ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ಧಿ ಹಿನ್ನೆಲೆಯಲ್ಲಿ ಸಿಪಿಸಿಆರ್ಐ ವಿಜ್ಞಾನಿಗಳು ರೋಗ ನಿರೋಧಕ ಗುಣ ಇರುವ ಮರಗಳ ಗುರುತಿಸುವಿಕೆ ಕಾರ್ಯ ಆರಂಭಿಸಿದ್ದಾರೆ.
ಅಡಿಕೆ ಹಳದಿ ಎಲೆರೋಗಕ್ಕೆ ಸುಳ್ಯ ತಾಲೂಕಿನ ಸಂಪಾಜೆ ಹಾಗೂ ಕೊಡಗು ಜಿಲ್ಲೆಯ ಚೆಂಬು ಪ್ರದೇಶವು ಹಾಟ್ಸ್ಫಾಟ್ ಎಂದು ಗುರುತಿಸಲಾಗಿತ್ತು. ಹೀಗಾಗಿ ಈ ಪ್ರದೇಶದಲ್ಲಿ ಈಗ ಮರಗಳ ಗುರುತಿಸುವಿಕೆ ಕಾರ್ಯ ಆರಂಭವಾಗಿದೆ. ಈ ಮರಗಳ ಗುರುತಿಸುವಿಕೆ ಈಗ ವಿಜ್ಞಾನಿಗಳ ಹಾಗೂ ಕೃಷಿಕರ ಪಾಲಿಗೆ ಸವಾಲಿನ ಕೆಲಸವೂ ಹೌದು. ಈ ಹಂತದಲ್ಲಿ ಲೋಪವಾದರೆ ಇಡೀ ಅಧ್ಯಯನ ಹಾಗೂ ರೋಗ ನಿರೋಧಕ ಗಿಡ ಅಭಿವೃದ್ಧಿ ಮೇಲೆಯೂ ಪರಿಣಾಮವಾಗಬಹುದು. ಅಡಿಕೆ ಮರದಲ್ಲಿ ಹಳದಿ ಎಲೆ ರೋಗ ನಿರೋಧಕ ಗುಣ ಇದೆಯೇ ಎಂದು ಪರೀಕ್ಷಿಸುವ ಯಾವುದೇ ವಿಧಾನ ಸದ್ಯಕ್ಕೆ ಲಭ್ಯವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹಳದಿ ಎಲೆ ರೋಗ ನಿರೋಧಕ ಶಕ್ತಿ ಇರುವ ಮರ ಎಂದು ಗುರುತಿಸುವ ವಿಧಾನ ಹೇಗೆ ? ಇದಕ್ಕಾಗಿ ಒಂದಷ್ಟು ಮಾನದಂಡಗಳನ್ನು ವಿಜ್ಞಾನಿಗಳು ಹಾಕಿಕೊಂಡಿದ್ದಾರೆ. ಅದಾದ ಬಳಿಕ ಪ್ರಯೋಗಾಲಯದಲ್ಲಿ ಈ ಬಗ್ಗೆ ಅಧ್ಯಯನ ನಡೆದು ರೋಗ ಇಲ್ಲದೇ ಇರುವುದರ ಬಗ್ಗೆ ಖಚಿತ ಪಡಿಸಿಕೊಳ್ಳಲಾಗುತ್ತದೆ. ಸದ್ಯ ಮರ ಗುರುತಿಸಿಕೊಳ್ಳಲು ವಿಜ್ಞಾನಿಗಳಿ ಕೆಲವೊಂದು ಪಟ್ಟಿ ಮಾಡಿದ್ದಾರೆ.
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…