರೋಗ ನಿರೋಧಕ ಮರ ಗುರುತಿಸುವುದು ಹೇಗೆ ?

Share

ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ಧಿ ಹಿನ್ನೆಲೆಯಲ್ಲಿ ಸಿಪಿಸಿಆರ್‌ಐ ವಿಜ್ಞಾನಿಗಳು ರೋಗ ನಿರೋಧಕ ಗುಣ ಇರುವ ಮರಗಳ ಗುರುತಿಸುವಿಕೆ ಕಾರ್ಯ ಆರಂಭಿಸಿದ್ದಾರೆ. 

ಅಡಿಕೆ ಹಳದಿ ಎಲೆರೋಗಕ್ಕೆ ಸುಳ್ಯ ತಾಲೂಕಿನ ಸಂಪಾಜೆ ಹಾಗೂ ಕೊಡಗು ಜಿಲ್ಲೆಯ ಚೆಂಬು ಪ್ರದೇಶವು ಹಾಟ್‌ಸ್ಫಾಟ್‌ ಎಂದು ಗುರುತಿಸಲಾಗಿತ್ತು. ಹೀಗಾಗಿ ಈ ಪ್ರದೇಶದಲ್ಲಿ ಈಗ ಮರಗಳ ಗುರುತಿಸುವಿಕೆ ಕಾರ್ಯ ಆರಂಭವಾಗಿದೆ. ಈ ಮರಗಳ ಗುರುತಿಸುವಿಕೆ ಈಗ ವಿಜ್ಞಾನಿಗಳ ಹಾಗೂ ಕೃಷಿಕರ ಪಾಲಿಗೆ ಸವಾಲಿನ ಕೆಲಸವೂ ಹೌದು. ಈ ಹಂತದಲ್ಲಿ ಲೋಪವಾದರೆ ಇಡೀ ಅಧ್ಯಯನ ಹಾಗೂ ರೋಗ ನಿರೋಧಕ ಗಿಡ ಅಭಿವೃದ್ಧಿ ಮೇಲೆಯೂ ಪರಿಣಾಮವಾಗಬಹುದು. ಅಡಿಕೆ ಮರದಲ್ಲಿ ಹಳದಿ ಎಲೆ ರೋಗ ನಿರೋಧಕ ಗುಣ ಇದೆಯೇ ಎಂದು ಪರೀಕ್ಷಿಸುವ ಯಾವುದೇ ವಿಧಾನ ಸದ್ಯಕ್ಕೆ ಲಭ್ಯವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹಳದಿ ಎಲೆ ರೋಗ ನಿರೋಧಕ ಶಕ್ತಿ ಇರುವ ಮರ ಎಂದು ಗುರುತಿಸುವ ವಿಧಾನ ಹೇಗೆ ? ಇದಕ್ಕಾಗಿ ಒಂದಷ್ಟು ಮಾನದಂಡಗಳನ್ನು ವಿಜ್ಞಾನಿಗಳು ಹಾಕಿಕೊಂಡಿದ್ದಾರೆ. ಅದಾದ ಬಳಿಕ ಪ್ರಯೋಗಾಲಯದಲ್ಲಿ ಈ ಬಗ್ಗೆ ಅಧ್ಯಯನ ನಡೆದು ರೋಗ ಇಲ್ಲದೇ ಇರುವುದರ ಬಗ್ಗೆ ಖಚಿತ ಪಡಿಸಿಕೊಳ್ಳಲಾಗುತ್ತದೆ. ಸದ್ಯ ಮರ ಗುರುತಿಸಿಕೊಳ್ಳಲು ವಿಜ್ಞಾನಿಗಳಿ ಕೆಲವೊಂದು ಪಟ್ಟಿ ಮಾಡಿದ್ದಾರೆ.

  • ಮರಗಳನ್ನು ಹಳದಿ ರೋಗ ಹಾಟ್‌ಸ್ಫಾಟ್‌ ಪ್ರದೇಶದಲ್ಲಿಯೇ  ಆಯ್ದು ಕೊಳ್ಳ ಬೇಕು.ಇದು ಅನೇಕ ವರ್ಷಗಳಿಂದ ಈ ರೋಗದಿಂದ ಬಳಲಿದ ತೋಟವಾಗಿರಬೇಕು
  • ಪರಿಶೀಲಿಸ ಬೇಕಾದ ತೋಟಕ್ಕೆ ಕನಿಷ್ಟ 25 ವರ್ಷಗಳಾದರೂ ಆಗಿರಬೇಕು.
  • ತೋಟದ 90 ಶೇಕಡಾ ಮರಗಳು ರೋಗ ಪೀಡಿತವಾಗಿರಬೇಕು
  • ತೋಟದಲ್ಲಿ ರೋಗ ಕಾಣಿಸಿಕೊಂಡು 15-20 ವರ್ಷಗಳು ಆಗಿರಬೇಕು.
  • ಪರಿಶೀಲಿಸ ಬೇಕಾದ ಮರಗಳಲ್ಲಿ ಅಡಿಕೆ,ಸಿಂಗಾರ ಇರಬೇಕು.
  • ಪರಿಶೀಲಿಸ ಬೇಕಾದ ಮರಗಳಲ್ಲಿ ರೋಗದ ಲಕ್ಷಣಗಳು ಕಾಣಿಸಬಾರದು.ಮೇಲ್ನೋಟಕ್ಕೆ ಆರೋಗ್ಯವಂತ ಮರ ಆಗಿರ ಬೇಕು.
  • ಅಂದರೆ ಸತತವಾಗಿ ರೋಗಕಾರಕಗಳಿಂದ ದಾಳಿಗೆ ಒಳಗಾಗುತ್ತಿದ್ದರೂ ಅದನ್ನು ದೀರ್ಘಾವಧಿಯಲ್ಲಿ ಯಶಸ್ವಿಯಾಗಿ ಎದುರಿಸಿದ ಮರ ಅದಾಗಿರ ಬೇಕು.ಇಂತಹ ಮರಗಳನ್ನು ಗುರುತು ಹಾಕಿ ಪ್ರಥಮ ಹಂತದ ಪರಿಶೀಲನೆಗಾಗಿ ಆಯ್ದು ಕೊಳ್ಳುವುದು.
  • ಸುಮಾರು ಎರಡು ವರ್ಷ ಆಯ್ದು ಕೊಂಡ ಮರಗಳನ್ನು ಹಲವು ವಿಧದ ತಪಾಸಣೆಗೆ ಒಳ ಪಡಿಸಲಿಕ್ಕಿದೆ.ಅದರಲ್ಲಿ ಯಶಸ್ವಿಯಾದ ಮರಗಳನ್ನಷ್ಟೇ ಅಂತಿಮವಾಗಿ ಕೃತಕ ಪರಾಗ ಸ್ಪರ್ಷಕ್ಕಾಗಿ ಆಯ್ದು ಕೊಳ್ಳ ಬೇಕಿದೆ.
  • ಈ ಮಾದರಿಯ ಎಷ್ಟು ಹೆಚ್ಚು ಮರಗಳು ಪರಿಶೀಲನೆಗೆ ಸಿಗುತ್ತವೋ ಅಷ್ಟು ಯೋಜನೆಯ ಯಶಸ್ಸು ಹೆಚ್ಚುತ್ತದೆ.
    ಸಂಪಾಜೆ ,ಚೆಂಬು ಗ್ರಾಮದ ಆಸು ಪಾಸು ಇಂತಹ ಮರಗಳು ಇದ್ದರೆ ಯೋಜನೆಯ ಯಶಸ್ಸಿಗೆ  ಸಹಾಯಕವಾಗುತ್ತದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 hour ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

3 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

5 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

6 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

18 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

21 hours ago