ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ಧಿ ಹಿನ್ನೆಲೆಯಲ್ಲಿ ಸಿಪಿಸಿಆರ್ಐ ವಿಜ್ಞಾನಿಗಳು ರೋಗ ನಿರೋಧಕ ಗುಣ ಇರುವ ಮರಗಳ ಗುರುತಿಸುವಿಕೆ ಕಾರ್ಯ ಆರಂಭಿಸಿದ್ದಾರೆ.
ಅಡಿಕೆ ಹಳದಿ ಎಲೆರೋಗಕ್ಕೆ ಸುಳ್ಯ ತಾಲೂಕಿನ ಸಂಪಾಜೆ ಹಾಗೂ ಕೊಡಗು ಜಿಲ್ಲೆಯ ಚೆಂಬು ಪ್ರದೇಶವು ಹಾಟ್ಸ್ಫಾಟ್ ಎಂದು ಗುರುತಿಸಲಾಗಿತ್ತು. ಹೀಗಾಗಿ ಈ ಪ್ರದೇಶದಲ್ಲಿ ಈಗ ಮರಗಳ ಗುರುತಿಸುವಿಕೆ ಕಾರ್ಯ ಆರಂಭವಾಗಿದೆ. ಈ ಮರಗಳ ಗುರುತಿಸುವಿಕೆ ಈಗ ವಿಜ್ಞಾನಿಗಳ ಹಾಗೂ ಕೃಷಿಕರ ಪಾಲಿಗೆ ಸವಾಲಿನ ಕೆಲಸವೂ ಹೌದು. ಈ ಹಂತದಲ್ಲಿ ಲೋಪವಾದರೆ ಇಡೀ ಅಧ್ಯಯನ ಹಾಗೂ ರೋಗ ನಿರೋಧಕ ಗಿಡ ಅಭಿವೃದ್ಧಿ ಮೇಲೆಯೂ ಪರಿಣಾಮವಾಗಬಹುದು. ಅಡಿಕೆ ಮರದಲ್ಲಿ ಹಳದಿ ಎಲೆ ರೋಗ ನಿರೋಧಕ ಗುಣ ಇದೆಯೇ ಎಂದು ಪರೀಕ್ಷಿಸುವ ಯಾವುದೇ ವಿಧಾನ ಸದ್ಯಕ್ಕೆ ಲಭ್ಯವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹಳದಿ ಎಲೆ ರೋಗ ನಿರೋಧಕ ಶಕ್ತಿ ಇರುವ ಮರ ಎಂದು ಗುರುತಿಸುವ ವಿಧಾನ ಹೇಗೆ ? ಇದಕ್ಕಾಗಿ ಒಂದಷ್ಟು ಮಾನದಂಡಗಳನ್ನು ವಿಜ್ಞಾನಿಗಳು ಹಾಕಿಕೊಂಡಿದ್ದಾರೆ. ಅದಾದ ಬಳಿಕ ಪ್ರಯೋಗಾಲಯದಲ್ಲಿ ಈ ಬಗ್ಗೆ ಅಧ್ಯಯನ ನಡೆದು ರೋಗ ಇಲ್ಲದೇ ಇರುವುದರ ಬಗ್ಗೆ ಖಚಿತ ಪಡಿಸಿಕೊಳ್ಳಲಾಗುತ್ತದೆ. ಸದ್ಯ ಮರ ಗುರುತಿಸಿಕೊಳ್ಳಲು ವಿಜ್ಞಾನಿಗಳಿ ಕೆಲವೊಂದು ಪಟ್ಟಿ ಮಾಡಿದ್ದಾರೆ.
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…