Advertisement
ಸುದ್ದಿಗಳು

ಅಡಿಕೆ ಹಳದಿ ಎಲೆರೋಗ | ಸಂಶೋಧನೆ- ಅಧ್ಯಯನ-ಪರಿಹಾರ | ಕೃಷಿಕರಿಂದ ಹೆಚ್ಚಿದ ಒತ್ತಡ |

Share

ಅಡಿಕೆ ಹಳದಿ ಎಲೆರೋಗ (Arecanut Yellow Leaf Disease )ವಿಸ್ತರಣೆಯಾಗುತ್ತಿದೆ. ಹೀಗಾಗಿ ಕೃಷಿಕರ ಆತಂಕ ಹೆಚ್ಚಾಗುತ್ತಿದೆ. ಶೃಂಗೇರಿ, ಕೊಪ್ಪ, ಸಂಪಾಜೆಯಲ್ಲಿ ಮಾತ್ರವೇ ಇದ್ದ ಹಳದಿ ಎಲೆರೋಗ ಈಗ ವಿಸ್ತರಣೆಯಾಗುತ್ತಲೇ ಇದೆ. ಈ ಕಾರಣದಿಂದ ಸರ್ಕಾರ ಹಾಗೂ ಸಂಸ್ಥೆಗಳು ಈ ಬಗ್ಗೆ ಸರಿಯಾದ ಸಂಶೋಧನೆ , ಅಧ್ಯಯನ ಹಾಗೂ ಪರಿಹಾರ ಮಾರ್ಗಗಳ ಬಗ್ಗೆ ತಕ್ಷಣವೇ ಕ್ರಮ ಕೈಗೊಳ್ಳಲು ಕೃಷಿಕರಿಂದಲೇ ಒತ್ತಡ ಹೆಚ್ಚಿದೆ.

Advertisement
Advertisement
Advertisement
Advertisement

ಅಡಿಕೆ ಹಳದಿ ಎಲೆರೋಗದ ಸಂಶೋಧನೆ ಅನೇಕ ಸಮಯಗಳಿಂದ ಸಿಪಿಸಿಆರ್‌ ಐ ವಿಜ್ಞಾನಿಗಳು ಹಾಗೂ ಇತರ ವಿಜ್ಞಾನಿಗಳು ನಡೆಸುತ್ತಿದ್ದರೂ ಇಂದಿಗೂ ಸರಿಯಾದ ಕಾರಣ ತಿಳಿದಿಲ್ಲ. ಸಿಪಿಸಿಆರ್‌ ಐ ವಿಜ್ಞಾನಿಗಳು ಫೈಟೋಪ್ಲಾಸ್ಮಾ ಎಂಬ ವೈರಸ್‌ ಕಾರಣ ಎಂದು ಈ ನೆಲೆಯಲ್ಲಿ ಅಧ್ಯಯನ ಮುಂದುವರಿಸುತ್ತಾ, ಈಗ ರೋಗ ನಿರೋಧಕ ತಳಿಯ ಅಭಿವೃದ್ಧಿ ಕಡೆಗೆ ಗಮನಹರಿಸಿದ್ದಾರೆ. ಇದೇ ವೇಳೆ ಫೈಟೋಪ್ಲಾಸ್ಮಾ ಕಾರಣವಲ್ಲ ಅದಕ್ಕೆ ಬೇರೆಯೇ ಕಾರಣ ಎಂಬ ಇನ್ನೊಂದು ವಾದವೂ ಇದೆ. ಹೀಗಾಗಿ  ಅಡಿಕೆ ಹಳದಿ ಎಲೆರೋಗ ಆರಂಭವಾಗಿ ಸುಮಾರು 60 ವರ್ಷ ಕಳೆದರೂ ಸರಿಯಾದ ಒಮ್ಮತದ ನಿರ್ಧಾರಗಳು ಸಾಧ್ಯವಾಗಿಲ್ಲ.

