ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ಧಿ ಹಿನ್ನೆಲೆಯಲ್ಲಿ ಸಿಪಿಸಿಆರ್ಐ ವಿಜ್ಞಾನಿಗಳು ರೋಗ ನಿರೋಧಕ ಗುಣ ಇರುವ ಮರಗಳ ಗುರುತಿಸುವಿಕೆ ಕಾರ್ಯ ಆರಂಭಿಸಿದ್ದಾರೆ.
ಅಡಿಕೆ ಹಳದಿ ಎಲೆರೋಗಕ್ಕೆ ಸುಳ್ಯ ತಾಲೂಕಿನ ಸಂಪಾಜೆ ಹಾಗೂ ಕೊಡಗು ಜಿಲ್ಲೆಯ ಚೆಂಬು ಪ್ರದೇಶವು ಹಾಟ್ಸ್ಫಾಟ್ ಎಂದು ಗುರುತಿಸಲಾಗಿತ್ತು. ಹೀಗಾಗಿ ಈ ಪ್ರದೇಶದಲ್ಲಿ ಈಗ ಮರಗಳ ಗುರುತಿಸುವಿಕೆ ಕಾರ್ಯ ಆರಂಭವಾಗಿದೆ. ಈ ಮರಗಳ ಗುರುತಿಸುವಿಕೆ ಈಗ ವಿಜ್ಞಾನಿಗಳ ಹಾಗೂ ಕೃಷಿಕರ ಪಾಲಿಗೆ ಸವಾಲಿನ ಕೆಲಸವೂ ಹೌದು. ಈ ಹಂತದಲ್ಲಿ ಲೋಪವಾದರೆ ಇಡೀ ಅಧ್ಯಯನ ಹಾಗೂ ರೋಗ ನಿರೋಧಕ ಗಿಡ ಅಭಿವೃದ್ಧಿ ಮೇಲೆಯೂ ಪರಿಣಾಮವಾಗಬಹುದು. ಅಡಿಕೆ ಮರದಲ್ಲಿ ಹಳದಿ ಎಲೆ ರೋಗ ನಿರೋಧಕ ಗುಣ ಇದೆಯೇ ಎಂದು ಪರೀಕ್ಷಿಸುವ ಯಾವುದೇ ವಿಧಾನ ಸದ್ಯಕ್ಕೆ ಲಭ್ಯವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹಳದಿ ಎಲೆ ರೋಗ ನಿರೋಧಕ ಶಕ್ತಿ ಇರುವ ಮರ ಎಂದು ಗುರುತಿಸುವ ವಿಧಾನ ಹೇಗೆ ? ಇದಕ್ಕಾಗಿ ಒಂದಷ್ಟು ಮಾನದಂಡಗಳನ್ನು ವಿಜ್ಞಾನಿಗಳು ಹಾಕಿಕೊಂಡಿದ್ದಾರೆ. ಅದಾದ ಬಳಿಕ ಪ್ರಯೋಗಾಲಯದಲ್ಲಿ ಈ ಬಗ್ಗೆ ಅಧ್ಯಯನ ನಡೆದು ರೋಗ ಇಲ್ಲದೇ ಇರುವುದರ ಬಗ್ಗೆ ಖಚಿತ ಪಡಿಸಿಕೊಳ್ಳಲಾಗುತ್ತದೆ. ಸದ್ಯ ಮರ ಗುರುತಿಸಿಕೊಳ್ಳಲು ವಿಜ್ಞಾನಿಗಳಿ ಕೆಲವೊಂದು ಪಟ್ಟಿ ಮಾಡಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…