Advertisement

ಇದೀಗ ಕೃಷಿಕರು ಹಳದಿ ಎಲೆರೋಗಕ್ಕೆ ಸೂಕ್ತ ಪರಿಹಾರ ಹಾಗೂ ಅಧ್ಯಯನ ನಡೆಸಲು ಒತ್ತಾಯ ಮಾಡುತ್ತಿದ್ದಾರೆ. ಸರ್ಕಾರಕ್ಕೆ ಒತ್ತಾಯ ಮಾಡುವುದರ ಜೊತೆಗೆ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಮೂಲಕವೂ ಒತ್ತಾಯ ಮಾಡಲು ಆರಂಭಿಸಿದ್ದಾರೆ. ಕಳೆದ ವರ್ಷದ ಕ್ಯಾಂಪ್ಕೋ ಮಹಾಸಭೆಯಲ್ಲಿ ಅಡಿಕೆ ಹಳೆದಿ ಎಲೆರೋಗದ ಬಗ್ಗೆ ಪ್ರಸ್ತಾಪವಾಗಿದ್ದರೂ ಯಾವುದೇ ಗಮನಾರ್ಹವಾದ ಬೆಳವಣಿಗೆಯಾಗಿರಲಿಲ್ಲ. ಈ ಬಾರಿ ಮತ್ತೆ ಕೃಷಿಕರು ಸಂಘಟಿತರಾಗಿ ಕ್ಯಾಂಪ್ಕೋ ಕೂಡಾ ಅಡಿಕೆ ಹಳದಿ ಎಲೆರೋಗದ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು. ಕ್ಯಾಂಪ್ಕೋ ಮೂಲಕವೇ ಆರಂಭವಾದ ಸಂಶೋಧನಾ ವಿಭಾಗವನ್ನು ಬಲಗೊಳಿಸುವುದು ಹಾಗೂ ಈ ಮೂಲಕ ಕೇಂದ್ರ ಸರ್ಕಾರದ ಕೃಷಿ ಸಂಸ್ಥೆಯಾದ ಸಿಪಿಸಿಆರ್‌ಐ ಗೆ ನೆರವು ನೀಡಬೇಕು ಎನ್ನುವ ಒತ್ತಾಯ ಆರಂಭವಾಗಿದೆ.

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವೂ ಅಡಿಕೆ ಹಳದಿ ರೋಗದ ಹಿನ್ನೆಲೆಯಲ್ಲಿ ಕಳೆದ ಬಾರಿಯ ಕ್ಯಾಂಪ್ಕೋ ಮಹಾಸಭೆಯಲ್ಲೂ ವಿಷಯ ಪ್ರಸ್ತಾಪಿಸಿತ್ತು. ಈ ಬಾರಿ ಕೂಡಾ ಅಡಿಕೆ ಹಳದಿ ಎಲೆರೋಗದ ಬಗ್ಗೆ ಸೂಕ್ತ ನೆರವು ನೀಡಲು ಒತ್ತಾಯಿಸಲಿದೆ. ಅದರ ಜೊತೆಗೆ ಅಡಿಕೆ ಬೆಳೆಗಾರರ ಸಂಘವು ಸರ್ಕಾರವನ್ನೂ ಒತ್ತಾಯಿಸಿದೆ. ಹಳದಿ ಎಲೆರೋಗ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನೂ ಸರ್ಕಾರದ ಗಮನಕ್ಕೆ ತಂದಿದೆ ಎಂದು ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್‌ ಕಿನಿಲ ಹೇಳಿದ್ದಾರೆ.

Advertisement

ಅಡಿಕೆ ಹಳದಿ ಎಲೆರೋಗ ವ್ಯಾಪಕವಾಗುತ್ತಿರುವ ಈ ಸಂದರ್ಭದಲ್ಲಿ ಸೂಕ್ತವಾದ ಕ್ರಮಗಳು ಅನಿವಾರ್ಯವಾಗಿದೆ. ಈ ಕಾರಣದಿಂದ ಕೃಷಿಕರ ಸಂಸ್ಥೆಯಾದ ಕ್ಯಾಂಪ್ಕೋ ಸಹಿತ ಎಲ್ಲಾ ಸಹಕಾರಿ ಸಂಸ್ಥೆಗಳು ಮತ್ತು ಸರ್ಕಾರವು ಕೂಡಾ ಪರಿಹಾರ ಮಾರ್ಗದ ಕಡೆಗೆ ನೆರವು ನೀಡಬೇಕಿದೆ ಎಂದು ಕೃಷಿಕರು ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

4 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago